ರಾಜ್ಯದಲ್ಲಿ 4.49 ಲಕ್ಷ ಕುಟುಂಬಗಳಿಗೆ ಶೌಚಾಲಯವಿಲ್ಲ!


Team Udayavani, Mar 18, 2020, 3:00 AM IST

rajyadalli

ಮಂಡ್ಯ: ರಾಜ್ಯದ ಗ್ರಾಮೀಣ ಪ್ರದೇಶವನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಗಿದ್ದರೂ ಇನ್ನೂ 4.49 ಲಕ್ಷ ಕುಟುಂಬಗಳಿಗೆ ಶೌಚಾಲಯವಿಲ್ಲದಿರುವುದು ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ.

ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಡೆಸಿದ ಸಮೀಕ್ಷೆಗಳ ಪ್ರಕಾರ ಗ್ರಾಮೀಣ ಪ್ರದೇಶದ ಕೆಲವು ಗ್ರಾಮಗಳಲ್ಲಿ ಶೌಚಾಲಯರಹಿತ ಕುಟುಂಬಗಳಿರುವುದು ಕಂಡುಬಂದಿದೆ. ಅದರಂತೆ ರಾಜ್ಯದಲ್ಲಿ ಈವರೆಗೆ 1.99 ಲಕ್ಷ ಕುಟುಂಬಗಳು ಮಾತ್ರ ಶೌಚಾಲಯ ನಿರ್ಮಿಸಿಕೊಂಡಿದ್ದು, ಇನ್ನೂ 4.49 ಲಕ್ಷ ಕುಟುಂಬಗಳು ಶೌಚಾಲಯ ಹೊಂದಿಲ್ಲವೆಂದು ವರದಿ ಮಾಡಿವೆ.

ಬೇಸ್‌ಲೈನ್‌ ಸಮೀಕ್ಷೆ: ಸ್ವತ್ಛ ಭಾರತ್‌ ಮಿಷನ್‌ (ಗ್ರಾಮೀಣ) ಯೋಜನೆಯನ್ವಯ 2012ರ ಬೇಸ್‌ಲೈನ್‌ ಸಮೀಕ್ಷೆಯಂತೆ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿದ್ದ ಶೌಚಾಲಯ ರಹಿತ ಕುಟುಂಬಗಳಿಗೆ ಶೌಚಾಲಯ ನಿರ್ಮಾಣ ಮಾಡಲಾಯಿತು. ಅದೇ ಮಾಹಿತಿಯನ್ನು ಆಧರಿಸಿ ರಾಜ್ಯದ ಗ್ರಾಮೀಣ ಪ್ರದೇಶವನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲಾಯಿತು.

ಆದರೆ, 2012ರ ಸಮೀಕ್ಷೆಯಲ್ಲಿ ಬಿಟ್ಟುಹೋದ, ವಿಭಜನೆಯಾದ ಹಾಗೂ ಹೊಸದಾಗಿ ನಿರ್ಮಾಣವಾದಂತಹ ಶೌಚಾಲಯ ರಹಿತ ಕುಟುಂಬಗಳಿಗೆ ಎಲ್‌ಒಬಿ (ಶೌಚಾಲಯ ನಿರ್ಮಾಣದಿಂದ ಹೊರಗುಳಿದ) ಹಾಗೂ ಎನ್‌ಒಎಲ್‌ಬಿ (ಶೌಚಾಲಯದಿಂದ ಯಾರೂ ಹೊರಗುಳಿಯದಂತೆ ತಡೆಯುವ) ಕಾರ್ಯಕ್ರಮದಡಿ ಶೌಚಾಲಯ ನಿರ್ಮಾಣಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಶೌಚಾಲಯ ನಿರ್ಮಾಣಕ್ಕೆ ನೋಂದಣಿ ಮಾಡಿಕೊಳ್ಳಲು ಮಾ.31ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಪಂ ಸಿಇಒ ಅವರಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ.

ಶೌಚಾಲಯ ರಹಿತರ ಪಟ್ಟಿ: ಪ್ರತಿ ಗ್ರಾಮದಲ್ಲಿ ಶೌಚಾಲಯದ ಸಮೀಕ್ಷೆ ನಡೆಸಿ ಶೌಚಾಲಯ ರಹಿತ ಕುಟುಂಬಗಳ ಪಟ್ಟಿಯನ್ನು ಪಡೆಯುವುದು. ಈ ಹಿಂದಿನ ಯೋಜನೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಂಡು ಪ್ರೋತ್ಸಾಹಧನ ಪಡೆಯದೆ ಪ್ರಸ್ತುತ ನಿರುಪಯುಕ್ತವಾಗಿರುವ ಶೌಚಾಲಯಗಳಿಗೆ ಮತ್ತೆ ಶೌಚಾಲಯ ಒದಗಿಸಲು ಹೆಸರುಗಳನ್ನು ಕೆ-02 ನಮೂನೆಯಲ್ಲಿ ಸೇರಿಸುವಂತೆ ತಿಳಿಸಲಾಗಿದೆ.

ಪಂಚತಂತ್ರ ತಂತ್ರಾಂಶದಲ್ಲಿ ಈ ಹಿಂದೆ ಶೌಚಾಲಯ ನಿರ್ಮಾಣಕ್ಕೆ ಹೆಸರುಗಳನ್ನು ದಾಖಲಿಸಿ ಕಾರ್ಯಾದೇಶ ವಿತರಿಸಿ ಶೌಚಾಲಯ ನಿರ್ಮಾಣ ಮಾಡದಿದ್ದಲ್ಲಿ ಅಂತಹವರ ಹೆಸರುಗಳನ್ನು ಸೇರಿಸಿಕೊಂಡು ಹೊಸ ಕಾರ್ಯಾದೇಶ ನೀಡುವಂತೆ ಸೂಚಿಸಿದೆ. ಪತ್ರಿಕಾ ಪ್ರಕಟಣೆ, ಪೋಸ್ಟರ್‌, ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ರವಾನಿಸಿ ಶೌಚಾಲಯ ನಿರ್ಮಾಣಕ್ಕೆ ಅರ್ಹರಿರುವ ಫ‌ಲಾನುಭವಿಗಳನ್ನು ಗುರುತಿಸುವುದು. ಪ್ರತಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಿ ಕಾಲಕಾಲಕ್ಕೆ ಶೌಚಾಲಯ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸುವುದು.

ಹೆಸರು ನೋಂದಾಯಿಸಿಕೊಳ್ಳಿ: ಯಾರೊಬ್ಬರೂ ಶೌಚಾಲಯ ವ್ಯಾಪ್ತಿಯಿಂದ ಹೊರಗುಳಿಯದಂತೆ ಮಾಡಲು ನಿಗದಿಪಡಿಸಲಾದ ಜಿಲ್ಲಾ ಗುರಿ ಹೆಚ್ಚಿಸಲು ಕೂಡಲೇ ಕೇಂದ್ರ ಕಚೇರಿಗೆ ಮಾಹಿತಿ ನೀಡುವುದು. ಶೌಚಾಲಯ ರಹಿತ ಫ‌ಲಾನುಭವಿಗಳ ಹೆಸರುಗಳನ್ನು ದಾಖಲಿಸಲು ಮಾ.31 ಕೊನೆಯ ದಿನವಾಗಿದೆ. ಶೌಚಾಲಯ ನಿರ್ಮಾಣವನ್ನು ಅತ್ಯಂತ ತುರ್ತು ಹಾಗೂ ಪ್ರಥಮಾದ್ಯತೆ ಎಂದು ಪರಿಗಣಿಸಿ ಪ್ರಸ್ತುತ ಶೌಚಾಲಯ ನಿರ್ಮಾಣಕ್ಕೆ ನೀಡಲಾಗಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.