ಕೆಆರ್ಎಸ್ ಭರ್ತಿಗೆ 4 ಅಡಿ ಬಾಕಿ
ಜಲಾಶಯದಲ್ಲಿ ನೀರಿನ ಮಟ್ಟ 120 ಅಡಿಗೆ ಏರಿಕೆ ಗರಿಷ್ಟ ಮಟ್ಟ ತಲುಪಲು 124.80 ಅಡಿ
Team Udayavani, Oct 21, 2021, 1:01 PM IST
ಶ್ರೀರಂಗಪಟ್ಟಣ: ಕಳೆದ 15 ದಿನಗಳಿಂದ ಕೊಡಗಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಸಾಕಷ್ಟು ನೀರು ಜಲಾಶಯಕ್ಕೆ ಹರಿದು ಬಂದಿದ್ದರಿಂದ ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಕೇವಲ ನಾಲ್ಕು ಅಡಿಗಳು ಬಾಕಿ ಇದೆ. ಕಳೆದ ನಾಲ್ಕು ದಿನಗಳಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿ ಹರಿದು ಬಂದು ಕುಸಿದಿದ್ದ ಜಲಾಶಯದ ನೀರಿನ ಮಟ್ಟ ಮತ್ತೇ 120 ಅಡಿಗೆ ಏರಿಕೆ ಕಂಡು ಬಂದಿದೆ. ಕಳೆದ 15 ದಿನಗಳ ಹಿಂದೆ ಜಲಾಶಯಕ್ಕೆ ಕಡಿಮೆ ಅಂತರದಲ್ಲಿ ನೀರು ಹರಿದು ಬಂದು ಹೆಚ್ಚಿನ ಅಂತರದಲ್ಲಿ ತಮಿಳುನಾಡಿಗೆ ಕಾವೇರಿ ನದಿ ಮೂಲಕ ನೀರು ಹರಿಸಲಾಗಿತ್ತು.
ಕನಸಾಗಿಯೇ ಉಳಿದ ಬಾಗಿ ನ: ಸೆಪ್ಟೆಂಬ ರ್, ಅಕ್ಟೋಬರ್ ತಿಂಗಳ ನೀರನ್ನು ಈ ಬಾರಿ ತಮಿಳುನಾಡಿಗೆ ನೀಡಿದ್ದರಿಂದ ಮುಂಗಾರು ಮಳೆ ಇದ್ದರೂ ಸಂಪೂರ್ಣ ಜಲಾಶಯ ಗರಿಷ್ಠ ಮಟ್ಟ ಭರ್ತಿಆಗಲೇ ಇಲ್ಲ . ಮುಖ್ಯಮಂತ್ರಿಗಳಿಂದ ಈ ಬಾರಿ ಗೌರಿ ಗಣೇಶನ ಹಬ್ಬಕ್ಕಿಂತಲೂ ಮುಂಚಿತವಾಗಿ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಪೂಜೆ ಆಗಬೇಕಿತ್ತು. ಆದರೂ ಈ ವರ್ಷದಲ್ಲಿ ಇಲ್ಲಿವರೆಗೆ ಮುಖ್ಯಂತ್ರಿಗಳಿಂದ ಬಾಗಿನ ಕನಸಾಗಿಯೇ ಉಳಿದಿದೆ.
ಬುಧವಾರ ಸಂಜೆ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 8 ಸಾವಿರ ಕ್ಯುಸೆಕ್ಗೆ ಇಳಿಕೆ
ಪ್ರಸ್ತುತ ಜಲಾಶಯದಲ್ಲಿ 120.05 ಅಡಿ ನೀರಿನ ಮಟ್ಟ
8097 ಸಾವಿರ ಕ್ಯುಸೆಕ್ ಒಳಹರಿವು
6,720 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ
ಇಲ್ಲಿವರೆಗೆ ಜಲಾಶಯದಲ್ಲಿ 43.106 ಟಿಎಂಸಿ ನೀರು ಸಂಗ್ರಹ
ಇದನ್ನೂ ಓದಿ:- ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
9 ಸಾವಿರ ಕ್ಯುಸೆಕ್ ಹೆಚ್ಚು ನೀರು: ಇದೀಗ ಮತ್ತೇ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗಿ ನೀರಿನ ಮಟ್ಟ ಏರಿಕೆ ಕಂಡು ಬಂದಿದೆ. ಗರಿಷ್ಠ ಮಟ್ಟ ತಲುಪಲು 124.80 ಅಡಿಗಳಾಗಿದ್ದು, ಇಂದಿನ ಮಟ್ಟ 120.08 ಅಡಿಗಳು ತುಂಬಿದೆ. ಜಲಾಶಯ ಒಟ್ಟು 49 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. ಇದು ವರೆಗೆ ಕೊಡಗಿನಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಜಲಾಶಯಕ್ಕೆ ಬುಧವಾರ ಬೆಳಗ್ಗೆ 9 ಸಾವಿರ ಕ್ಯುಸೆಕ್ ಹೆಚ್ಚು ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 05 ಸಾವಿರ ಕ್ಯುಸೆಕ್ ನೀರನ್ನು ಕುಡಿಯಲು ಕಾವೇರಿ ನದಿಗೆ ಹಾಗೂ ಬೆಳೆ ಬೆಳೆಯಲು ನಾಲೆಗಳಿಗೆ ಮೂಲಕ ಹರಿಸಲಾಗುತ್ತಿದೆ.
ಬುಧವಾರ ಸಂಜೆ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 8 ಸಾವಿರ ಕ್ಯುಸೆಕ್ಗೆ ಇಳಿಕೆ ಕಂಡು ಬಂದಿದೆ. ಪ್ರಸ್ತುತ ಜಲಾಶಯದಲ್ಲಿ 120.05 ಅಡಿ ನೀರಿನ ಮಟ್ಟ , 8097 ಸಾವಿರ ಕ್ಯುಸೆಕ್ ಜಲಾಶಯಕ್ಕೆ ಒಳಹರಿವಾಗಿದ್ದು ಜಲಾಶಯದಿಂದ 6,720 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇಲ್ಲಿವರೆಗೆ ಜಲಾಶಯದಲ್ಲಿ 43.106 ಟಿಎಂಸಿ ನೀರು ಸಂಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ