![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರಾಜ್ಯದಲ್ಲಿ 4.49 ಲಕ್ಷ ಕುಟುಂಬಗಳಿಗೆ ಶೌಚಾಲಯವಿಲ್ಲ!
Team Udayavani, Mar 18, 2020, 3:00 AM IST
![rajyadalli](https://www.udayavani.com/wp-content/uploads/2020/03/rajyadalli-620x461.jpg)
ಮಂಡ್ಯ: ರಾಜ್ಯದ ಗ್ರಾಮೀಣ ಪ್ರದೇಶವನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದ್ದರೂ ಇನ್ನೂ 4.49 ಲಕ್ಷ ಕುಟುಂಬಗಳಿಗೆ ಶೌಚಾಲಯವಿಲ್ಲದಿರುವುದು ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ.
ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಡೆಸಿದ ಸಮೀಕ್ಷೆಗಳ ಪ್ರಕಾರ ಗ್ರಾಮೀಣ ಪ್ರದೇಶದ ಕೆಲವು ಗ್ರಾಮಗಳಲ್ಲಿ ಶೌಚಾಲಯರಹಿತ ಕುಟುಂಬಗಳಿರುವುದು ಕಂಡುಬಂದಿದೆ. ಅದರಂತೆ ರಾಜ್ಯದಲ್ಲಿ ಈವರೆಗೆ 1.99 ಲಕ್ಷ ಕುಟುಂಬಗಳು ಮಾತ್ರ ಶೌಚಾಲಯ ನಿರ್ಮಿಸಿಕೊಂಡಿದ್ದು, ಇನ್ನೂ 4.49 ಲಕ್ಷ ಕುಟುಂಬಗಳು ಶೌಚಾಲಯ ಹೊಂದಿಲ್ಲವೆಂದು ವರದಿ ಮಾಡಿವೆ.
ಬೇಸ್ಲೈನ್ ಸಮೀಕ್ಷೆ: ಸ್ವತ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯನ್ವಯ 2012ರ ಬೇಸ್ಲೈನ್ ಸಮೀಕ್ಷೆಯಂತೆ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿದ್ದ ಶೌಚಾಲಯ ರಹಿತ ಕುಟುಂಬಗಳಿಗೆ ಶೌಚಾಲಯ ನಿರ್ಮಾಣ ಮಾಡಲಾಯಿತು. ಅದೇ ಮಾಹಿತಿಯನ್ನು ಆಧರಿಸಿ ರಾಜ್ಯದ ಗ್ರಾಮೀಣ ಪ್ರದೇಶವನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಯಿತು.
ಆದರೆ, 2012ರ ಸಮೀಕ್ಷೆಯಲ್ಲಿ ಬಿಟ್ಟುಹೋದ, ವಿಭಜನೆಯಾದ ಹಾಗೂ ಹೊಸದಾಗಿ ನಿರ್ಮಾಣವಾದಂತಹ ಶೌಚಾಲಯ ರಹಿತ ಕುಟುಂಬಗಳಿಗೆ ಎಲ್ಒಬಿ (ಶೌಚಾಲಯ ನಿರ್ಮಾಣದಿಂದ ಹೊರಗುಳಿದ) ಹಾಗೂ ಎನ್ಒಎಲ್ಬಿ (ಶೌಚಾಲಯದಿಂದ ಯಾರೂ ಹೊರಗುಳಿಯದಂತೆ ತಡೆಯುವ) ಕಾರ್ಯಕ್ರಮದಡಿ ಶೌಚಾಲಯ ನಿರ್ಮಾಣಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಶೌಚಾಲಯ ನಿರ್ಮಾಣಕ್ಕೆ ನೋಂದಣಿ ಮಾಡಿಕೊಳ್ಳಲು ಮಾ.31ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಪಂ ಸಿಇಒ ಅವರಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ.
ಶೌಚಾಲಯ ರಹಿತರ ಪಟ್ಟಿ: ಪ್ರತಿ ಗ್ರಾಮದಲ್ಲಿ ಶೌಚಾಲಯದ ಸಮೀಕ್ಷೆ ನಡೆಸಿ ಶೌಚಾಲಯ ರಹಿತ ಕುಟುಂಬಗಳ ಪಟ್ಟಿಯನ್ನು ಪಡೆಯುವುದು. ಈ ಹಿಂದಿನ ಯೋಜನೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಂಡು ಪ್ರೋತ್ಸಾಹಧನ ಪಡೆಯದೆ ಪ್ರಸ್ತುತ ನಿರುಪಯುಕ್ತವಾಗಿರುವ ಶೌಚಾಲಯಗಳಿಗೆ ಮತ್ತೆ ಶೌಚಾಲಯ ಒದಗಿಸಲು ಹೆಸರುಗಳನ್ನು ಕೆ-02 ನಮೂನೆಯಲ್ಲಿ ಸೇರಿಸುವಂತೆ ತಿಳಿಸಲಾಗಿದೆ.
ಪಂಚತಂತ್ರ ತಂತ್ರಾಂಶದಲ್ಲಿ ಈ ಹಿಂದೆ ಶೌಚಾಲಯ ನಿರ್ಮಾಣಕ್ಕೆ ಹೆಸರುಗಳನ್ನು ದಾಖಲಿಸಿ ಕಾರ್ಯಾದೇಶ ವಿತರಿಸಿ ಶೌಚಾಲಯ ನಿರ್ಮಾಣ ಮಾಡದಿದ್ದಲ್ಲಿ ಅಂತಹವರ ಹೆಸರುಗಳನ್ನು ಸೇರಿಸಿಕೊಂಡು ಹೊಸ ಕಾರ್ಯಾದೇಶ ನೀಡುವಂತೆ ಸೂಚಿಸಿದೆ. ಪತ್ರಿಕಾ ಪ್ರಕಟಣೆ, ಪೋಸ್ಟರ್, ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ರವಾನಿಸಿ ಶೌಚಾಲಯ ನಿರ್ಮಾಣಕ್ಕೆ ಅರ್ಹರಿರುವ ಫಲಾನುಭವಿಗಳನ್ನು ಗುರುತಿಸುವುದು. ಪ್ರತಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಕಾಲಕಾಲಕ್ಕೆ ಶೌಚಾಲಯ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸುವುದು.
ಹೆಸರು ನೋಂದಾಯಿಸಿಕೊಳ್ಳಿ: ಯಾರೊಬ್ಬರೂ ಶೌಚಾಲಯ ವ್ಯಾಪ್ತಿಯಿಂದ ಹೊರಗುಳಿಯದಂತೆ ಮಾಡಲು ನಿಗದಿಪಡಿಸಲಾದ ಜಿಲ್ಲಾ ಗುರಿ ಹೆಚ್ಚಿಸಲು ಕೂಡಲೇ ಕೇಂದ್ರ ಕಚೇರಿಗೆ ಮಾಹಿತಿ ನೀಡುವುದು. ಶೌಚಾಲಯ ರಹಿತ ಫಲಾನುಭವಿಗಳ ಹೆಸರುಗಳನ್ನು ದಾಖಲಿಸಲು ಮಾ.31 ಕೊನೆಯ ದಿನವಾಗಿದೆ. ಶೌಚಾಲಯ ನಿರ್ಮಾಣವನ್ನು ಅತ್ಯಂತ ತುರ್ತು ಹಾಗೂ ಪ್ರಥಮಾದ್ಯತೆ ಎಂದು ಪರಿಗಣಿಸಿ ಪ್ರಸ್ತುತ ಶೌಚಾಲಯ ನಿರ್ಮಾಣಕ್ಕೆ ನೀಡಲಾಗಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.