15.86 ಕೋಟಿ ರೂ. ಕಾಮಗಾರಿಗೆ ಚಾಲನೆ
Team Udayavani, Nov 12, 2019, 4:48 PM IST
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ಎಂ . ಶ್ರೀನಿವಾಸ್ 15.86 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ನಗರದ ಹಳೇ ಎಂ.ಸಿ.ರಸ್ತೆಯ ಕಿರಗಂದೂರು, ಕಲ್ಲಹಳ್ಳಿ, ಹೊಳಲು ಸರ್ಕಲ್ ನಿಂದ 7.60 ಕಿ.ಮೀ.ವರೆಗೆ ಲೋಕೋ ಪಯೋಗಿ ಇಲಾಖೆ ಅನುದಾನ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ, ಕಾವೇರಿ ನೀರಾವರಿ ನಿಗಮದ ವತಿಯಿಂದ ತಾಲ್ಲೂಕಿನ ಎಚ್.ಕೋಡಿಹಳ್ಳಿ ಗ್ರಾಮದಲ್ಲಿ 48 ಲಕ್ಷ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ, ತಾಲ್ಲೂಕಿನ ಡಣಾಯಕನಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನ 6.38 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದರು.
ಹಳೇನಗರದ ರಸ್ತೆ ಅಭಿವೃದ್ಧಿಪಡಿಸುವುದು ಬಹುದಿನದ ಕನಸಾಗಿತ್ತು. ಹಿಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಒತ್ತಡ ಹೇರಿ 10 ಕೋಟಿ ರೂ.ಗೆ ಮನವಿ ಮಾಡಿದೆವು. ಆ ಅನುದಾನ ಬಿಡುಗಡೆಯಾಗಿದ್ದು ಹೊಳಲು ರಸ್ತೆಯಿಂದ ಕಲ್ಲಹಳ್ಳಿ-ಕಿರ ಗಂದೂರು ವೃತ್ತದವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಮೊದಲು ಈ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ. ರಸ್ತೆಯನ್ನು ಅಭಿವೃದ್ಧಿಪಡಿಸುತ್ತಿರುವುದರಿಂದ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು. ನಗರಸಭಾ ಸದಸ್ಯರಾದ ರವಿ, ಶಿವಲಿಂಗು, ಮುಖಂಡರಾದ ತ್ಯಾಗ ರಾಜು, ಬಸವರಾಜ್, ರಾಜು, ನಾಗ ರಾಜು, ಶಿವರಾಜ್, ಚಂದ್ರೇಗೌಡ, ರಾಮಕೃಷ್ಣ, ಶಿವಣ್ಣ, ಕೆ.ಎಂ.ಶಂಕರೇ ಗೌಡ, ಕೃಷ್ಣಪ್ಪ, ರಮೇಶ್, ಶ್ರೀನಿವಾಸ್, ನವೀನ್, ರಾಜು, ಬಸವೇಗೌಡ, ಎಂಜಿನಿಯರ್ ಚಿನ್ನ ಮಾರೇಗೌಡ, ಗುತ್ತಿಗೆದಾರ ಪಿ.ಬಿ.ಕರಿಗೌಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್