ಅಕ್ರಮ ಖಾತೆ ವಿರುದ್ಧ 4ನೇ ದಿನವೂ ಪ್ರತಿಭಟನೆ

ಮಾನವ ಹಕ್ಕುಗಳ ಮಿಷನ್‌ ಸಂಘಟನೆ ಮಾನವ ಸರಪಳಿ ರಚಿಸಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆ

Team Udayavani, Jun 14, 2019, 9:53 AM IST

mandya-tdy-2..

ನಿವೇಶನವನ್ನು ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ಕ್ರಮ ಖಂಡಿಸಿ ಮಾನವ ಹಕ್ಕುಗಳ ಮಿಷನ್‌ ಸಂಘಟನೆ ಪದಾಧಿಕಾರಿಗಳು ರಸ್ತೆತಡೆ ನಡೆಸಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಣಿಕಂಠ ಅವರ ಪ್ರತಿಕೃತಿ ದಹಿಸಿದರು.

ಮದ್ದೂರು: ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ಕ್ರಮ ಖಂಡಿಸಿ ಮಾನವ ಹಕ್ಕುಗಳ ಮಿಷನ್‌ ಸಂಘಟನೆಯ ಪದಾಧಿಕಾರಿಗಳು ನಡೆಸುತ್ತಿದ್ದ ಅಹೋರಾತ್ರಿ ಧರಣಿ ನಾಲ್ಕನೇ ದಿನ ಗುರುವಾರವೂ ಮುಂದುವರಿದಿದೆ.

ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ನಿರಂತರ ಧರಣಿ ವೇಳೆ ಪ್ರತಿಭಟನಾನಿರತರು ಮಾನವ ಸರಪಳಿ ರಚಿಸಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದರಲ್ಲದೇ ತಾಪಂ ಇಒ ಮಣಿಕಂಠ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಂಚಾರ ಅಸ್ತವ್ಯಸ್ತ: ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆತಡೆಯಿಂದ ಮೈಸೂರು-ಬೆಂಗಳೂರು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತು. ಕಳೆದ ನಾಲ್ಕು ದಿನಗಳಿಂದಲೂ ಅಹೋರಾತ್ರಿ ಧರಣಿ ಕೈಗೊಂಡಿದ್ದರೂ ಜಿಲ್ಲಾಧಿಕಾರಿಗಳೂ ಸೇರಿದಂತೆ ತಹಶೀಲ್ದಾರ್‌ ಕೂಡ ಘಟನಾ ಸ್ಥಳಕ್ಕೆ ಆಗಮಿಸದೆ ನಿರ್ಲಕ್ಷ್ಯ ವಹಿಸಿರುವ ಕ್ರಮ ಖಂಡಿಸಿದರು.

ತಾಲೂಕು ಆಡಳಿತವೇ ಹೊಣೆ: ಕಳೆದ ಆರು ತಿಂಗಳಿಂದಲೂ ಅಕ್ರಮ ಖಾತೆ ಮಾಡಿಕೊಟ್ಟಿರುವುದನ್ನು ರದ್ಧುಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದು ಇದಕ್ಕೆ ಸಂಪೂರ್ಣ ತಾಲೂಕು ಆಡಳಿತವೇ ಹೊಣೆಯಾಗಲಿದೆ. ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿದರು.

ತಾಪಂ ಇಒಗೆ ತರಾಟೆ: ಸ್ಥಳಕ್ಕಾಗಮಿಸಿದ ತಾಲೂಕು ಪಂಚಾಯಿತಿ ಇಒ ಮಣಿಕಂಠ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಮುಂದಿನ 15 ದಿನದೊಳಗಾಗಿ ಅಕ್ರಮ ಖಾತೆ ಮಾಡಿಕೊಟ್ಟಿರುವ ಸಂಬಂಧ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದ ಮಣಿಕಂಠ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಕೂಡಲೇ ನಿವೇಶನಕ್ಕೆ ಖಾತೆ ಮಾಡಿಕೊಡುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು.

ಗೆಜ್ಜಲಗೆರೆ ಗ್ರಾಮದ ಸರ್ವೆ.ನಂ.267ರ ಜಮೀನನ್ನು ಪಿಡಿಒ ಹಾಗೂ ಹಿಂದಿನ ಗ್ರಾಪಂ ಅಧ್ಯಕ್ಷೆ ನಾಗಮ್ಮ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದು ಇದನ್ನು ಸರಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ ವಹಿಸಿದ್ದಾರೆಂದು ದೂರಿದರು. ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಚಂದ್ರಕುಮಾರ್‌, ಪದಾಧಿಕಾರಿಗಳಾದ ಅಂಬುಜೀ, ರಮೇಶ್‌, ಆಕಾಶ್‌, ಜ್ಯೋತಿ, ಹನುಮ, ಕೃಷ್ಣ, ಬೋರಮ್ಮ, ಕೆಂಪಯ್ಯ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.