
ಮೂಲಸೌಲಭ್ಯಕ್ಕೆ ಅನುದಾನ ಕಲ್ಪಿಸಲು ಕ್ರಮ
Team Udayavani, Dec 23, 2020, 3:41 PM IST

ಮಂಡ್ಯ: ನಗರದ ಹಾಲಹಳ್ಳಿ ಹಾಗೂ ಹೊರವಲಯದ ಚಿಕ್ಕಮಂಡ್ಯ ಬಳಿ ಕೊಳಗೇರಿ ನಿವಾಸಿಗಳ ವಾಸಕ್ಕೆ ನಿರ್ಮಿಸುತ್ತಿರುವ ವಸತಿ ಕಟ್ಟಡಗಳ ಕಾಮಗಾರಿಯನ್ನು ಸಂಸದೆ ಸುಮಲತಾ ಅಂಬರೀಷ್ ವೀಕ್ಷಿಸಿದರು.
ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಕೊಳಗೇರಿನಿವಾಸಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ವತಿಯಿಂದ ಮಂಡ್ಯ ನಗರದ ಚಿಕ್ಕ ಮಂಡ್ಯ ಹಾಗೂ ಹಾಲಹಳ್ಳಿ ಸಮೀಪ ನಿರ್ಮಿಸುತ್ತಿರುವ ಮೂಲಭೂತ ಸೌಕರ್ಯವಿರುವ ವಾಸಕ್ಕೆಯೋಗ್ಯವಾದ ವಸತಿಕಟ್ಟಡಗಳ ಕಾಮಗಾರಿಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು.
ಅನುದಾನ ಬಿಡುಗಡೆಗೆ ಪ್ರಯತ್ನ: ನಂತರ ಮಾತನಾಡಿದ ಅವರು, ಕೊಳಚೆ ಪ್ರದೇಶದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೊರತೆಯಿರುವ ಅನುದಾನ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರ ಗಮನಕ್ಕೆ ತಂದಿರುವುದು ನನ್ನ ಗಮನದಲ್ಲಿದೆ.ಈ ಕುರಿತು ಸಚಿವ ವಿ.ಸೋಮಣ್ಣ ಅವರೊಂದಿಗೆ ಚರ್ಚಿಸಿ, ವಸತಿ ಇಲಾಖೆ ವತಿಯಿಂದ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಕಾಮಗಾರಿ ಪೂರ್ಣಕ್ಕೆ ಸೂಚನೆ: ನಂತರ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಂಸದರು, ಈ ಹಿಂದೆ ಕರ್ನಾಟಕ ರಾಜ್ಯದ ವಸತಿ ಸಚಿವರಾಗಿದ್ದ ಡಾ.ಅಂಬರೀಷ್ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಅಂದಿನಿಂದ ಈವರೆಗೂ ಕೊಳಗೇರಿ ನಿವಾಸಿಗಳಿಗೆ ಮೂಲಭೂತ ಸೌಕರ್ಯವಿರುವ ಕಟ್ಟಡ ನಿರ್ಮಾಣ ಕಾಮಗಾರಿಯು ವಿಳಂಬವಾಗಿ ನಡೆಯುತ್ತಿದೆ. ಇದರಿಂದ ಕೊಳಚೆ ಪ್ರದೇಶದ ನಿರಾಶ್ರಿತರು ಕಷ್ಟಕರವಾದ ವಾತಾವರಣದಲ್ಲಿ ಬದುಕು ನಡೆಸುತ್ತಿದ್ದಾರೆ. ಹವಾಮಾನ ವೈಪರಿತ್ಯದಿಂದ ಅಹಿತಕರ ಘಟನೆ ಉಂಟಾಗಿ ಅನಾಹುತಗಳು ಸಂಭವಿಸುವ ಸಂದರ್ಭಗಳು ಹೆಚ್ಚಾಗಿರುವುದರಿಂದ ಆದ್ಯತೆ ಮೇಲೆ ಅತಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳಿಗೆ ಹಸ್ತಾಂತರಿಸಬೇಕುಎಂದುಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ಆಯುಕ್ತ ಎಂ.ಲೋಕೇಶ್, ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಇಂಜಿನಿಯರ್ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Government ಎಲ್ಲರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಲಿ

Karnataka Bandh: ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Pandavapur: ಅಕ್ರಮ ದಾಖಲೆ ಸೃಷ್ಟಿ ಆರೋಪ: ಅಧಿಕಾರಿಗಳ ಪರಿಶೀಲನೆ

Road Mishap: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು

Cauvery issue; ನಟ ದರ್ಶನ್ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ