ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಕ್ರಮ


Team Udayavani, Jun 1, 2021, 1:00 PM IST

ಉನ್ನತಮಟ್ಟದ ತನಿಖೆಗೆ ಒಳಪಡಿಸಿ ಕ್ರಮ

ಮದ್ದೂರು: ಮನ್‌ಮುಲ್‌ ಆಡಳಿತ ಮಂಡಳಿ ಕೇಂದ್ರ ಕಚೇರಿ ಗೆಜ್ಜಲಗೆರೆ ಘಟಕಕ್ಕೆ ಸೋಮವಾರ ಭೇಟಿ ನೀಡಿದ ಮಾಜಿ ಸಚಿವ, ಶಾಸಕ ಸಿ.ಎಸ್‌. ಪುಟ್ಟರಾಜು ಇತ್ತೀಚೆಗೆ ವರದಿಯಾದ ಟ್ಯಾಂಕರ್‌ಗಳ ಹಾಲು, ನೀರು ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಿದರು.

ಜಿಲ್ಲೆಯ ವಿವಿಧ ಎಂಪಿಸಿಎಸ್‌ಗಳ ಬಿಎಂಸಿ ಘಟಕ ಗಳಿಂದ ಮುಖ್ಯ ಕೇಂದ್ರಕ್ಕೆ ಹಾಲು ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ಟ್ಯಾಂಕರ್‌ ಮಾಲೀಕರು ಅಕ್ರಮವೆಸಗಿರುವ ಬಗ್ಗೆ ಮನ್‌ಮುಲ್‌ ಅಧ್ಯಕ್ಷ ರಾಮ ಚಂದ್ರ ಶಾಸಕ ಸಿ.ಎಸ್‌.ಪುಟ್ಟರಾಜು ಅವರಿಗೆ ವಿವರ ನೀಡಿದರು. ಅಕ್ರಮವೆಸಗಿರುವ ಸಂಬಂಧ ಈವರೆವಿಗೆ ನಾಲ್ಕು ಟ್ಯಾಂಕರ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಟೆಂಡರ್‌ದಾರರು ಹಾಗೂ ಮಾಲೀಕ ಸೇರಿದಂತೆ ಚಾಲಕ ಸಿಬ್ಬಂದಿಯನ್ನು ಬಂಧಿಸುವ ಸಂಬಂಧ ಪೊಲೀಸರು ಕಾರ್ಯೋನ್ಮುಖರಾಗಿರುವುದಾಗಿ ತಿಳಿಸಿದರು.

ಕ್ರಮದ ಭರವಸೆ: ಮನ್‌ಮುಲ್‌ ಕಚೇರಿ ಹೊರ ಆವರಣದಲ್ಲಿ ಸಾಲುಗಟ್ಟಿ ನಿಂತಿದ್ದ ಹಾಲು ಪೂರೈಕೆ ಟ್ಯಾಂಕರ್‌ ಗಳನ್ನು ಖುದ್ದು ಪರಿಶೀಲಿಸಿದ ಶಾಸಕ ಸಿ.ಎಸ್‌. ಪುಟ್ಟ ರಾಜು ಮಾತನಾಡಿ, ಜಿಲ್ಲೆಯ ರೈತರು ಮತ್ತು ಮನ್‌ ಮುಲ್‌ ಉತ್ಪನ್ನಗಳ ಬಳಕೆದಾರರಿಗೆ ಯಾವುದೇ ತೊಡ ಕಾಗದಂತೆ ಸದರಿ ಪ್ರಕರಣವನ್ನುಉನ್ನತಮಟ್ಟದ ತನಿಖೆಗೆ ಒಳಪಡಿಸಿ ಕ್ರಮ ವಹಿಸುವ ಭರವಸೆ ನೀಡಿದರು.

ಟ್ಯಾಂಕರ್‌ ಸಿದ್ಧಪಡಿಸಿ ಕೊಡುವಜಾಲ: ವಾರದಿಂದೀಚೆಗೆ ಸದರಿ ಪ್ರಕರಣ ಎಲ್ಲೆಡೆ ಆತಂಕ ಸೃಷ್ಟಿ ಮಾಡಿದ್ದು, ರಾಜ್ಯದ 16ಕ್ಕೂ ಹೆಚ್ಚು ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಅಕ್ರಮ ನಡೆದಿರುವ ಮಾಹಿತಿ ಲಭ್ಯವಾಗಿದ್ದು ಟೆಂಡರ್‌ ಪಡೆದ ವ್ಯಕ್ತಿಗಳು ಹಾಲು ಸರಬರಾಜು ವೇಳೆ ನೀರು ಮಿಶ್ರಣ ಮಾಡಲೆಂದೇ ಟ್ಯಾಂಕರ್‌ಗಳಲ್ಲಿ ಅನುಮಾನ ಬಾರದ ರೀತಿ ಸುಮಾರು 2 ರಿಂದ 3 ಸಾವಿರ ಲೀ.ಸಾಮರ್ಥ್ಯದ ಮತ್ತೂಂದು ಟ್ಯಾಂಕರ್‌ ಸಿದ್ಧಪಡಿಸಿಕೊಡುವ ಜಾಲವೇ ರಾಜ್ಯದ ಗಡಿ ಭಾಗದಲ್ಲಿದೆ ಎಂದು ಹೇಳಿದರು.

ಮಂಡ್ಯ ಸೇರಿದಂತೆ ರಾಜ್ಯದ ಇತರೆ ಒಕ್ಕೂಟಗಳ ಆಡಳಿತಮಂಡಳಿಗಳಿಂದಅಕ್ರಮ ಸಂಬಂಧಮಾಹಿತಿ ರವಾನಿಸಿದ್ದು, ತನಿಖೆ ವಿಚಾರವಾಗಿ ಸಹಕಾರ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಮನವಿ ಮಾಡುವ ಕುರಿತಾಗಿ ಹೇಳಿದರು. ರಾಜ್ಯದೆಲ್ಲೆಡೆ ಅಕ್ರಮದ ಮುನ್ಸೂಚನೆ ಇದ್ದು ಮನ್‌ಮುಲ್‌ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು ಸತತ ಒಂದು ತಿಂಗಳ ಪರಿಶ್ರಮದ ಫ‌ಲವಾಗಿ ಈ ಅಕ್ರಮವನ್ನು ಹೊರಗೆಳೆದಿರುವುದು ಶ್ಲಾಘನೀಯ ಎಂದರು.

ಈ ವೇಳೆ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷ ರಘುನಂದನ್‌, ನಿರ್ದೇಶಕರಾದ ಎಸ್‌.ಪಿ.ಸ್ವಾಮಿ, ನಲ್ಲಿಗೆರೆ ಬಾಲು, ಮಂಜುನಾಥ್‌, ಕಾಳೇನಹಳ್ಳಿ ರಾಮಚಂದ್ರ, ಕುಮಾರಿ ರೂಪ, ಶಿವಕುಮಾರ್‌, ಬೋರೇಗೌಡ ಹಾಜರಿದ್ದರು.

ಮನ್‌ಮುಲ್‌ ಆಡಳಿತ ಮಂಡಳಿ ಸದಸ್ಯರಲ್ಲಿ ಜೆಡಿಎಸ್‌,ಕಾಂಗ್ರೆಸ್‌, ಬಿಜೆಪಿ ಪಕ್ಷಗಳ ಚುನಾಯಿತ ನಿರ್ದೇಶಕರಿದ್ದು ಸದರಿ ಹಗರಣ ಸಂಬಂಧ ಪಕ್ಷಾತೀತವಾಗಿ ಪ್ರತಿಯೊಬ್ಬರು ತನಿಖೆಗೆ ಮುಂದಾಗಿರುವುದು ಸ್ವಾಗತಾರ್ಹ.-ಸಿ.ಎಸ್‌. ಪುಟ್ಟರಾಜು, ಮಾಜಿ ಸಚಿವ, ಶಾಸಕ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.