ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುದೂರಿನ ಭಗತ್ ಸಿಂಗ್ ಅಕಾಡೆಮಿ ಕರಾಟೆ ಶಾಲೆಯ ಸಾಧನೆ
Team Udayavani, Aug 8, 2022, 2:10 PM IST
ಮಂಡ್ಯ: ಗೊಜು-ರಿಯು ಕರಾಟೆ ಡು ಅಕಾಡೆಮಿ ಸಂಸ್ಥೆ ಮಂಡ್ಯ, ಇದರ ಆಶ್ರಯದಲ್ಲಿ ನಡೆದ 5ನೇ ರಾಜ್ಯ ಮಟ್ಟದ ಕರಾಟೆ ಟೂರ್ನಮೆಂಟಿನಲ್ಲಿ ಕುದೂರು ಮೂಲದ ಭಗತ್ ಸಿಂಗ್ ಅಕಾಡೆಮಿ ಆಫ್ ಕರಾಟೆ ಸಂಸ್ಥೆಯ ಒಟ್ಟು 44 ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಮೂಲಕ ಕಟಾ ಮತ್ತು ಕುಮಟಿ ವಿಭಾಗದಲ್ಲಿ ಅತಿ ಹೆಚ್ಚಿನ ಬಹುಮಾನಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾರೆ.
ಒಟ್ಟು 44 ಕರಾಟೆ ಸ್ಪರ್ಧಿಗಳ ಪೈಕಿ ಕಟಾ ವಿಭಾಗದಲ್ಲಿ, 3 ವಿದ್ಯಾರ್ಥಿಗಳು ಪ್ರಥಮ, 4 ವಿದ್ಯಾರ್ಥಿಗಳು ದ್ವಿತೀಯ, 18 ವಿದ್ಯಾರ್ಥಿಗಳು ತೃತೀಯ.
ಕುಮಟಿ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಪ್ರಥಮ, 10 ವಿದ್ಯಾರ್ಥಿಗಳು ದ್ವಿತೀಯ, 9 ವಿದ್ಯಾರ್ಥಿಗಳು ತೃತೀಯ ಬಹುಮಾನ ಗಳಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬಹುಮಾನ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಗತ್ ಸಿಂಗ್ ಅಕಾಡೆಮಿ ಕರಾಟೆ ಪ್ರಾಂಶುಪಾಲ ರಮೇಶ್ ಮಾತನಾಡಿ, ಕರಾಟೆ ಎಂಬುದು ಕೇವಲ ಆತ್ಮ ರಕ್ಷಣೆಯ ಕಲೆಯಲ್ಲ, ಇತ್ತೀಚೆಗೆ ಅದು ವಿಭಿನ್ನ ಕಲೆಯಾಗಿ ಹೊರಹೊಮ್ಮುತ್ತಿದೆ, ರಕ್ಷಣೆಯ ವಿಚಾರದಲ್ಲಿ ಪ್ರಸ್ತುತ ಸಮಾಜ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇಂತಹ ಸಮಸ್ಯೆಗಳನ್ನು ಎದುರಿಸಲು ಮಕ್ಕಳನ್ನು ಬಾಲ್ಯದಿಂದಲೇ ತಯಾರಿ ಮಾಡಬೇಕು, ಕರಾಟೆ ಕಲೆ ಸ್ವ ರಕ್ಷಣೆಯ ತಂತ್ರವನ್ನು ಕಲಿಸುವ ಜೊತೆಗೆ, ದೇಶಪ್ರೇಮ, ನಾಯಕತ್ವದ ಗುಣಗಳನ್ನೂ ಸಹ ಬೆಳಸುತ್ತದೆ. ಇಂತಹ ಕಲೆಗಳನ್ನು ಕಲಿಸಲು ಪೋಷಕರು ಮಕ್ಕಳಿಗೆ ಸಹಕಾರ ನೀಡಬೇಕು, ಕರಾಟೆ ಕಲಿಯಲು ವಯಸ್ಸಿನ ಬೇಧವಿಲ್ಲ, ಹೀಗಾಗಿ ದೇಹ ಮತ್ತು ಮನಸ್ಸನ್ನು ಗಟ್ಟಿಗೊಳಿಸಲು ಇದು ಅತ್ಯಂತ ಉಪಯುಕ್ತ ಎಂದು ಅಭಿಪ್ರಾಯ ಪಟ್ಟರು.
ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಭಾಗಿ
ಮಂಡ್ಯದಲ್ಲಿ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಭಗತ್ ಸಿಂಗ್ ಕರಾಟೆ ಸಂಸ್ಥೆಯ ಅಂಗ ಸಂಸ್ಥೆಗಳಿಗೆ ಸೇರಿದ ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವು ಮಕ್ಕಳು ಭಾಗಿಯಾಗಿದ್ದರು. ಕರಾಟೆ ಶಿಕ್ಷಕರಾದ ಅರುಣ್, ಚಂದ್ರಶೇಖರ್, ಚೇತನ್, ಸುನಿಲ್ ಮುಂತಾದವರು ಮಕ್ಕಳ ಜೊತೆಗಿದ್ದು, ಗೆಲುವಿಗಾಗಿ ಅನೇಕ ತಂತ್ರಗಳನ್ನು ರೂಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ