8 ದಿನದಲ್ಲಿ 6.76 ಲಕ್ಷ ರೂ. ದಂಡ ವಸೂಲಿ


Team Udayavani, Sep 14, 2019, 1:21 PM IST

mandya-tdy-1

ದ್ವಿಚಕ್ರ ವಾಹನಗಳ ದಾಖಲೆ ಪರಿಶೀಲಿಸುತ್ತಿರುವ ಪೊಲೀಸರು.

ಮಂಡ್ಯ: ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ದಂಡ ಪ್ರಯೋಗ ಇದೀಗ ಜಿಲ್ಲೆಯಲ್ಲಿ ಸದ್ದಿಲ್ಲದೆ ಜಾರಿಯಾಗಿದೆ. ಸೆ.1ರಿಂದ ವಿಧಿಸಲಾಗುತ್ತಿರುವ ದಂಡ ಮೊತ್ತದ ಬಿಸಿಗೆ ಜಿಲ್ಲೆಯ ಜನರು ಹೈರಾಣಾಗಿದ್ದಾರೆ. ಕೇವಲ ಎಂಟು ದಿನಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರಿಗೆ 1752 ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು 6.76 ಲಕ್ಷ ದಂಡ ವಸೂಲಿ ಮಾಡಿದ್ದಾರೆ. ಕಳೆದ ಎಂಟು ತಿಂಗಳಲ್ಲಿ 58,699 ಪ್ರಕರಣಗಳು ದಾಖಲಾಗಿ 82.64 ಲಕ್ಷ ರೂ. ದಂಡ ವಸೂಲಿ ಮಾಡಿದೆ.

ಈವರೆಗೆ ಸಂಚಾರ ನಿಯಮಗಳ ಬಗ್ಗೆ ಜಿಲ್ಲೆಯ ಬಹುತೇಕ ಜನರು ಅಷ್ಟಾಗಿ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಯಾವಾಗ ಸಿಕ್ಕ ಸಿಕ್ಕ ಕಡೆಯಲ್ಲೆಲ್ಲಾ ಪೊಲೀಸರು ಅಡ್ಡಗಟ್ಟಿ ವಾಹನಗಳ ತಪಾಸಣೆ ನಡೆಸಿ ದಂಡ ವಸೂಲಿಗೆ ಮುಂದಾದರೋ ಜನರು ಬೆಚ್ಚಿಬಿದ್ದರು. ದುಬಾರಿ ದಂಡ ಭರಿಸಲಾಗದೆ ಹೌಹಾರಿದರು. ಜೇಬಲ್ಲಿದ್ದ ಹಣವೆಲ್ಲವೂ ದಂಡ ಕಟ್ಟುವುದಕ್ಕೆ ಖಾಲಿಯಾಗುತ್ತಿತ್ತು. ಖಾಲಿ ಜೇಬಿನಲ್ಲಿ ಮನೆಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಇದೀಗ ಕೇಂದ್ರ ಸರ್ಕಾರ ಹೊಸ ಮೋಟಾರು ವಾಹನ ಕಾಯಿದೆಯ ನಿಯಮಗಳು ಮತ್ತು ಭಾರಿ ಮೊತ್ತದ ದಂಡ ಪ್ರಯೋಗ ಜಾರಿಯಾದ ನಂತರದಲ್ಲಿ ಜನರಿಗೆ ತಲೆ ಬಿಸಿ ಉಂಟುಮಾಡಿದೆ. ಈಗ ವಾಹನಗಳ ದಾಖಲೆಗಳಿಲ್ಲದೆ ಸಂಚಾರಕ್ಕಿಳಿಯುವುದಕ್ಕೂ ಜನರು ಭಯಪಡುತ್ತಿದ್ದಾರೆ.

ಏನೇನು ಪ್ರಕರಣಗಳು?: ವಾಹನಗಳ ವಿಮೆ, ಆರ್‌ಸಿ, ಎಫ್‌ಸಿ, ಎಮಿಷನ್‌ ಟೆಸ್ಟ್‌ ಪ್ರಮಾಣ ಪತ್ರ, ಡಿಎಲ್ನ್ನು ವಾಹನಗಳ ಚಾಲನೆ ವೇಳೆ ಚಾಲಕರು ತಮ್ಮೊಂದಿಗೆ ಇಟ್ಟುಕೊಳ್ಳುವುದು ಕಡ್ಡಾಯ. ನಿಗದಿತ ವೇಗದಲ್ಲಿ ಮಾತ್ರ ವಾಹನ ಚಾಲನೆ ಮಾಡುವುದು. ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು. ದ್ವಿಚಕ್ರ ವಾಹನಗಳ ಹ್ಯಾಂಡಲ್, ಬಂಪರ್‌ಗಳ ವಿನ್ಯಾಸವನ್ನು ಬದಲಿಸುವಂತಿಲ್ಲ. ಕರ್ಕಶ ಧ್ವನಿಯ ಹಾರ್ನ್ಗಳನ್ನು ಉಪಯೋಗಿಸುವಂತಿಲ್ಲ. ರಸ್ತೆಯಲ್ಲಿ ವಾಹನ ಚಾಲನೆ ವೇಳೆ ವ್ಹೀಲಿಂಗ್‌ ಮಾಡುವಂತಿಲ್ಲ, ತ್ರಿಬ್ಬಲ್ ರೈಡಿಂಗ್‌ಗೂ ನಿಷೇಧವಿದೆ. ಅದೇ ರೀತಿ ನಾಲ್ಕು ಚಕ್ರದ ವಾಹನಗಳ ಬಂಪರ್‌ಗಳ ವಿನ್ಯಾಸವೂ ಮೂಲ ರೂಪದಲ್ಲೇ ಇರಬೇಕು. ವಾಹನಗಳಿಗೆ ಅಧಿಕ ಭಾರ ಹಾಕುವಂತಿಲ್ಲ ಎಂಬುದು ಸೇರಿದಂತೆ ಸಾಕಷ್ಟು ನಿಯಮಗಳನ್ನು ಚಾಲಕರು ವಾಹನ ಚಾಲನೆ ವೇಳೆ ಪಾಲಿಸುವುದು ಅನಿವಾರ್ಯವಾಗಿದೆ.

ಕುಡಿದು ವಾಹನ ಚಾಲನೆ ಪ್ರಕರಣ 20: ಕುಡಿದು ವಾಹನ ಚಾಲನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ 7 ದಿನಗಳಲ್ಲಿ 20 ಪ್ರಕರಣಗಳು ವರದಿಯಾಗಿವೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರನ್ನು ತಪಾಸಣೆ ನಡೆಸಿ ದಂಡ ಮೊತ್ತ ಪಾವತಿಸಲು ನ್ಯಾಯಾಲಯಕ್ಕೆ ಕಳುಹಿಸಲಾಗುತ್ತದೆ. ಆದರೆ, ಸಂಚಾರ ನಿಯಮಗಳನ್ನು ಉಲ್ಲಂಘನೆ, ಚಾಲನಾ ಪರವಾನಗಿ, ವಾಹನಗಳ ದಾಖಲೆಗಳನ್ನು ಹೊಂದಿಲ್ಲದವರ ವಿರುದ್ಧವೂ ಹೊಸ ಮೋಟಾರು ವಾಹನ ಕಾಯಿದೆಯ ಪ್ರಕಾರ ಸ್ಥಳದಲ್ಲೇ ಪ್ರಕರಣ ದಾಖಲಿಸಿ ದುಬಾರಿ ದಂಡವನ್ನು ಅಲ್ಲೇ ವಸೂಲಿ ಮಾಡಲಾಗುತ್ತಿದೆ.

ಜಿಲ್ಲೆಯ ಜನರಲ್ಲಿ ತಲ್ಲಣ ಸೃಷ್ಟಿಸಿರುವ ಹೊಸ ಮೋಟಾರು ವಾಹನ ಕಾಯಿದೆ ಜಾರಿ ಹಾಗೂ ದುಬಾರಿ ಮೊತ್ತದ ದಂಡ ಪ್ರಯೋಗ ಎಲ್ಲರಲ್ಲೂ ಭಯ ಹುಟ್ಟಿಸಿದೆ. ಹೀಗಾಗಿ ವಾಹನ ಚಾಲನಾ ಪರವಾನಗಿ ಮತ್ತು ವಾಹನಗಳ ವಿಮೆ ಮಾಡಿಸಿಕೊಳ್ಳಲು ಜನರು ಮುಗಿ ಬಿದ್ದಿದ್ದಾರೆ. ವಾಹನಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನವೀಕರಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಹೊಸದಾಗಿ ವಾಹನ ಚಾಲನಾ ಪರವಾನಗಿ ಪಡೆಯುವವರು, ನವೀಕರಣ ಮಾಡಿಸುವವರು ಹಾಗೂ ದ್ವಿಚಕ್ರ ವಾಹನ ಚಾಲನಾ ಪರವಾನಗಿ ಹೊಂದಿದ್ದವರು ನಾಲ್ಕು ಚಕ್ರದ ವಾಹನದ ಚಾಲನಾ ಪರವಾನಗಿ ಪತ್ರ ಪಡೆಯಲು ಸಲ್ಲಿಸುತ್ತಿರುವ ಅರ್ಜಿಗಳ ಸಂಖ್ಯೆ ಕಳೆದೊಂದು ವಾರದಿಂದ ಹೆಚ್ಚಾಗುತ್ತಿದೆ. ಬಹುತೇಕರು ಸೈಬರ್‌ ಸೆಂಟರ್‌ಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಹಾಕುತ್ತಿರುವುದರಿಂದ ಆರ್‌ಟಿಒ ಕಚೇರಿಗೆ ಬರುವವರ ಸಂಖ್ಯೆ ಸಹಜವಾಗಿ ಕಡಿಮೆ ಇದೆ. ಕಚೇರಿಗೆ ಅಲೆಯಲು ಬಯಸದ ಬಹಳಷ್ಟು ಜನರು ಮಧ್ಯವರ್ತಿಗಳ ಮೂಲಕ ವಾಹನಗಳ ದಾಖಲೆ ಸಂಗ್ರಹಕ್ಕೆ ಅರ್ಜಿ ಹಾಕುತ್ತಿದ್ದಾರೆ. ಆದರೆ, ಆರ್‌ಟಿಒ ಕಚೇರಿಯಲ್ಲಿ ಚಾಲನಾ ಪರವಾನಗಿ ನವೀಕರಣ ಹಾಗೂ ಕಾರು ಬೈಕು ಒಟ್ಟುಗೂಡಿಸಿ ಒಂದೇ ಚಾಲನ ಪರವಾನಗಿ ನೀಡುವ ಸಾಫ್ಟ್ವೇರ್‌ ಬದಲಾಯಿಸಲಾಗಿದೆ. ಅದಿನ್ನೂ ಪೂರ್ಣಪ್ರಮಾಣದಲ್ಲಿ ಅಪ್‌ಡೇಟ್ ಆಗದಿರುವ ಹಿನ್ನೆಲೆಯಲ್ಲಿ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಇದರ ಜೊತೆಗೆ ಆರ್‌ಟಿಒ ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿಯೂ ಕಚೇರಿ ಕೆಲಸಗಳೆಲ್ಲವೂ ಮಂದಗತಿಯಲ್ಲಿ ಸಾಗುತ್ತಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.