ಮಳೆಯಿಂದ 759.22 ಕೋಟಿ ರೂ. ನಷ್ಟ
Team Udayavani, Sep 5, 2022, 2:25 PM IST
ಮಂಡ್ಯ: ಮಳೆ ಹಾನಿಗೊಳಗಾದ ಪ್ರದೇಶಗಳನ್ನು ಈಗಾಗಲೇ ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 759.22 ಕೋಟಿ ರೂ. ನಷ್ಟ ಸಂಭ ವಿಸಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಜಯರಾಂ ರಾಯಪುರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಬಹಳ ಹಾನಿ ಉಂಟಾಗಿದೆ. ಜೂನ್ 1ರಿಂದ ಸೆಪ್ಟಂಬರ್ 1ರ ವರೆಗೆ ಜಿಲ್ಲೆಯಾದ್ಯಂತ 759.22 ಕೋಟಿ ರೂ. ನಷ್ಟವಾ ಗಿದ್ದು, ಮಳೆ ಹಾನಿಗೊಳಗಾದ ಕೆರೆಗಳನ್ನು ಶೀಘ್ರದಲ್ಲೇ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳಿಂದ ಕೆರೆಗಳ ಪರಿಶೀಲನೆ: ಕೆ.ಆರ್.ಪೇಟೆ ತಾಲೂಕಿನ ಅಘಲಯ ಕೆರೆ, ದೊಡ್ಡಕ್ಯಾತನ ಕೆರೆ, ಮಾವಿನ ಕಟ್ಟೆಕೊಪ್ಪಲು ಕೆರೆ ಹಾಗೂ ಲೋಕನಹಳ್ಳಿಯ ಕೆರೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳು ಯಾವ ರೀತಿಯಾಗಿ ಪರಿ ಹಾರ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂಬು ದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ಚಿಕ್ಕಮಂಡ್ಯ, ಬೀಡಿ ಕಾಲೋನಿಯಲ್ಲಿ ನೀರು ನುಗ್ಗಿರುವ ಹಾಗೂ ಕೆನಲ್, ರಸ್ತೆ ಹಾನಿಗಳನ್ನು ಪರಿಶೀಲನೆ ಮಾಡಿ ಮಾಹಿತಿ ಪಡೆದು ಕೊಂಡು ಅಧಿಕಾರಿಗಳಿಗೆ ಕೆಲಸ ನಿರ್ವಹಿಸಲು ಸೂಚನೆಯನ್ನು ನೀಡಲಾಗಿದೆ ಎಂದು ಹೇಳಿದರು.
ಮನೆ ಹಾನಿಗೆ ಪರಿಹಾರ: ಮಂಡ್ಯ ಜಿಲ್ಲೆಯಲ್ಲಿ ಒಟ್ಟು 2 ಮಾನವ ಹಾನಿಯಾಗಿದ್ದು, 10 ಲಕ್ಷ ರೂ. ಪರಿಹಾರ ನೀಡಲಾಗಿದೆ. 42 ಮನೆ ಗಳು ಸಂಪೂರ್ಣ ಹಾನಿಯಾಗಿವೆ. ತೀವ್ರ ಹಾನಿ 159, ಭಾಗಶಃ ಹಾನಿ 707 ಸೇರಿದಂತೆ ಒಟ್ಟು 908 ಮನೆಗಳಿಗೆ ಹಾನಿಯಾಗಿದ್ದು, 5,44,6 5,100 ರೂ. ಪರಿಹಾರವಾಗಿ ನೀಡಲಾಗಿದೆ ಎಂದರು. 8 ದೊಡ್ಡ ಜಾನುವಾರುಗಳು, 46 ಸಣ್ಣ ಜಾನು ವಾರು, 4200 ಕೋಳಿಗಳು ನಷ್ಟವಾಗಿದೆ. ಇವುಗಳಿಗೆ 3.88 ಲಕ್ಷ ರೂ. ಪರಿಹಾರವಾಗಿ ನೀಡಲಾಗಿದೆ. ಕೃಷಿ ಬೆಳೆ(ಹೆಕ್ಟರ್ಗಳಲ್ಲಿ) 295.80, ತೋಟಗಾರಿಕಾ ಬೆಳೆ 728.77 ಹೆಕ್ಟೇರ್ ಹಾನಿಯಾಗಿದ್ದು, ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ಪಾವತಿಗೆ ಕ್ರಮ ವಹಿಸಲಾಗಿದೆ ಎಂದರು.
ಮೂಲ ಸೌಕರ್ಯಗಳ ಹಾನಿಗಳಲ್ಲಿ ಹಳ್ಳಿ ಪ್ರದೇಶ ದಲ್ಲಿ 255.30 ಕಿ.ಮೀ ರಸ್ತೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 260 ಶಾಲೆಗಳು, 1 ಅಂಗನವಾಡಿಗಳು, 28 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1129 ವಿದ್ಯುತ್ ಕಂಬಗಳು ಹಾಗೂ 35 ಟಿಸಿ ಹಾನಿಯಾಗಿದೆ ಎಂದು ಹೇಳಿದರು. ಅನುದಾನಕ್ಕೆ ಅನುಮೋದನೆ: ಶಾಲೆಗಳ ದುರಸ್ತಿಗೆ 466 ಲಕ್ಷ ರೂ., ಅಂಗನವಾಡಿ ಕೇಂದ್ರಕ್ಕೆ 2 ಲಕ್ಷ ರೂ., ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 56 ಲಕ್ಷ ರೂ., ಲೋಕೋಪಯೋಗಿ ಇಲಾಖೆ ದುರಸ್ತಿ ಕಾಮಗಾರಿ ಗಳಿಗೆ 104 ಲಕ್ಷ ರೂ., ಪ್ರವಾಹ, ಮಳೆ ಹಾನಿಯಾಗಿರುವುದನ್ನು ಸರಿ ಪಡಿಸಲು ಇಲಾಖಾವಾರು ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ಜಿಪಂ ಸಿಇಒ ಶಾಂತ ಎಲ್. ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಉಪ ವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ಮತ್ತಿತರರಿದ್ದರು. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಬಹಳ ಹಾನಿ ಉಂಟಾಗಿದೆ. ಜೂನ್ 1ರಿಂದ ಸೆಪ್ಟಂಬರ್ 1ರವರೆಗೆ ಜಿಲ್ಲೆಯಾದ್ಯಂತ 759.22 ಕೋಟಿ ರೂ. ನಷ್ಟವಾಗಿದ್ದು, ಮಳೆ ಹಾನಿಗೊಳಗಾದ ಕೆರೆಗಳನ್ನು ಶೀಘ್ರದಲ್ಲೇ ಸರಿಪಡಿಸಲು ಕ್ರಮ ವಹಿಸಲಾಗುವುದು.– ಜಯರಾಂ ರಾಯಪುರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ