ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ
ಬೂಕಹಳ್ಳಿ ಕೊಪ್ಪಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Aug 10, 2019, 2:37 PM IST
ಮರಟೀಕೊಪ್ಪಲು ಗ್ರಾಮದಿಂದ ಬೂಕಹಳ್ಳಿ ಕೊಪ್ಪಲಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಪಂ ಉಪಾಧ್ಯಕ್ಷೆ ಗಾಯಿತ್ರಿ ಚಾಲನೆ ನೀಡಿದರು.
ಕೆ.ಆರ್.ಪೇಟೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ತಾಲೂಕಿನ ಅಭಿವೃದ್ಧಿಗಾಗಿ ಸುಮಾರು 450ಕೋಟಿ ರೂ.ಗೂ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಎಂದು ಜಿಪಂ ಉಪಾಧ್ಯಕ್ಷೆ ಗಾಯಿತ್ರಿರೇವಣ್ಣ ತಿಳಿಸಿದರು.
ತಾಲೂಕಿನ ಬೂಕನಕೆರೆ ಹೋಬಳಿಯ ಮರಟೀಕೊಪ್ಪಲು ಗ್ರಾಮದಿಂದ ಬೂಕಹಳ್ಳಿ ಕೊಪ್ಪಲಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಜೆಡಿಎಸ್ ನಾಯಕರಾದ ಎಚ್ಡಿಕೆ ಅವರು ರಾಜ್ಯದ ಅಭಿವೃದ್ಧಿಗಾಗಿ 14 ತಿಂಗಳು ಹಗಲು ರಾತ್ರಿ ಶ್ರಮಿಸಿದ್ದರು. ನಮ್ಮ ತಾಲೂಕಿನಲ್ಲಿರುವ ರಸ್ತೆಗಳ ಅಭಿವೃದ್ಧಿಗೆಂದು ಸುಮಾರು 150ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ನೀಡಿ ದ್ದಾರೆ. ಇತರೆ ಅಭಿವೃದ್ಧಿ ಕಾಮಗಾರಿಗೂ ಕೋಟ್ಯಂತರ ರೂ., ಅನುದಾನ ನೀಡುವ ಮೂಲಕ ತಾಲೂಕಿನ ಮೇಲೆ ಅಭಿಮಾನವಿಟ್ಟಿದ್ದಾರೆ ಎಂದರು. ಸಾರ್ವ ಜನಿಕರ ತೆರಿಗೆ ಹಣದಿಂದ ನಡೆಯು ತ್ತಿರುವ ಕಾಮಗಾರಿಯನ್ನು ಗುತ್ತಿಗೆದಾ ರರು ಉತ್ತಮ ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡಬೇಕು. ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ, ನೀರು, ವಿದ್ಯುತ್ ಸೌಲಭ್ಯ ಒದಗಿಸಿಕೊಟ್ಟರೆ ರೈತರು ಬೇರೆ ಏನನ್ನೂ ಕೇಳುವುದಿಲ್ಲ. ಹೀಗಾಗಿ ಗುತ್ತಿಗೆ ದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದರೆ ಸಹಿಸುವುದಿಲ್ಲ ಎಂದರು. ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ನಾಗೇಶ್, ಮುಖಂಡ ರಾದ ಹೆಳವೇಗೌಡ, ರಂಗರಾಜು, ಪೂವನಹಳ್ಳಿ ರೇವಣ್ಣ, ರಾಮಕೃಷ್ಣೇಗೌಡ, ಮಂಜೇ ಗೌಡ, ಧನಂಜಯ, ಲೋಕೇಶ್,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ