ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ
ನಿರಾಕ್ಷೇಪಣಾ ಪತ್ರ ಕೊಡಲು 30 ಸಾವಿರ ಲಂಚಕ್ಕೆ ಬೇಡಿಕೆ
Team Udayavani, May 6, 2022, 8:06 PM IST
ಮಂಡ್ಯ: ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ದಾಳಿ ನಡೆಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಡ್ಯ ಜಿಲ್ಲಾ ಪರಿಸರ ಅಧಿಕಾರಿಯೊಬ್ಬರು ಬಲೆಗೆ ಬಿದ್ದಿದ್ದಾರೆ.
ಪರಿಸರ ಅಧಿಕಾರಿ ಹೇಮಲತಾ ಎಸಿಬಿ ಬಲೆಗೆ ಬಿದ್ದಿರುವ ಮಹಿಳಾ ಅಧಿಕಾರಿಯಾಗಿದ್ದಾರೆ. ಇವರು ಹಲಗೂರಿನ ಶಶಿಕಾಂತ್ ಎಂಬುವರು ಪೆಟ್ರೋಲ್ ಬಂಕ್ ತೆರೆಯಲು ಪರಿಸರ ನಿರಾಕ್ಷೇಪಣಾ ಪತ್ರ ಕೊಡಲು 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಅದರಂತೆ ಶುಕ್ರವಾರ ಮುಂಗಡವಾಗಿ 15 ಸಾವಿರ ರೂ. ನೀಡಲು ಕಚೇರಿಗೆ ಶಶಿಕಾಂತ್ ಆಗಮಿಸಿದ್ದರು. ಅದಕ್ಕೂ ಮೊದಲೇ ಶಶಿಕಾಂತ್ ಪರಿಸರ ಅಧಿಕಾರಿ ಹೇಮಲತಾ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ಅದರಂತೆ ಎಸಿಬಿ ಅಧಿಕಾರಿಗಳು ಹೆಣೆದ ಬಲೆಗೆ ಮಹಿಳಾ ಅಧಿಕಾರಿ ಹೇಮಲತಾ ಬಿದ್ದಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಮೈಸೂರಿನ ಎಸಿಬಿ ಎಸ್ಪಿ ಎ.ಜೆ.ಸುಜಿತ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಧರ್ಮೇಂದ್ರ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಹಣದ ಸಮೇತ ಬಂಧಿಸಿದ್ದು,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಚಾರಣೆ ನಡೆಯುತ್ತಿದೆ. ದಾಳಿಯಲ್ಲಿ ಇನ್ಸ್ಪೆಕ್ಟರ್ ಪುರುಷೋತ್ತಮ್, ವಿನೋದ್ರಾಜ್, ಸಿಬ್ಬಂದಿಗಳಾದ ಪಾಪಣ್ಣ, ಮಹದೇವು, ಕುಮಾರ್, ವೆಂಕಟೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ