ತಾರಸಿ ಮೇಲೊಂದು ಪುಟ್ಟ “ಕೀರೆ ಮಡಿ’ ಮಾಡಿ


Team Udayavani, Feb 14, 2017, 4:15 PM IST

6999.jpg

ಭಾರತೀನಗರ: “ಮನಸ್ಸಿದ್ದರೆ ಮಾರ್ಗ’ ಎಂಬ ಗಾದೆ ಮಾತು ಎಲ್ಲರಿಗೂ ಅನ್ವಯಿಸುತ್ತದೆ. ಏನಾದರು ಸಾಧಿಸಬೇಕೆಂದರೆ ಸೋಮಾರಿ ಯಾದವನಿಗೆ ಸಾಕಷ್ಟು ನೆಪಗಳೇ ಉತ್ತರ. ಆದರೆ ಕ್ರೀಯಾಶೀಲರಾದವರಿಗೆ ಮನಸ್ಸೇ ಕೈತೋಟ. ಹೀಗೆ ಮನೆಯ ಹಿಂದೆ-ಮುಂದೆ, ಅಕ್ಕ-ಪಕ್ಕ ಜಾಗವಿಲ್ಲ ನಾವೇನು ಬೆಳೆಯೋಣ ಎನ್ನುವವರಿಗೆ ಇಲ್ಲಿದೆ ಉತ್ತರ.

ದೈನಂದಿನ ಮನೆ ಬಳಕೆಗೆ ಬೇಕಾದ ಸೊಪ್ಪು-ತರಕಾರಿಗಳನ್ನು ಮನೆಯಂಗಲ, ತಾರಸಿಯಲ್ಲಿ ಸ್ವತಃ ಬೆಳೆದುಕೊಳ್ಳುವುದು ಇತ್ತೀಚೆಗೆ ಅಲ್ಲಲ್ಲಿ ಕಾಣುತ್ತಿದ್ದೇವೆ. ಅದ ರಂತೆ ನಮ್ಮ ಗ್ರಾಮೀಣ ಮಹಿಳೆಯರು ಮನೆಯ ಅಸು-ಪಾಸಿನಲ್ಲಿ ಕೀರೆಮಡಿ ಮಾಡಿ ಕೊಂಡು ಸೊಪ್ಪು, ತರಕಾರಿಗಳನ್ನು ಬೆಳೆದುಕೊಳ್ಳುತ್ತಿದ್ದರು.

ಆಧುನಿಕತೆಗೆ ತೆರೆದುಕೊಂಡ ನಮ್ಮ ಬದುಕು ಹಾಗೂ ಕೌಟುಂಬಿಕ ಜೀವನ ಸಂಕೀರ್ಣ ವಾಗುತ್ತಿದೆ. ಅದರಂತೆ ಜನಸಂಖ್ಯೆ ಹೆಚ್ಚಳವಾಗುತ್ತಾ ಮನೆಯ ಸುತ್ತ-ಮುತ್ತ ಖಾಲಿ ಜಾಗವೂ ಇಲ್ಲದಾಗುತ್ತಿದೆ. ಪರಿಣಾಮ “ಕೀರೆ ಮಡಿ’ ಎಂಬ ಪರಿ ಕಲ್ಪನೆಯೇ ಮಾಯವಾಗುತ್ತಿರುವ ಈ ದಿನ ಗಳಲ್ಲಿ ಮಹಡಿಯ ಮೇಲೆ ಕೀರೆ ಮಡಿ ಮಾಡಿಕೊಳ್ಳುವ ಬೆಳವಣಿಗೆ ಕೆಲವೆಡೆ ಕಂಡು ಬಂದಿದೆ.

ಭಾರತೀನಗರದ ನಿವಾಸಿ ದೇವರಾಜು ಅರಸು ಪತ್ನಿ ಗೌರಮ್ಮ ತಮ್ಮ ಮನೆಯ ಮೂರನೇ ಮಹಡಿಯ ಮೇಲಿನ ಜಾಗದಲ್ಲಿ ಮನೆಗೆ ಬೇಕಾದ ತರಕಾರಿ, ಸೊಪ್ಪು, ಹೂವು ಬೆಳೆದಿದ್ದಾರೆ. ಒಂದಷ್ಟು ಮಣ್ಣು ಸಂಗ್ರಹಿಸಿ ಅದಕ್ಕೆ ಚೌಕಟ್ಟು ಮಾಡಿ ಅಗತ್ಯ ಗೊಬ್ಬರ ಮಿಶ್ರಣ ಮಾಡುವ ಮೂಲಕ ಫ‌ಲವತ್ತಾದ ಭೂಮಿಕೆ ಸಿದ್ದಪಡಿಸಿದ್ದಾರೆ. ವಿವಿಧ ಮಾದರಿಯ ಸೊಪ್ಪುಗಳನ್ನು ಬೆಳೆದಿದ್ದು ಅದರ ಸುತ್ತ-ಮುತ್ತ ಪ್ಲಾಸ್ಟಿಕ್‌ ಕುಂಡ‌, ಮಡಿಕೆ, ಅನುಪಯುಕ್ತ ಬಿಂದಿಗೆ, ಬಕೆಟ್‌ಗಳನ್ನು ಅರ್ಧಕ್ಕೆ ಕತ್ತರಿಸಿಕೊಂಡು ಅದನ್ನೆ ಕುಂಡದ ರೀತಿ ಬಳಸಿ ತರಕಾರಿಗಳನ್ನು ಬೆಳೆದಿದ್ದಾರೆ.

ದಿನನಿತ್ಯ ಬಳಕೆಗೆ ಸೊಪ್ಪು, ಕೊತ್ತಂಬರಿ, ಪಾಲಾಕ್‌, ಮೆಂತ್ಯಸೊಪ್ಪು, ಹಸಿ ಮೆಣಸಿನಕಾಯಿ, ಬದನೆ, ದಾಸವಾಳವನ್ನು ಬೆಳೆದಿದ್ದಾರೆ. ಇವುಗಳಿಗೆ ರೋಗ ಮತ್ತುಕೀಟ ಬಾಧೆ ಇಲ್ಲ. ಇದು ಆರೋಗ್ಯಕರ ಮತ್ತು ಪೌಷ್ಟಿಕಾಂಶಯುಕ್ತವಾಗಿದೆ.

ನಾವು ಬಾಡಿಗೆ ಮನೆಯಲ್ಲಿದ್ದೇವೆ. ಸುಮ್ಮನೆ ಕೂತು ಕಾಲಹರಣ ಮಾಡುವ ಬದಲು ಚಿಕ್ಕದೊಂದು ಕೀರೆಮಡಿಯನ್ನು 3ನೇ ಮಹಡಿಯಲ್ಲಿ ಮಾಡಿಕೊಂಡು ಮನೆಗೆ ಅಗತ್ಯವಾದ ಸೊಪ್ಪು, ತರಕಾರಿಯನ್ನು ಬೆಳೆದು ಕೊಳ್ಳುತ್ತಿದ್ದೇನೆ. ಇದರಿಂದ ಆರ್ಥಿಕ ಮಿತ ವ್ಯಯವೂ ಕಾಣಬಹುದು. ಜೊತೆಗೆ ಆರೋಗ್ಯಕರ ಮತ್ತು ತಾಜಾ ಸೊಪ್ಪು, ತರಕಾರಿ ಮನೆ ಬಳಕೆಗೆ ದೊರೆಯುತ್ತದೆ.
-ಗೌರಮ್ಮ, ಗೃಹಿಣಿ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.