77 ಸಾವಿರ ರೈತರ 331 ಕೋಟಿ ಸಾಲ ಮನ್ನಾ

182.61 ಕೋಟಿ ರೂ.ಬಾಕಿ ಉಳಿಸಿರುವ ಸರ್ಕಾರ | ಮನ್ನಾ ಆದ ರೈತರ ಸಂತಸ, ಆಗದಿರುವವರಿಗೆ ಸಂಕಟ

Team Udayavani, Jun 14, 2019, 9:48 AM IST

mandya-tdy-1..

ಡಿಸಿಸಿ ಬ್ಯಾಂಕ್‌

ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಘೋಷಿಸಿದ ಒಂದು ಲಕ್ಷ ರೂ.ವರೆಗಿನ ಸಾಲ ಮನ್ನಾ ಯೋಜನೆಯಡಿ ಜಿಲ್ಲೆಯ 77,024ತರ 331.01 ಕೋಟಿ ರೂ. ಸಾಲಮನ್ನಾ ಆಗಿದೆ. ಇನ್ನೂ 182.61 ಕೋಟಿ ರೂ. ಸಾಲ ಮನ್ನಾ ಬಾಕಿ ಪಾವತಿಯಾಗಬೇಕಿದೆ.

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಸಹಕಾರ ಬ್ಯಾಂಕುಗಳಲ್ಲಿ ರೈತರು ಪಡೆದ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಯೋಜನೆಯಿಂದ ಜಿಲ್ಲೆಯ 1,15,272 ರೈತರು ಪ್ರಯೋಜನ ಪಡೆದುಕೊಂಡಿದ್ದರು. ಒಟ್ಟು 462,07,14,035 ರೂ. ಸಾಲ ಮನ್ನಾ ಆಗಿತ್ತು. ಈ ಸಾಲದ ಬಡ್ಡಿ ಸಹಾಯಧನ 1.51 ಕೋಟಿ ರೂ. ಹಾಗೂ ಸಾಲ ಮನ್ನಾ ಯೋಜನೆಯ ಬಡ್ಡಿ ಹಣ 3.19 ಕೋಟಿ ರೂ. ಸರ್ಕಾರದಿಂದ ಬಾಕಿ ಬರಬೇಕಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ 1 ಲಕ್ಷ ರೂ.ವರೆಗೆ ಸಹಕಾರ ಬ್ಯಾಂಕುಗಳ ಸಾಲ ಮನ್ನಾ ಘೋಷಣೆ ಮಾಡಿದ್ದರಿಂದ ಸಾಲದ ಮೊತ್ತ 513.62 ಕೋಟಿ ರೂ. ಆಗಿತ್ತು. ಈ ಸಾಲದ ಹಣದಲ್ಲಿ ಮೇ 31ರವರೆಗೆ ಜಿಲ್ಲೆಯ 77,024 ರೈತರ 331.01 ಕೋಟಿ ರೂ. ಹಣ ಮನ್ನಾ ಆಗಿದೆ. ಇದರಿಂದ ಸಾಲ ಪಡೆದ ರೈತರು ಋಣಮುಕ್ತರಾಗಿದ್ದಾರೆ.

ಸಾಲದ ಹಣ ಬಿಡುಗಡೆ: ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿದ್ದ ಬೆಳೆ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಆದರೆ, ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಸಾಲದ ಹಣ ಬಿಡುಗಡೆ ಸಂಬಂಧ ನಿರ್ದಿಷ್ಟವಾಗಿ ಏನನ್ನೂ ಹೇಳಿಲ್ಲ.

ಹಾಲಿ ಬಿಡುಗಡೆಯಾಗಿರುವ 331.01 ಕೋಟಿ ರೂ. ಹಣವನ್ನು ಎಲ್ಲಾ ತಾಲೂಕುಗಳಿಗೆ ಹಂಚಿಕೆ ಮಾಡಲಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಹಣದಿಂದ ಸಾಲ ಮನ್ನಾ ಆದವರು ಸಂತಸದಲ್ಲಿ ತೇಲಾಡುತ್ತಿದ್ದರೆ, ಸಾಲ ಮನ್ನಾ ಆಗದ ರೈತರು ನಾವು ಮಾಡಿರುವ ಬೆಳೆ ಸಾಲ ಯಾವಾಗ ಮನ್ನಾ ಆಗಲಿದೆ ಎಂಬ ನಿರೀಕ್ಷೆಯಲ್ಲೇ ಸಂಕಟ ಅನುಭವಿಸುತ್ತಿದ್ದಾರೆ. ಒಂದೇ ಕಂತಿನಲ್ಲಿ ಹಣ ಬಿಡುಗಡೆಯಾಗಿದ್ದರೆ ಎಲ್ಲಾ ರೈತರು ಸಾಲದ ಋಣದಿಂದ ಒಂದೇ ಬಾರಿಗೆ ಮುಕ್ತರಾಗುತ್ತಿದ್ದರು ಎಂಬ ಭಾವನೆ ರೈತರು ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಮಂಡ್ಯ ತಾಲೂಕಿನ 17,887 ರೈತರ 70.85 ಕೋಟಿ ರೂ., ಮದ್ದೂರು ತಾಲೂಕಿನ 13,753 ರೈತರ 59.37 ಕೋಟಿ ರೂ., ಮಳವಳ್ಳಿ ತಾಲೂಕಿನ 11,461 ರೈತರ 51.69 ಕೋಟಿ ರೂ., ಪಾಂಡವಪುರ ತಾಲೂಕಿನ 6229 ರೈತರ 26.45 ಕೋಟಿ ರೂ., ಶ್ರೀರಂಗಪಟ್ಟಣ ತಾಲೂಕಿನ 7006 ರೈತರ 29.48 ಕೋಟಿ ರೂ. ಕೆ.ಆರ್‌.ಪೇಟೆ ತಾಲೂಕಿನ 12126 ರೈತರ 59.72 ಕೋಟಿ ರೂ. ಹಾಗೂ ನಾಗಮಂಗಲ ತಾಲೂಕಿನ 8562 ರೈತರ 33.42 ಕೋಟಿ ರೂ. ಹಣ ಸೇರಿ ಜಿಲ್ಲೆಯ ಒಟ್ಟು 77024 ರೈತರ 331.01 ಕೋಟಿ ರೂ. ಸಾಲ ಮನ್ನಾ ಆಗಿದೆ.

ಸಾಲ ಮನ್ನಾ ಹಣವನ್ನು ಸರ್ಕಾರ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದು, ಬಾಕಿ ಉಳಿದಿರುವ 182.61 ಕೋಟಿ ರೂ. ಹಣವನ್ನು ಸರ್ಕಾರ ಶೀಘ್ರ ಬಿಡುಗಡೆ ಮಾಡುವರೆಂಬ ನಿರೀಕ್ಷೆಯಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರಿಗಳಿದ್ದಾರೆ. ಇದರ ನಡುವೆಯೂ ರೈತರು ಬೆಳೆ ಬೆಳೆಯುವುದಕ್ಕೆ ಅನುಕೂಲವಾಗುವಂತೆ ಜಿಲ್ಲೆಯ 17 ಸಾವಿರ ರೈತರಿಗೆ 70 ಕೋಟಿ ರೂ.ವರೆಗೆ ಸಾಲ ನೀಡಿದ್ದಾರೆ. ಉತ್ತರ ಕರ್ನಾಟಕದ ಯಾದಗಿರಿಯಲ್ಲಿ ರೈತರ ಸಾಲ ಮನ್ನಾಗೆ ಬಂದ ಹಣ ವಾಪಸ್‌ ಹೋಗಿರುವ ಪ್ರಕರಣ ನಡೆದಿದ್ದು, ಆ ರೀತಿಯ ಯಾವುದೇ ಪ್ರಕರಣ ಈ ಭಾಗದಲ್ಲಿ ನಡೆದಿಲ್ಲ. ಸಾಲ ಮನ್ನಾ ವಿಚಾರದಲ್ಲಿ ಯಾವ ಗೊಂದಲಗಳೂ ಇಲ್ಲವೆಂದು ಬ್ಯಾಂಕ್‌ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ಕೆ.ನಿಖೀಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾರಣಕ್ಕೆ ಜಿಲ್ಲೆಯ ಜನರ ಮನವೊಲಿಸಿಕೊಳ್ಳಲು 331.01 ಕೋಟಿ ರೂ. ಸಾಲ ಮನ್ನಾ ಹಣ ಬಿಡುಗಡೆ ಮಾಡಿದ್ದರು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಅದರ ನಡುವೆಯೂ ರೈತರಿಗೆ ಪ್ರಯೋಜನವಾಗಿರುವುದು ಸಂತಸಪಡುವ ಸಂಗತಿಯಾಗಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.