ಗಗನಚುಕ್ಕಿ ಪ್ರಗತಿಗೆ 3.54 ಕೋಟಿ ಬಿಡುಗಡೆ

ಜಲಪಾತದ ಸೌಂದರ್ಯ ಹೆಚ್ಚಿಸಲುಕ್ರಮ, ಅರಣ್ಯ, ಲೋಕೋಪಯೋಗಿ ಅಧಿಕಾರಿಗಳಿಂದ ಪರಿಶೀಲನೆ

Team Udayavani, Nov 10, 2020, 4:40 PM IST

ಗಗನಚುಕ್ಕಿ ಪ್ರಗತಿಗೆ 3.54 ಕೋಟಿ ಬಿಡುಗಡೆ

ಗಗನಚುಕ್ಕಿ ಜಲಪಾತವನ್ನು ಅಧಿಕಾರಿಗಳು ಪರಿಶೀಲನೆ ಮಾಡಿದರು.

ಮಂಡ್ಯ: ಜಿಲ್ಲೆಯ ಗಗನಚುಕ್ಕಿ ಜಲಪಾತದ ಅಭಿವೃದ್ಧಿಗೆ ಸರ್ಕಾರ 3.54 ಕೋಟಿರೂ. ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಅರಣ್ಯಾಧಿಕಾರಿ, ಪ್ರವಾಸೋದ್ಯಮ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

2007ರಿಂದ ಪ್ರತಿ ವರ್ಷ ಗಗನಚುಕ್ಕಿ ಜಲಪಾತೋತ್ಸವ ನಡೆಯುತ್ತದೆ. ವಿವಿಧ ಮನರಂಜನಾತ್ಮಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆ ಸಂದರ್ಭದಲ್ಲಿ ಅಭಿವೃದ್ಧಿಬಗ್ಗೆ ಮಾತುಕತೆಗೆ ಮಾತ್ರ ಸೀಮಿತವಾಗುತ್ತಿತ್ತು. ಜಲಪಾತೋತ್ಸವ ಪ್ರಾರಂಭವಾಗಿ ಇಲ್ಲಿಗೆ 13 ವರ್ಷಗಳು ಕಳೆದಿವೆ. ಆದರೂ, ಗಗನಚುಕ್ಕಿ ಹೇಳಿಕೊಳ್ಳುವಂತಹ ಅಭಿವೃದ್ಧಿ ಹೊಂದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಅದು ಈಗ ಸಾಕಾರಗೊಳ್ಳುವ ಎಲ್ಲ ಲಕ್ಷಣಗಳುಕಂಡು ಬರುತ್ತಿದೆ.

ಹೇಗಿರಲಿದೆ ಅಭಿವೃದ್ಧಿ?: ಪ್ರವಾಸೋದ್ಯಮ ಇಲಾಖೆಯು ಅಭಿವೃದ್ಧಿಯ ಬಗ್ಗೆ ನೀಲಿನಕ್ಷೆ ಬಿಡುಗಡೆಗೊಂಡಿದ್ದು, ಜಲಪಾತ ಸೌಂದರ್ಯ ಹೆಚ್ಚಿಸಲು ಹಲವು ಯೋಜನೆಗಳನ್ನು ರೂಪುಗೊಳಿಸಿದೆ. ಪ್ರವಾಸಿಗರ ‌ ಜಲಪಾತ ವೀಕ್ಷಣೆಗೆ ತೊಂದರೆಯಾಗದಂತೆ ವಿಶಾಲವಾದ ಹೋಗುವ ಹಾಗೂ ಬರುವ ಮಾರ್ಗದ ಎರಡೂ ಕಡೆ ಮೆಟ್ಟಿಲುಗಳು ನಿರ್ಮಾಣವಾಗಲಿದೆ. ಸುಮಾರು 200 ಮಂದಿ ಪ್ರವಾಸಿಗರು ಕುಳಿತುಕೊಂಡು ವೀಕ್ಷಿಸಲು ಗ್ಯಾಲರಿ, ಅಲ್ಲಲ್ಲಿ ಪ್ರೇಕ್ಷಕರ ವಿಶ್ರಾಂತಿಗೆ ಕುಟೀರ ಗಳು, ಪ್ರಾಣಿಗಳ ಮಾದರಿಗಳು, ವನ್ಯ ಪ್ಲಾಂಟ್‌ ನಿರ್ಮಾಣವಾಗಲಿವೆ. ಅಲ್ಲದೆ, ಗಗನಚುಕ್ಕಿಯ ಸೌಂದರ್ಯ ಹೆಚ್ಚಿಸಲು ಮೆಟ್ಟಿಲುಗಳ ಪಕ್ಕ ಹುಲ್ಲು ಹಾಸು, ಮರಗಳನ್ನು ಬೆಳೆಸಲು ಯೋಜನೆ ರೂಪಿಸಲಾಗಿದೆ.

ಸೌಂದರ್ಯ ವೀಕ್ಷಣೆಗೂ ಯೋಜನೆ: ಜಲ ಪಾತದಲ್ಲಿ ಬಿದ್ದ ನೀರು ನದಿಯ ಮೂಲಕ ಸಾಗಲಿದೆ. ಹರಿಯುವ ನದಿ ಕಣಿವೆಯ ಸೌಂದರ್ಯ ಹಾಗೂ ಪ್ರಕೃತಿಯನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ವ್ಯವಸ್ಥೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಮುಂದಿನ ವರ್ಷದ ಅಂತ್ಯದೊಳಗೆ ಕಾಮಗಾರಿ ಮುಗಿ ಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈಗಾಗಲೇ ಜಾಗ ವನ್ನುಗುರುತಿಸಲಾ ಗಿದ್ದು, ಸದ್ಯದ ಲ್ಲಿಯೇ ಶಾಸಕರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಹರೀಶ್‌ ಹೇಳಿದರು.

ವಿದ್ಯುತ್‌ ದೀಪಾಲಂಕಾರ :  ರಾತ್ರಿ ವೇಳೆ ಪ್ರವಾಸಿಗರು ಬಣ್ಣದ ಜಲಪಾತ ಕಣ್ತುಂಬಿಕೊಳ್ಳಲು ಗಗನಚುಕ್ಕಿ ಜಲಪಾತಕ್ಕೆ ವಿದ್ಯುತ್‌ ದೀಪಾಲಂಕಾರ ಮಾಡುವ ಮೂಲಕ ಮೆರಗು ನೀಡಲಿದೆ.ಅಲ್ಲದೆ,ನಿರ್ಮಾಣವಾಗುವಪ್ರವಾಸಿಗರ ಗ್ಯಾಲರಿಯಲ್ಲೂವಿದ್ಯುತ್‌ ಅಳವಡಿಸಲುಚಿಂತನೆ ನಡೆಸಲಾಗಿದೆ.

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ :  ಗಗನಚುಕ್ಕಿ ಅಭಿವೃದ್ಧಿ ಯೋಜನೆಯಲ್ಲಿ ಪ್ರವಾಸಿಗರ ಸುರಕ್ಷತೆ ಹೆಚ್ಚು ಒತ್ತು ನೀಡಲಾಗಿದೆ. ಬರುವ ಪ್ರವಾಸಿಗರು ಯಾವುದೇ ತೊಂದರೆ ಇಲ್ಲದಂತೆ ಜಲಪಾತ ವೀಕ್ಷಿಸಿ ಸುರಕ್ಷಿತವಾಗಿ ತೆರಳಲು ಎಲ್ಲ ರೀತಿಯಕ್ರಮಗಳನ್ನುಕೈಗೊಳ್ಳಲಾಗುವುದು. ಇದೊಂದು ಬಹುದಿನಗಳಕನಸಾಗಿದ್ದು, ಅದು ಶೀಘ್ರದಲ್ಲಿಯೇ ಸಾಕಾರಗೊಳ್ಳಲಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಈಗಾಗಲೇ ಕಾಮಗಾರಿಗೆ ಬೇಕಾದ ಸಾಮಗ್ರಿಗಳನ್ನು ಸಾಗಿಸಲು ಶಿಂಷಾ ಚಾನಲ್‌ ಬಳಿಯ ಚಿಕ್ಕಮುತ್ತತ್ತಿಯ ರಸ್ತೆಯುದ್ದಕ್ಕೂಕಬ್ಬಿಣದ ತಡೆಗೋಡೆ ನಿರ್ಮಿಸಲಾಗಿದೆ ಎಂದು ಮಂಡ್ಯ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಹರೀಶ್‌ ತಿಳಿಸಿದ್ದಾರೆ.

ಅಧಿಕಾರಿಗಳಿಂದ ಸ್ಥಳ ಪರಿಶೀಲನೆ :  ಯೋಜನೆ ಕಾಮಗಾರಿ ಕೈಗೊಳ್ಳಲು ಅರಣ್ಯಾಧಿಕಾರಿ ರವಿಶಂಕರ್‌, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಹರೀಶ್‌ ಹಾಗೂಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿಭೇಟಿನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಈ ಯೋಜನೆ ಮುಗಿಯುವುದರೊಳಗೆ ಬರುವ ಪ್ರವಾಸಿಗರು ಉಳಿದುಕೊಳ್ಳಲು ಕೊಠಡಿಗಳ ನಿರ್ಮಾಣ, ಹೈಟೆಕ್‌ ಶೌಚಾಲಯ, ಉತ್ತಮ ರಸ್ತೆ, ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲು ಯೋಜನೆ ರೂಪಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

 

ಎಚ್‌.ಶಿವರಾಜು

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.