4 ವರ್ಷದಲ್ಲಿ 243 ರೈತರ ಆತ್ಮಹತ್ಯೆ

ಅವ್ಯವಸ್ಥೆ ಗೂಡಾಗಿರುವ ಸಾಲಮನ್ನಾ • ಮಣ್ಣು ನಂಬಿದ ಜನರ ಬಾಯಿಗೆ ಮಣ್ಣು

Team Udayavani, Jun 26, 2019, 12:59 PM IST

mandya-tdy-1..

ಮಂಡ್ಯ: ಕಳೆದ ನಾಲ್ಕು ವರ್ಷಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 243 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದಿಗೂ ರೈತರ ಆತ್ಮಹತ್ಯೆ ನಿಂತಿಲ್ಲ. ಸಾವಿಗೆ ಶರಣಾಗುವ ಅನ್ನದಾತರಿಗೆ 5 ಲಕ್ಷ ರೂ. ಪರಿ ಹಾರ ನೀಡಿ ಕೈ ತೊಳೆದುಕೊಳ್ಳುತ್ತಿರುವ ಸರ್ಕಾರ, ರೈತರ ಬದುಕಿನ ರಕ್ಷಣೆಗೆ ಶಾಶ್ವತ ಪರಿಹಾರ ರೂಪಿಸಲು ಮಾತ್ರ ಮುಂದಾಗುತ್ತಿಲ್ಲ.

ರೈತರ ಆತ್ಮಹತ್ಯೆ ತಪ್ಪಿಸುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿದ ಸಾಲ ಮನ್ನಾ ಘೋಷಣೆ ಅವ್ಯವಸ್ಥೆಯ ಗೂಡಾಗಿದೆ. ಹಣಕಾಸಿನ ಕೊರತೆಯಿಂದ ಸಾಲ ಮನ್ನಾ ಚಿತ್ರಣ ಅಸ್ಪಷ್ಟವಾಗಿಯೇ ಉಳಿದಿದೆ. ಸರ್ಕಾರ ರೈತರನ್ನು ತೃಪ್ತಿಪಡಿಸಲು ಋಣಮುಕ್ತ ಪ್ರಮಾಣಪತ್ರ ನೀಡಿದರೂ ಬ್ಯಾಂಕುಗಳು ಅದಕ್ಕೆ ಕಿಲುಬುಕಾಸಿನ ಬೆಲೆ ಕೊಡುತ್ತಿಲ್ಲ. ಸಾಲ ತೀರುವಳಿಗೆ ನೋಟೀಸ್‌ಗಳು ರೈತರ ಮನೆಗೆ ಅಡಿ ಇಡುತ್ತಲೇ ಇವೆ. ಸಾಲದ ನೋಟೀಸ್‌ಗೆ ಹೆದರಿ ಎಷ್ಟೋ ರೈತರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈಗಲೂ ರೈತರ ಸರಣಿ ಆತ್ಮಹತ್ಯೆ ಜಿಲ್ಲೆಯೊಳಗೆ ಮುಂದುವರಿದೇ ಇದೆ.

ಒಂದೆಡೆ ಬ್ಯಾಂಕ್‌ಗಳು ಜಾರಿಗೊಳಿಸುವ ಸಾಲದ ನೋಟೀಸ್‌ಗೆ ಹೆದರಬೇಡಿ ಎಂದು ಸಿಎಂ ಕುಮಾರಸ್ವಾಮಿ ಹೇಳುತ್ತಿದ್ದರೆ, ಬ್ಯಾಂಕುಗಳು ಸಾಲ ತೀರಿಸದ ರೈತರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸುತ್ತಿವೆ. ಬ್ಯಾಂಕ್‌ಗಳು ಕಾನೂನಿನ ಕುಣಿಕೆಯನ್ನು ಬಿಗಿಗೊಳಿಸುತ್ತಿರುವುದರಿಂದ ರೈತರು ನೇಣಿನ ಕುಣಿಕೆಗೆ ಕೊರಳೊಡ್ಡುತ್ತಿದ್ದಾರೆ.

ಜಿಲ್ಲೆಯಲ್ಲಿರುವ ಸಹಕಾರ ಬ್ಯಾಂಕುಗಳಲ್ಲಿನ 513 ಕೋಟಿ ರೂ. ರೈತರ ಸಾಲದ ಹಣದಲ್ಲಿ 331.01 ಕೋಟಿ ರೂ. ಸಾಲ ಮನ್ನಾ ಆಗಿದೆ. ಜಿಲ್ಲೆಯ ರೈತರ ಒಟ್ಟು ಸಾಲ ಪೂರ್ಣ ಪ್ರಮಾಣದಲ್ಲಿ ತೀರುವಳಿಯಾಗಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲದ ಹಣವೂ ಬಾಕಿ ಇದೆ. ಸರ್ಕಾರದ ಸಂಪೂರ್ಣ ಸಾಲ ಮನ್ನಾ ಘೋಷಣೆಯಾಗಷ್ಟೇ ಉಳಿದುಕೊಂಡಿದೆ. ರೈತರ ಆತ್ಮಹತ್ಯೆ ಮಾತ್ರ ಮುಂದುವರೆದಿದೆ. ಬ್ಯಾಂಕ್‌ ಸಾಲಕ್ಕಿಂತ ಖಾಸಗಿ ಸಾಲಕ್ಕೆ ಹೆದರಿ ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಖಾಸಗಿ ಸಾಲಕ್ಕೆ ಕಡಿವಾಣ ಹಾಕಲು ಕೇರಳ ಮಾದರಿಯ ಕಾನೂನು ಜಾರಿಗೆ ತರುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಅದಕ್ಕೂ ಮೊದಲು ರೈತರಿಗೆ ಸಕಾಲದಲ್ಲಿ ನೀರು ದೊರಕುವಂತೆ ಕೆರೆ-ಕಟ್ಟೆಗಳ ಪುನಶ್ಚೇತನ, ಅಂತರ್ಜಲ ವೃದ್ಧಿ, ಮಳೆ ನೀರು ಸಂಗ್ರಹ ಹೆಚ್ಚಳ ಮಾಡುವ ಕಾರ್ಯಕ್ರಮಗಳಿಗೆ ಪ್ರಾಮು ಖ್ಯತೆಯನ್ನೇ ಕೊಡುತ್ತಿಲ್ಲ. ಕೆರೆಯಿಂದ ಕೆರೆಗೆ ನೀರು ಹರಿಸುವ ಯೋಜನೆ ಘೋಷಣೆ ಮಾಡಿ ವರ್ಷವಾದರೂ ಅದಕ್ಕೆ ಇಂದಿಗೂ ಚಾಲನೆ ಸಿಕ್ಕಿಲ್ಲ.

ಜಿಲ್ಲೆಯಲ್ಲಿ 686 ಕೆರೆಗಳಿದ್ದರೂ ಅವುಗಳನ್ನು ಸುಸ್ಥಿತಿಯಲ್ಲಿ ಕಾಪಾಡುವ, ಒತ್ತುವರಿ ತೆರವುಗೊಳಿಸುವ, ಹೂಳು ತೆಗೆಸಿ ನೀರಿನ ಸಂಗ್ರಹ ಪ್ರಮಾಣವನ್ನು ಹೆಚ್ಚಿಸುವ ಬದ್ಧತೆ, ಇಚ್ಛಾಶಕ್ತಿ ಯಾರಿಗೂ ಇಲ್ಲ. ಕೆರೆಗಳಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ವೃದ್ಧಿಯಾಗುವುದರೊಂದಿಗೆ ಕೊಳವೆ ಬಾವಿಗಳು ಪುನಶ್ಚೇತನ ಗೊಂಡರೆ ನೀರಿನ ಸಮಸ್ಯೆ ಭಾಗಶಃ ಕಡಿಮೆಯಾಗುತ್ತದೆ.

ಆ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಕಾರ್ಯಕ್ರಮ ರೂಪುಗೊಳ್ಳುತ್ತಿಲ್ಲ. ಇದರ ಪರಿಣಾಮ ನೀರಿನ ಬವಣೆ ಪ್ರತಿ ವರ್ಷ ರೈತರನ್ನು ಬೆಂಬಿಡದೆ ಕಾಡುತ್ತಿದೆ. ಬೇಸಿಗೆ ಅವಧಿಯಲ್ಲಿ ಕೆರೆಗಳನ್ನು ಸಂರಕ್ಷಣೆ ಮಾಡುವ ಕಾರ್ಯಕ್ರಮವನ್ನೂ ಜಿಲ್ಲಾಡಳಿತ ಅಥವಾ ಜಿಲ್ಲಾ ಪಂಚಾಯಿತಿ ಕೈಗೆತ್ತಿಕೊಳ್ಳುತ್ತಿಲ್ಲ. 2019ಅನ್ನು ಜಲಾಮೃತ ವರ್ಷವನ್ನಾಗಿ ಆಚರಿಸಲಾಗುತ್ತಿದ್ದರೂ ರೈತರಿಗೆ ಅನುಕೂಲ ವಾಗುವಂತೆ, ಕೃಷಿಗೆ ನೀರಿನ ಕೊರತೆ ನೀಗಿಸುವ ದೃಷ್ಟಿಯಿಂದ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸದಿರುವುದು ದೊಡ್ಡ ದುರಂತದ ಸಂಗತಿಯಾಗಿದೆ.

ಬದುಕನ್ನು ಕಟ್ಟಿ,ಕೊಳ್ಳಲು ರೈತರು ಸಾಲ ಮಾಡಿ ಬೆಳೆ ಬೆಳೆಯುವುದಕ್ಕೆ ಮುಂದಾದರೂ ಯಾವುದೇ ಮೂಲದಿಂದಲೂ ಅವರಿಗೆ ನೀರು ಸಿಗುತ್ತಿಲ್ಲ. ಕೆಆರ್‌ಎಸ್‌ ಅಣೆಕಟ್ಟೆ ನೀರಿಗೆ ನೀರು ನಿರ್ವಹಣಾ ಪ್ರಾಧಿಕಾರದ ಬೇಕು ಅಂತಾರೆ. ಕೆರೆ-ಕಟ್ಟೆಗಳು ನೀರಿಲ್ಲದೆ ಬರಡಾಗಿವೆ. ಕೊಳವೆ ಬಾವಿಗಳು ಬತ್ತಿಹೋಗಿವೆ, ಅಂತರ್ಜಲ ಪಾತಾಳ ಸೇರಿಕೊಂಡಿದೆ. ಹಾಗಾದರೆ ಬೆಳೆ ಬೆಳೆಯಲು ನೀರು ದೊರಕುವುದಾದರೂ ಎಲ್ಲಿಂದ ಎಂಬ ಪ್ರಶ್ನೆಗೆ ಯಾರ ಬಳಿಯೂ ಉತ್ತರವಿಲ್ಲ. ಮಳೆ ಬಿದ್ದರಷ್ಟೇ ಕೃಷಿ. ಇಲ್ಲದಿದ್ದರೆ ಎಲ್ಲವೂ ಹುಸಿ ಎಂಬಂತಾಗಿದೆ ರೈತರ ಬಾಳು. ಜಲಸಂಪತ್ತನ್ನು ಸಂರಕ್ಷಿಸುವ ದಿಕ್ಕಿನಲ್ಲಿ ಆಲೋಚನೆಗಳು ಸಾಗದಿದ್ದರೆ ಅನ್ನದಾತರ ಆತ್ಮಹತ್ಯೆಗೆ ಕೊನೆಯೇ ಇರುವುದಿಲ್ಲ.

ಕಳೆದ ವಾರದಲ್ಲೇ ಮೂವರು ರೈತರ ಆತ್ಮಹತ್ಯೆ:

ರೈತರ ಆತ್ಮಹತ್ಯೆ ನಿರಂತರವಾಗಿ ನಡೆದಿದೆ. ಕಳೆದೊಂದು ವಾರದಲ್ಲಿ ಮೂವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಕೃಷಿ ಇಲಾಖೆಯಲ್ಲಿ ವರದಿಯಾಗುತ್ತಿರುವ ರೈತರ ಆತ್ಮಹತ್ಯೆ ಸಂಖ್ಯೆಗೂ, ವಾಸ್ತವದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಸಂಖ್ಯೆಗೂ ಹೋಲಿಕೆಯೇ ಆಗುತ್ತಿಲ್ಲ. ರೈತರ ಆತ್ಮಹತ್ಯೆ ಪ್ರಕರಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿ ನಂತರ ಅದು ಉಪವಿಭಾಗಾಧಿಕಾರಿ ಸಮಿತಿಯ ಮುಂದೆ ಬರುವ ಪ್ರಕರಣಗಳನ್ನಷ್ಟೇ ಪರಿಗಣಿಸಲಾಗುತ್ತಿದೆ. ಆದರೆ, ಎಷ್ಟೋ ರೈತರ ಆತ್ಮಹತ್ಯೆ ಪ್ರಕರಣಗಳು ಸದ್ದಿಲ್ಲದೆ ಮಣ್ಣಾಗುತ್ತಿವೆ. ಅವುಗಳಿಗೆ ಲೆಕ್ಕ ಇಡುವವರೇ ಇಲ್ಲವಾಗಿದೆ.
● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.