ಮತ್ತೆ ಶೌಚಾಲಯ ಸೇರಿದ ಮಹಿಳೆ!


Team Udayavani, Feb 12, 2019, 7:25 AM IST

mathe.jpg

ಶ್ರೀರಂಗಪಟ್ಟಣ: ಮೂರು ತಿಂಗಳ ಹಿಂದೆ ವಾಸಕ್ಕೆ ಮನೆ ಇಲ್ಲದೆ ಶೌಚಾಲಯದಲ್ಲಿ ನೆಲೆಸಿದ್ದ ಮಹಿಳೆಯನ್ನು ಹೊರಗೆ ಕರೆತರಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಕೆಗೆ ಸೂಕ್ತ ನೆಲೆ ಕಲ್ಪಿಸುವಲ್ಲಿ ವಿಫಲರಾಗಿರುವುದರಿಂದ ಆ ಮಹಿಳೆ ಮತ್ತೆ ಶೌಚಾಲಯವನ್ನೇ ಸೇರಿಕೊಂಡಿದ್ದಾಳೆ.

ತಾಲೂಕಿನ ಗಂಜಾಂ ನಿವಾಸಿಯಾಗಿರುವ ನಿರ್ಮಲಾ ತನ್ನ ಎರಡು ಹೆಣ್ಣು ಮಕ್ಕಳೊಂದಿಗೆ ಎರಡು ವರ್ಷಗಳಿಂದ ಗ್ರಾಮದಲ್ಲಿರುವ ಶೌಚಾಲಯದಲ್ಲಿ ನೆಲೆಸಿದ್ದಳು. ಮೂರು ತಿಂಗಳ ಹಿಂದೆ ಈಕೆ ಶೌಚಾಲಯದೊಳಗೆ ಅಸಹನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವುದರ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲಿದ್ದವು.

ಇದರಿಂದ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿ.ರಾಜಮೂರ್ತಿ ಸ್ಥಳಕ್ಕೆ ಆಗಮಿಸಿ ನೆರವಿನ ಭರವಸೆ ನೀಡಿದ್ದರು. ಅಲ್ಲದೆ, ಆ ಮಹಿಳೆಗೆ ತಾತ್ಕಾಲಿಕವಾಗಿ ಬಾಡಿಗೆ ಮನೆ ಮಾಡಿ ಇರಿಸಲಾಗಿತ್ತು. ಕೆಲವು ತಿಂಗಳ ಕಾಲ ಬಾಡಿಗೆ ಹಣ ಪಾವತಿಸುವ ಭರವಸೆ ನೀಡಿ ನಂತರ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದರು.

ಆದರೆ, ನಂತರದಲ್ಲಿ ಬಡ ಮಹಿಳೆ ವಾಸವಿದ್ದ ಬಾಡಿಗೆ ಮನೆಗೆ ಇದುವರೆಗೂ ಅಧಿಕಾರಿಗಳು ಬಾಡಿಗೆ ಹಣ ಪಾವತಿಸಿಲ್ಲ. ಪರ್ಯಾಯ ವ್ಯವಸ್ಥೆ ಕಲ್ಪಿಸುವ ಗೋಜಿಗೂ ಹೋಗಲಿಲ್ಲ. ಇದುವರೆಗೂ ಮನೆಗೆ ಬಾಡಿಗೆ ಹಣ ಪಾವತಿಸದಿದ್ದರಿಂದ ಮಾಲೀಕರು ಹಣ ಪಾವತಿಸುವಂತೆ ಪೀಡಿಸಲು ಆರಂಭಿಸಿದರು. ಬಾಡಿಗೆ ಹಣ ಪಾವತಿಸಲಾಗದ ಮಹಿಳೆ ನಿರ್ಮಲಾ ತನ್ನ ಮಕ್ಕಳೊಂದಿಗೆ ಮತ್ತೆ ಹಿಂದೆ ಇದ್ದ ಶೌಚಾಲಯವನ್ನೇ ಸೇರಿಕೊಂಡಿದ್ದಾರೆ.

ಈಕೆಯನ್ನು ಸ್ಥಳಾಂತರಿಸುವ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿ.ರಾಜಮೂರ್ತಿ ಇಲಾಖೆ ವತಿಯಿಂದ ಆರ್ಥಿಕ ನೆರವಿನ ಭರವಸೆ ನೀಡಿದ್ದರು. ಸಂತ್ರಸ್ತ ಮಹಿಳೆ ಅಧಿಕಾರಿಗಳನ್ನು ಬಾಡಿಗೆ ಹಣ ಕೇಳಿದರೆ ಗದರಿಸಿ ಕಳುಹಿಸಿದ್ದಾರೆ. ಇದುವರೆಗೂ ಯಾವುದೇ ನೆರವನ್ನೂ ನೀಡಿಲ್ಲ. ಅಧಿಕಾರಿ ವರ್ತನೆಯಿಂದ ಬೇಸತ್ತ ಮಹಿಳೆ ನಿರ್ಮಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಪುರಸಭೆಯವರು ಸಂತ್ರಸ್ತ ಮಹಿಳೆಗೆ ಸೂಕ್ತ ಜಾಗ ಗುರುತಿಸಿ ನೆಲೆ ಕಲ್ಪಿಸಿಕೊಡಬೇಕು. ಬಾಡಿಗೆ ಹಣವನ್ನೂ ಅವರೇ ಪಾವತಿಸಬೇಕು. ನಮ್ಮಲ್ಲಿ ನೆಲೆ ಇಲ್ಲದ ಮಹಿಳೆಯರಿಗೆ ನೆಲೆ ಕಲ್ಪಿಸಿಕೊಡುವ ಯಾವುದೇ ಕಾರ್ಯಕ್ರಮಗಳೂ, ಯೋಜನೆಗಳು ಇಲ್ಲ ಎಂದು ಕೈಚೆಲ್ಲಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.