ಶಾಲಾ-ಕಾಲೇಜಲ್ಲಿ ಶೇ.60 ಹಾಜರಾತಿ ಹೆಚ್ಚಳ

8,643 ಶಿಕ್ಷಕರಿಗೆ ಕೋವಿಡ್ ಪರೀಕ್ಷೆ , ಎಲ್ಲ ವರದಿಗಳು ನೆಗೆಟಿವ್‌ „ ವಿದ್ಯಾರ್ಥಿಗಳಿಗೆ ಆತಂಕ ದೂರ

Team Udayavani, Jan 6, 2021, 1:14 PM IST

ಶಾಲಾ-ಕಾಲೇಜಲ್ಲಿ ಶೇ.60 ಹಾಜರಾತಿ ಹೆಚ್ಚಳ

ಮಂಡ್ಯ: ಜಿಲ್ಲೆಯಲ್ಲಿ ಜ.1ರಿಂದ ಶಾಲೆ ಹಾಗೂಕಾಲೇಜುಗಳು ಆರಂಭಗೊಂಡಿದ್ದು, ಇಲ್ಲಿಗೆ 5 ದಿನಗಳು ಕಳೆದಿದ್ದು, ಹಾಜರಾತಿಯಲ್ಲಿ ಏರಿಕೆ ಕಂಡಿದೆ.

ಸಮಯ ನಿಗದಿಯಂತೆ 7ರಿಂದ 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆರಂಭಿಸಲಾಗಿತ್ತು. ಮೊದಲ ದಿನ ಆತಂಕದಿಂದಲೇ ಶಾಲೆಗೆಆಗಮಿಸಿದ್ದ ವಿದ್ಯಾರ್ಥಿಗಳಿಗೆ ಈಗ ಆತಂಕ ದೂರವಾಗಿದ್ದು, ನಿರಾಳರಾಗಿದ್ದಾರೆ.

ಶೇ.60ರಷ್ಟು ಹಾಜರಾತಿ ಹೆಚ್ಚಳ: ಮೊದಲ ದಿನ ಶೇ.30ರಷ್ಟಿದ್ದ ವಿದ್ಯಾರ್ಥಿಗಳ ಹಾಜರಾತಿಯಲ್ಲಿ 5 ದಿನಗಳ ಬಳಿಕ ಶೇ.60ರಷ್ಟು ಏರಿಕೆ ಕಂಡಿದೆ. ಶಾಲೆ ಹಾಗೂ ಕಾಲೇಜುಗಳ ಎರಡರಲ್ಲೂ ಶೇ.60ರಷ್ಟು ಹೆಚ್ಚಳವಾಗಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚು: ನಗರ ಪ್ರದೇಶಕ್ಕೆ ಹೋಲಿಸಿಕೊಂಡರೆ ಗ್ರಾಮೀಣ ಭಾಗದಲ್ಲಿ ಹಾಜರಾತಿ ಹೆಚ್ಚಳವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿನ ಭಯ ಕಡಿಮೆಯಾಗಿರುವುದು. ಶಾಲೆ ಹಾಗೂ ಕಾಲೇಜು ಹತ್ತಿರವಿರುವುದರಿಂದ ಪೋಷಕರು ಮಕ್ಕಳನ್ನು ಯಾವುದೇ ಭಯವಿಲ್ಲದೆ ಕಳುಹಿಸುತ್ತಿದ್ದಾರೆ. ಇದರಿಂದ ಹಾಜರಾತಿ ಹೆಚ್ಚಿದೆ.

8643 ಶಿಕ್ಷಕರಿಗೆ ನೆಗೆಟಿವ್‌: ಶಾಲಾ-ಕಾಲೇಜು ಆರಂಭ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳ ಶಿಕ್ಷಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅದರಂತೆ ಇಲ್ಲಿಯವರೆಗೆ ಸುಮಾರು 8643 ಶಿಕ್ಷಕ ಹಾಗೂ ಶಿಕ್ಷಕ ವೃಂದವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್‌ ಬಂದಿದೆ. ಇನ್ನೂ ಕೆಲವು ಶಿಕ್ಷಕರ ವರದಿ ಬರಬೇಕಾ ಗಿದೆ. ಅಲ್ಲದೆ, ಮಾದರಿ ಸಂಗ್ರಹವೂ ಸಹ ನಡೆಯುತ್ತಿದೆ.

ಮಕ್ಕಳಿಗಿಲ್ಲ ಪರೀಕ್ಷೆ: ಶಾಲೆಯ ಯಾವುದೇ ಮಕ್ಕಳಿಗೆ ಕೋವಿಡ್ ಪರೀಕ್ಷೆ ನಡೆಸುತ್ತಿಲ್ಲ. ಬದಲಾಗಿ ಪ್ರತಿದಿನ ಶಾಲೆಗೆ ಬರುವ ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಪರೀಕ್ಷೆ ನಡೆಸಲಾಗುತ್ತಿದ್ದು, ದೇಹದಲ್ಲಿನ ಉಷ್ಣಾಂಶ ಹೆಚ್ಚಿರುವ ವಿದ್ಯಾರ್ಥಿಗಳು ಹಾಗೂ ನೆಗಡಿ, ಕೆಮ್ಮು, ಜ್ವರದಂಥ ಸೋಂಕಿನ ಲಕ್ಷಣಗಳು ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸೂಚಿಸಲಾಗುತ್ತಿದೆ.

ಹಾಸ್ಟೆಲ್‌ ಹಾಗೂ ವಸತಿ ನಿಲಯಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಇದುವರೆಗೂ ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿಲ್ಲ.

 

ಶಾಲೆಗಳಿಗೆ 2.07 ಲಕ್ಷ ಮಕ್ಕಳು ಪ್ರವೇಶ :

ಜಿಲ್ಲೆಯಲ್ಲಿ 2525 ಶಾಲೆಗಳಿದ್ದು, ಈ ಪೈಕಿ 1810 ಸರ್ಕಾರಿ ಶಾಲೆಗಳು, 715 ಖಾಸಗಿ ಶಾಲೆಗಳಿವೆ. ಈಗಾಗಲೇ 2.07 ಲಕ್ಷ ಮಕ್ಕಳು ಶಾಲೆಗಳಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ 159 ಪಿಯು ಕಾಲೇಜುಗಳಿವೆ. ಈಪೈಕಿ 11 ಕಾಲೇಜುಗಳಿಗೆ ವಿದ್ಯಾರ್ಥಿಗ ಳದಾಖಲಾತಿ ನಡೆದಿಲ್ಲ. ಉಳಿದ 148ರಲ್ಲಿ 70ಸರ್ಕಾರಿ, 25 ಅನುದಾನಿತ, 2 ಮೊರಾರ್ಜಿದೇಸಾಯಿ ಹಾಗೂ 51 ಖಾಸಗಿ ಅನುದಾನ ರಹಿ ಕಾಲೇಜುಗಳು. ನವೆಂಬರ್‌ ಅಂತ್ಯದವರೆಗೆ ಪ್ರಥಮ ಪಿಯುಗೆ 13,236, ದ್ವಿತೀಯ ಪಿಯುಗೆ 12,299 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಜಿಲ್ಲೆಯ ಯಾವುದೇ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕವರ್ಗದವರಿಗೂ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲ. ಅಧ್ಯಾಪಕರು ಕೋವಿಡ್   ಪರೀಕ್ಷೆ ಮಾಡಿಸಿಕೊಂಡಿದ್ದು, ಎಲ್ಲರಿಗೂ ನೆಗೆಟಿವ್‌ ಬಂದಿದೆ. ಕೆ.ಜಿ.ಗುರುಸ್ವಾಮಿ, ಡಿಡಿಪಿಯು, ಮಂಡ್ಯ

ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನಡೆಸಲಾ ಗುತ್ತಿದೆ. ಇದುವರೆಗೂ ಯಾರಿಗೂ ಸೋಂಕು ಕಂಡು ಬಂದಿಲ್ಲ. ಎಲ್ಲರದ್ದು ನೆಗೆಟಿವ್‌ ವರದಿ ಬಂದಿದೆ. ಅಲ್ಲದೆ, ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ಬ್ರಿಟನ್‌ನಿಂದ ಜಿಲ್ಲೆಗೆ 20 ಮಂದಿ ಆಗಮಿಸಿದ್ದು, ಎಲ್ಲರ ವರದಿ ನೆಗೆಟಿವ್‌ ಬಂದಿದೆ. ಇದರಿಂದ ರೂಪಾಂತರಿ ವೈರಸ್‌ನ ಭೀತಿ ಇಲ್ಲ. ಻ಡಾ.ಸಂಜಯ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಡ್ಯ

 

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.