ಹೈವೇಯಲ್ಲಿ ಅಪಘಾತ: ಚಾಲಕರು ಪಾರು
Team Udayavani, May 12, 2021, 7:29 PM IST
ಆಲೂರು: ರಾಷ್ಟ್ರೀಯ ಹೆದ್ದಾರಿ 75ರ ಭರತವಳ್ಳಿ ಕ್ರಾಸ್ ಬಳಿ ಮಂಗಳವಾರ ಮುಂಜಾನೆ 2 ಸರಕು ವಾಹನಗಳ ನಡುವೆ ಅಪಘಾತ ಸಂಭವಿಸಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಈ ಅವಘಡಕ್ಕೀಡಾದ ವಾಹನಗಳು ಮಂಗಳೂರಿನಿಂದ ಬೆಂಗಳೂರಿಗೆ ಸರಕು ತುಂಬಿಕೊಂಡು ಸಂಚರಿಸುತ್ತಿದ್ದ ವಾಹನಗಳಾಗಿದ್ದು. ಮಂಗಳವಾರ ಮುಂಜಾನೆ ಭರತವಳ್ಳಿ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್ ವಾಹನದಚಾಲಕನ ನಿಯಂತ್ರಣ ತಪ್ಪಿ ಮುಂದೆ ಪ್ಲಾಸ್ಟಿಕ್ ತಯಾರಿಕೆಗೆ ಸಂಬಂಧಿಸಿದ ವಸ್ತುಗಳನ್ನುತುಂಬಿಕೊಂಡಿದ್ದ ಸಂಚರಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿರಭಸಕ್ಕೆ ಲಾರಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದು ಚಾಲಕರುಗಳು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನೂ ಟ್ಯಾಂಕರ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಿಸುತ್ತಿದ್ದ ವಾಹನಗಳ ಸಂಚಾರಕ್ಕೆ ಕೆಲ ಸಮಯ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಆಲೂರು ಪೊಲೀಸರು ಆಗಮಿಸಿ ಸಂಚಾರ ಸುಗಮವಾಗುವಂತೆ ನೋಡಿಕೊಂಡರು. ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ