ಶಾಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕ್ರಮ
3 ಶಾಲೆ ದತ್ತು ಪಡೆದ ಶಾಸಕ ಎಂ.ಶ್ರೀನಿವಾಸ್, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ
Team Udayavani, Dec 8, 2020, 2:15 PM IST
ಮಂಡ್ಯ: ತಾಲೂಕಿನ ಮೂರು ಶಾಲೆಗಳನ್ನು ಶಾಸಕ ಎಂ.ಶ್ರೀನಿವಾಸ್ ಅವರು ದತ್ತು ಪಡೆದಿದ್ದು, 2020-21ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ.
ಮಂಡ್ಯ ನಗರದ ಅರ್ಕೇಶ್ವರ ನಗರದ ಗುತ್ತಲು ಕಾಲೋನಿಯ ಕರ್ನಾಟಕ ಪಬ್ಲಿಕ್ ಶಾಲೆ, ತಾಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಶಿವಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ದತ್ತು ಪಡೆಯಲಾಗಿದೆ.
920 ವಿದ್ಯಾರ್ಥಿಗಳು: ಮೂರು ಶಾಲೆಗಳಿಂದ ಒಟ್ಟು 920 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಗುತ್ತಲು ಕಾಲೋನಿಯಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 1ರಿಂದ 12ರವರೆಗೆ 740 ವಿದ್ಯಾರ್ಥಿಗಳು, ಬಿ.ಹೊಸೂರು ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 104 ಹಾಗೂ ಶಿವಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ರಿಂದ10ರವರೆಗೆ76 ವಿದ್ಯಾರ್ಥಿಗಳಿದ್ದಾರೆ.
ಶಾಲಾ ಕಟ್ಟಡಗಳ ಸ್ಥಿತಿ ಉತ್ತಮ: ಮೂರು ಶಾಲೆಗಳ ಕಟ್ಟಡಗಳ ಸ್ಥಿತಿ ಉತ್ತಮವಾಗಿದೆ. ನಗರದ ಕರ್ನಾಟಕ ಪಬ್ಲಿಕ್ ಶಾಲೆಗೆ10ಕೊಠಡಿಗಳ ಅಗತ್ಯವಿದೆ. ಶಾಸಕರೇ ಖುದ್ದಾಗಿ ತಮ್ಮ ಸ್ವಂತ ಖರ್ಚಿನಲ್ಲಿ 6 ಕೊಠಡಿಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಜತೆಗೆ ಕೆಲವು ಕೊಠಡಿಗಳ ದುರಸ್ತಿ ಆಗಬೇಕಾಗಿದೆ. ಉಳಿದ ಎರಡು ಶಾಲೆಗಳಲ್ಲಿ ಕೊಠಡಿಗಳು ಉತ್ತಮವಾಗಿದ್ದು, ಆದರೆ ಶಿವಪುರ ಶಾಲೆಯಕೊಠಡಿಗಳಿಗೆ ಚುರಕಿ ಹಾಕಿಸಬೇಕಿದೆ.
ಮೂರು ಶಾಲೆಗಳಿಗಿಲ್ಲ ಕಾಂಪೌಂಡ್: ಮೂರು ಶಾಲೆಗಳಿಗೆ ಕಾಂಪೌಂಡ್ಗಳಿಲ್ಲ. ಕಾಂಪೌಂಡ್ ನಿರ್ಮಾಣಕ್ಕಾಗಿ ಅನುದಾನದ ಅಗತ್ಯವಿದೆ. ಕುಡಿಯುವ ನೀರಿನ ಸೌಲಭ್ಯವಿದ್ದು, ಹೈಟೆಕ್ ಶೌಚಾಲಯ ನಿರ್ಮಾಣ ಮಾಡಬೇಕಾಗಿದೆ. ಗುತ್ತಲುಕರ್ನಾಟಕ ಪಬ್ಲಿಕ್ ಶಾಲೆಗೆ ಅಗತ್ಯವಾಗಿ ಕಾಂಪೌಂಡ್ ನಿರ್ಮಾಣ ಅಗತ್ಯವಿದ್ದು, ರಾತ್ರಿ ವೇಳೆ ಪುಂಡರ ಹಾವಳಿಗೆ ಕಡಿವಾಣ ಹಾಕಬೇಕಾಗಿದೆ. ಶಿವಪುರ ಶಾಲೆಗೆ ಶಾಸಕರೇ ಖುದ್ದಾಗಿ ಕಾಂಪೌಂಡ್ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿಸಿದ್ದಾರೆ.
ಅಗತ್ಯ ಶಿಕ್ಷಕರು: ಮೂರು ಶಾಲೆಗಳಲ್ಲಿ ಅಗತ್ಯ ಶಿಕ್ಷಕರಿದ್ದಾರೆ. ಗುತ್ತಲು ಶಾಲೆಯಲ್ಲಿ 10 ಮಂದಿ ಶಿಕ್ಷಕರಿದ್ದಾರೆ. ಇದರಲ್ಲಿ ದೈಹಿಕ ಶಿಕ್ಷಕರಿದ್ದಾರೆ. ಬಿ.ಹೊಸೂರು ಶಾಲೆಯಲ್ಲೂ ದೈಹಿಕ ಶಿಕ್ಷಕರು ಸೇರಿದಂತೆ 6 ಮಂದಿ ಶಿಕ್ಷಕರಿದ್ದರೆ, ಶಿವಪುರ ಶಾಲೆಯಲ್ಲಿ 6 ಮಂದಿ ಶಿಕ್ಷಕರಿದ್ದು, ದೈಹಿಕ, ಸಂಗೀತ ಹಾಗೂ ಹಿಂದಿ ಶಿಕ್ಷಕರ ಹುದ್ದೆಗಳು ಖಾಲಿ ಇದೆ.
ಗುಣಮಟ್ಟದ ಶಿಕ್ಷಣ: 3 ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಅದರಂತೆ ಶಿವಪುರ ಹಾಗೂ ಗುತ್ತಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿದೆ.
ಕ್ರೀಡಾಂಗಣ ಅಭಿವೃದ್ಧಿ ಅಗತ್ಯ: ಮೂರು ಶಾಲೆಗಳಲ್ಲಿ ವಿಸ್ತೀರ್ಣವಾದ ಕ್ರೀಡಾಂಗಣವಿದೆ. ಆದರೆ, ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಿಲ್ಲ. ಕ್ರೀಡಾಂಗಣದ ಸ್ವಚ್ಛತೆ, ಅಗತ್ಯಕ್ರೀಡಾ ಸಾಮಗ್ರಿ,ಹಳ್ಳ ಗುಂಡಿಗಳನ್ನು ಮುಚ್ಚಿಸಿ ಸಮತಟ್ಟು ಮಾಡಬೇಕಾಗಿದೆ. ಮೂರು ಶಾಲೆಗಳವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗುತ್ತಲುಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗ್ರಂಥಾಲಯ ವಿದೆ. ಆದರೆ, ಇನ್ನುಳಿದ ಬಿ.ಹೊಸೂರು ಹಾಗೂ ಶಿವಪುರ ಶಾಲೆಯಲ್ಲಿ ಪ್ರತ್ಯೇಕ ಕೊಠಡಿಗಳಿಲ್ಲ. ಈ ಎರಡು ಶಾಲೆಗಳಿಗೆ ಗ್ರಂಥಾಲಯ ಅಗತ್ಯವಾಗಿದೆ.
ಬಿಸಿಯೂಟದ ವ್ಯವಸ್ಥೆ ಉತ್ತಮ: ಮೂರು ಶಾಲೆಗಳಲ್ಲಿ ಎಸ್ಡಿಎಂಸಿ ಇದ್ದು, ಸಕ್ರಿಯವಾಗಿವೆ. ಗುತ್ತಲು ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಸಕರೇ ಅಧ್ಯಕ್ಷರಾಗಿದ್ದರೆ, ಉಳಿದ ಎರಡು ಶಾಲೆಗಳಲ್ಲಿ ಪೋಷಕರು ಅಧ್ಯಕ್ಷರಾಗಿದ್ದು, ಶಾಲೆಯ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಹಕಾರನೀಡುತ್ತಿದ್ದಾರೆ. ಮೂರು ಶಾಲೆ ಗಳಲ್ಲಿ ಬಿಸಿಯೂಟದ ವ್ಯವಸ್ಥೆ ಉತ್ತಮವಾಗಿದೆ. ಮಕ್ಕಳ ಅಡುಗೆಗೆ ಪ್ರತ್ಯೇಕ ಕೊಠಡಿಗಳಿದ್ದು, ಪ್ರತಿ ದಿನ ಮಕ್ಕಳಿಗೆ ಗುಣಮಟ್ಟದ ಊಟ ನೀಡಲಾಗುತ್ತಿದೆ.
ಸಮಗ್ರ ಅಭಿವೃದ್ಧಿಗೆ ಆದ್ಯತೆ : ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮೂರುಶಾಲೆಗಳನ್ನು ಸಮಗ್ರ ಅಭಿವೃದ್ಧಿಪಡಿಸಲು ಸಂಕಲ್ಪಮಾಡಿದ್ದೇನೆ. ಅದಕ್ಕಾಗಿಅನುದಾನ ಕೊರತೆಇದೆ.ಅನುದಾನಬಿಡುಗಡೆಯಾದಂತೆಶಾಲೆಗಳನ್ನುಅಭಿವೃದ್ಧಿಪಡಿಸುತ್ತೇನೆ.ಈ ಮೂರು ಶಾಲೆಗಳನ್ನುಮಾದರಿ ಶಾಲೆಯ ಗುರಿಹೊಂದಿದ್ದೇನೆ.ಶಾಲೆಗೆ ಬೇಕಾದ ಅಗತ್ಯ ಮೂಲ ಸೌಲಭ್ಯಗಳಾದ ಕುಡಿಯುವ ನೀರು ಹೈಟೆಕ್ ಶೌಚಾಲಯ, ಕ್ರೀಡಾಂಗಣಅಭಿವೃದ್ಧಿ, ಕೊಠಡಿಗಳ ದುರಸ್ತಿ ಮಾಡಲಾಗುವುದು ಎಂದು ಶಾಸಕಎಂ.ಶ್ರೀನಿವಾಸ್ ತಿಳಿಸಿದ್ದಾರೆ.
–ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು