75 ವರ್ಷದ ಅಜ್ಜಿ ಗ್ರಾಪಂ ಅಧ್ಯಕ್ಷೆ
Team Udayavani, Feb 17, 2021, 2:49 PM IST
ಭಾರತೀನಗರ: ಕೊಕ್ಕರೆ ಬೆಳ್ಳೂರು ಗ್ರಾಪಂ ಅಧ್ಯಕ್ಷರಾಗಿ 75 ವರ್ಷದ ಅಜ್ಜಿಯೊಬ್ಬರು ಆಯ್ಕೆಯಾಗಿದ್ದಾರೆ.
ಕೊಕ್ಕರೆ ಬೆಳ್ಳೂರು ಗ್ರಾಪಂ ಅಧ್ಯಕ್ಷರಾಗಿ ಭೀಮನ ಕೆರೆ ಗ್ರಾಮದ 75 ವರ್ಷದ ಅಜ್ಜಿ ಜಯ ಲಕ್ಷ್ಮಮ್ಮ ಆಯ್ಕೆಯಾಗಿರುವುದು
ಯುವಕರಿಗೆ ಅಚ್ಚರಿ ಮೂಡಿದೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ 7 ಮೊಮ್ಮಕ್ಕಳಿರುವ ಜಯಲಕ್ಷ್ಮಮ್ಮ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿ, 3 ಮತಗಳ ಅಂತರದಲ್ಲಿ ಜಯಗಳಿಸಿದ್ದರು. ಗ್ರಾಪಂ ಅಧ್ಯಕ್ಷರ ಸ್ಥಾನ ಪ.ಜಾ ಮಹಿಳೆಗೆ ಮೀಸಲಾಗಿದ್ದರಿಂದ ಜಯಲಕ್ಷ್ಮಮ್ಮ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. 16 ಸದಸ್ಯರನ್ನು ಹೊಂದಿರುವ ಗ್ರಾಪಂಗೆ ಕಾಂಗ್ರೆಸ್ -ಬಿಜೆಪಿ ಬೆಂಬಲಿತರ 11 ಸದಸ್ಯರ ಬಲದೊಂದಿಗೆ ಜಯ ಲಕ್ಷ್ಮಮ್ಮ ಆಯ್ಕೆಗೊಂಡಿದ್ದಾರೆ.
ಜನರ ಬೆಂಬಲ, ಸದಸ್ಯರ ಸಹಕಾರದಿಂದ ಅಧ್ಯಕ್ಷರಾಗಿದ್ದೇನೆ. ಯಾವುದೇ ಕೆಲಸಕ್ಕೆ ವಯಸ್ಸು ಮುಖ್ಯವಲ್ಲ, ಉತ್ಸಾಹ, ಚೈತನ್ಯ ಮುಖ್ಯ, ಜನರ ಸೇವೆಗೆ ಒಳ್ಳೆಯ ಅವಕಾಶ ಸಿಕ್ಕಿದೆ. –ಜಯಲಕ್ಷ್ಮಮ್ಮ, ಅಧ್ಯಕ್ಷರು, ಕೊಕ್ಕರೆ ಬೆಳ್ಳೂರು ಗ್ರಾಪಂ
ಮಕ್ಕಳು ಶ್ರದ್ಧೆಯಿಂದ ವ್ಯಾಸಂಗ ಮಾಡಿ :
ಕೆ.ಆರ್.ಪೇಟೆ: ಹೆಣ್ಣು ಮಕ್ಕಳು ಜೀವನದಲ್ಲಿ ಸವಾಲು, ಸಮಸ್ಯೆ ಎದುರಿಸಿ ಶ್ರದ್ಧೆಯಿಂದ ವ್ಯಾಸಂಗ ಮಾಡಬೇಕು ಎಂದು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವ್ಯವಸ್ಥಾಪಕ ಬಿ.ಎ.ಮಂಜು ನಾಥ್ ತಿಳಿಸಿದರು.
ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮದಲ್ಲಿ ಮಾತನಾಡಿ, ಪದವಿ ಶಿಕ್ಷಣವು ವಿದ್ಯಾರ್ಥಿಗಳ ಸಾಧನೆ ಹಾಗೂ ಉಜ್ವಲ ಭವಿಷ್ಯಕ್ಕೆ ಬುನಾದಿ. ಇದರಿಂದ ಪುಸ್ತಕ, ಪತ್ರಿಕೆ ಗಳನ್ನು ಚೆನ್ನಾಗಿ ಓದಿಕೊಂಡು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು. ಇಂದು ಹೆಣ್ಣು ಮಕ್ಕಳು ಸಮಾಜದ ಶಕ್ತಿಯಾಗಿದ್ದು, ಒಂದು ಕುಟುಂಬ ಸೇರಿದಂತೆ ಸಮಾಜದ ಮುನ್ನಡೆಯಲ್ಲಿಹೆಣ್ಣು ಮಕ್ಕಳ ಪಾತ್ರವು ನಿರ್ಣಾಯಕವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಸಿ. ರಮೇಶ್, ಕಸಾಪ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ಡಾ.ಟಿ.ಎಂ.ದೇವರಾಜು, ಗ್ರಂಥ ಪಾಲಕಿ ಡಾ.ಪ್ರಮೋದಿನಿ, ಗಾಯತ್ರಮ್ಮ, ನಂಜುಂಡಯ್ಯ, ರಾಜಣ್ಣ, ಧನಂಜಯ, ಶ್ಯಾಂ ಪ್ರಸಾದ್ ಉಪಸ್ಥಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು
75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ
5 ಕೋ. ರೂ.ಡೀಲ್ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್ ಕಲ್ಲಹಳ್ಳಿ ಪ್ರಶ್ನೆ
ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ
ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ