ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ
Team Udayavani, Oct 27, 2021, 5:55 PM IST
ಶ್ರೀರಂಗಪಟ್ಟಣ: ಸರ್ಕಾರಿ ಶಾಲೆಗೆ ಸೇರಲು ಖಾಸಗಿ ಶಾಲೆಯ ವಿದ್ಯಾರ್ಥಿ ಯ ಪೋಷಕರು ವರ್ಗಾವಣೆ ಪತ್ರಕ್ಕೆ ಅರ್ಜಿ ಸಲ್ಲಿಸಿದರೂ ಇಲ್ಲಿವರೆಗೆ ನೀಡಿಲ್ಲ ಎಂದು ವಿದ್ಯಾರ್ಥಿಯ ಪೋಷಕರು ಬಿಇಒ ಕಚೇರಿಗೆ ದೂರು ನೀಡಿದ್ದಾರೆ.
ತಾಲೂಕಿನ ಕಿರಂಗೂರು ಗ್ರಾಮದ ಬಳಿಯ ಖಾಸಗಿಯ ಕ್ರೇಂಬಿಡ್ಜ್ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಜನ್ ಎಂಬ ವಿದ್ಯಾರ್ಥಿಗೆ ಎರಡನೇ ತರಗತಿಗೆ ಪೋಷಕರು ಕಳೆದ ವರ್ಷ ಶೈಕ್ಷಣಿಕ ವರ್ಷದಲ್ಲಿ ವರ್ಗಾವಣೆ ಪತ್ರ (ಟೀಸಿ) ಕೋರಿ ಎಡೆಡ್ ಸರ್ಕಾರಿ ಶಾಲೆಯಿಂದ ಅರ್ಜಿ ಸಲ್ಲಿಸಿರುತ್ತಾರೆ. ಆದರೆ, ಖಾಸಗಿ ಶಾಲೆಯ ಆಡಳಿತ ಮಂಡಳಿ ಶಾಲೆ ಪ್ರಾರಂಭವಾದಾಗ ಕಳುಹಿಸಿಕೊಡುತ್ತೇವೆ ಎಂದು ಹೇಳಿ ಇಲ್ಲಿವರೆಗೆ ಟೀಸಿ ಕಳುಹಿಸದೇ ತಡ ಮಾಡಿದ್ದಾರೆ.
ಇದನ್ನೂ ಓದಿ:- ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ
ಜೂನ್ ತಿಂಗಳಲ್ಲಿ ಮತ್ತೆ ಹೋಗಿ ಟಿಸಿ ನೀವು ಕಳುಹಿಸಿಲ್ಲ ಎಂದು ಕೇಳಿದಾಗ ನಿಮ್ಮ ಮಗನನ್ನು ನಾವು ಈಗ ಪಾಸ್ ಮಾಡಿದ್ದೇವೆ. ನೀವು ಶಾಲಾ ಶುಲ್ಕವನ್ನು ಸಂಪೂರ್ಣ ಕಟ್ಟಿದ್ದರೆ ಮಾತ್ರ ಟಿಸಿಯನ್ನು ಕಳುಹಿಸಿಕೊಡುತ್ತೇವೆ. ಇಲ್ಲವಾದಲ್ಲಿ ಕೊಡುವುದಿಲ್ಲ ಎಂದು ಶಾಲೆ ಮುಖ್ಯಸ್ಥರು ತಿಳಿಸಿದ್ದು, ಬೇರೆ ದಾರಿ ತೋಚದೇ ಬಿಇಒ ಕಚೇರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗೆ ನ್ಯಾಯ ಒದಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದನ್ ಹಾಗೂ ಅಶೋಕ್ ಮತ್ತಿತರರು ಜೊತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ