ಪರೀಕ್ಷೆಗೆ 545 ವಿದ್ಯಾರ್ಥಿಗಳು ಗೈರು
Team Udayavani, Jun 26, 2020, 5:44 AM IST
ಮಂಡ್ಯ: ಕೋವಿಡ್ 19 ಆತಂಕದ ನಡುವೆಯೂ ಗುರುವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ಯಾವುದೇ ಅಹಿತಕರ ಘಟನೆಗಳಿಲ್ಲದೆ ಯಶಸ್ವಿಯಾಗಿ ಮುಕ್ತಾಯವಾಯಿತು. ಜಿಲ್ಲೆಯಲ್ಲಿ ಇಂಗ್ಲಿಷ್ ಭಾಷಾ ಪರೀಕ್ಷೆಗೆ 20,321 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 19,776 ಹಾಜರಿದ್ದು, 545 ವಿದ್ಯಾರ್ಥಿಗಳು ಗೈರಾದರು. ಗೈರಾದವರ ಪೈಕಿ 99 ಖಾಸಗಿ ಅಭ್ಯರ್ಥಿಗಳಿದ್ದಾರೆ.
ಇನ್ನು ಹೊರ ಜಿಲ್ಲೆಯಿಂದ ಆಗಮಿಸಿ ಮಂಡ್ಯದಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ 225 ವಿದ್ಯಾರ್ಥಿಗಳು ಹಾಜರಿದ್ದರು. 8 ಬ್ಲಾಕ್ನ 82 ಕೇಂದ್ರದಲ್ಲಿ ಪರೀಕ್ಷೆ ನಡೆಯಿತು. ಇದರಲ್ಲಿ ಮಂಡ್ಯದ ಸೆಂಟ್ಜಾನ್ ಪ್ರೌಢಶಾಲೆ, ರೋಟರಿ ಪ್ರೌಢಶಾಲೆಯನ್ನು ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿತ್ತು. ಇನ್ನು ಎಲ್ಲ ಪರೀಕ್ಷಾ ಕೇಂದ್ರದಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ವಿದ್ಯಾರ್ಥಿಗಳು, ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡಲಾಗಿದ್ದು, ಸ್ಯಾನಿಟೈಸರ್ ಕೊಟ್ಟು ಕೇಂದ್ರಕ್ಕೆ ಕರೆದುಕೊಳ್ಳಲಾಯಿತು. ಇನ್ನು ಕೇಂದ್ರದಲ್ಲಿಯೂ ಪರೀಕ್ಷಾ ಮಂಡಳಿ ಸೂಚನೆಯಂತೆ ಪ್ರತಿ ವಿದ್ಯಾರ್ಥಿಗೂ 3 ಅಡಿ ದೈಹಿಕ ಅಂತರ ಇರುವಂತೆ ವ್ಯವಸ್ಥೆ ಮಾಡಲಾಗಿತ್ತು. ಇದೇ ನಿಯಮವನ್ನು ಥರ್ಮಲ್ ಸ್ಕ್ರೀನಿಂಗ್ ಮಾಡುವ ವೇಳೆಯ ಅನುಸರಿಸಲಾಯಿತು.
ಜ್ವರ, ನೆಗಡಿ, ಕೆಮ್ಮುನಿಂದ ಬಳಲುತ್ತಿದ್ದ 15 ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ, ಪರೀಕ್ಷೆ ಬರೆಸಲಾಯಿತು. ವಿದ್ಯಾರ್ಥಿ ಗಳಿಗೆ ವಾಹನ ಸಮಸ್ಯೆಯಾದರೆ ಸಹಾಯವಾಗಲೆಂದು ಪ್ರತಿ ತಾಲೂಕಿನಲ್ಲಿಯೂ ಬಸ್ ಸೌಲಭ್ಯ ಮಾಡಲಾಯಿತು. ಜಿಲ್ಲಾ ಮತ್ತು ತಾಲೂಕು ಖಜಾನೆಯಲ್ಲಿರಿಸಿದ್ದ ಪ್ರಶ್ನೆಪತ್ರಿಕೆಗಳನ್ನು ತಹಶೀಲ್ದಾರ್, ಬಿಇಒ ಸಮ್ಮುಖದಲ್ಲಿ ಕೇಂದ್ರಕ್ಕೆ ರವಾನಿಸಲಾಯಿತು.
ಜಿಲ್ಲಾಧಿಕಾರಿ ಭೇಟಿ: ಪರೀಕ್ಷೆ ಹಿನ್ನೆಲೆಯಲ್ಲಿ ಡೀಸಿ ಡಾ. ಎಂ.ವಿ.ವೆಂಕಟೇಶ್ ನಗರದ ಕಾರ್ಮೆಲ್ ಕಾನ್ವೆಂಟ್, ಮಾಜಿ ಪುರಸಭೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ