ಮುಂದುವರಿದ ಅಂಚೆ ನೌಕರರ ಮುಷ್ಕರ
Team Udayavani, Jun 1, 2018, 2:14 PM IST
ಪಾಂಡವಪುರ: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಪಟ್ಟಣದ ಕೇಂದ್ರ ಅಂಚೆ ಕಚೇರಿ ಮುಂದೆ ಗುರುವಾರ ಮುಷ್ಕರ ನಡೆಸಿದರು.
ಅಖೀಲ ಬಾರತ ಗ್ರಾಮೀಣ ಅಂಚೆ ನೌಕರರ ಸಂಘ ಪಾಂಡವಪುರ ಹಾಗೂ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಸುತ್ತಿರುವ ಅಂಚೆ ನೌಕರರು, ಕಮಲೇಶ ಚಂದ್ರ ನೇತೃತ್ವದ ಏಕ ಸದಸ್ಯ ಸಮಿತಿಯ ಧನಾತ್ಮಕ ಶಿಪಾರಸುಗಳ ಅನುಮೋದನೆಗೆ ಒತ್ತಾಯಿಸಿ ಶ್ರೀರಂಗಪಟ್ಟಣ ಉಪವಿಭಾಗಕ್ಕೆ ಸೇರಿದ ಎಲ್ಲಾ ಶಾಖಾ ಕಚೇರಿಯ ಅಂಚೆ ನೌಕರರು ಪಟ್ಟಣದ ಕೇಂದ್ರ ಅಂಚೆ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಮುಷ್ಕರದ ವೇಳೆ ಅಂಚೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆಯೇ ಹಲವು ಬಾರಿ ಪ್ರತಿಭಟನೆ, ಧರಣಿ, ಸಾಂಕೇತಿಕ ಉಪವಾಸ ಸತ್ಯಾಗ್ರಹಗಳನ್ನು ನಡೆಸಲಾಗಿದೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಅನುಷ್ಠಾನಗೊಂಡು ಎರಡೂವರೆ ವರ್ಷ ಕಳೆದಿದ್ದರೂ ಅಂಚೆ ಸೇವಕರಿಗೆ ಅದರ ಲಾಭ ದೊರೆತಿಲ್ಲ. ಕೇವಲ 7- 8ಸಾವಿರ ಸಂಬಳ ಜೀವನ ನಡೆಸಲು ಸಾಕಾಗುತ್ತಿಲ್ಲ. 48 ಲಕ್ಷ ಕೇಂದ್ರ ಸರ್ಕಾರಿ ನೌಕರರು ಅಷ್ಟೇ ಮೊತ್ತದ ಪಿಂಚಣಿದಾರರಿಗೆ 7ನೇ ವೇತನ ಆಯೋಗದ ಶಿಪಾರಸನ್ನು 8 ತಿಂಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಆದರೆ ಕೇವಲ 2.42 ಲಕ್ಷವಿರುವ ಗ್ರಾಮೀಣ ಡಾಕ್ ನೌಕರರ ವೇತನ ಮಾತ್ರ ಪರಿಷ್ಕರಣೆಗೊಂಡಿದೆ. ಇಷ್ಟಾದರೂ ಸಹ ಧನಾತ್ಮಕ ಶಿಪಾರಸುಗಳ ಅನುಮೋದನೆ ಈವರೆಗೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ಗೌರವಾಧ್ಯಕ್ಷ ಈ.ಎನ್.ಸುರೇಶ್, ಅಧ್ಯಕ್ಷೆ ಹರಿಣಿ, ಉಪಾಧ್ಯಕ್ಷ ಆರ್.ಎನ್.ನಿಂಗೇಗೌಡ, ಕಾರ್ಯದರ್ಶಿ ಎ.ಆರ್.ಹರೀಶ್, ಖಜಾಂಚಿ ರೇಖಾ, ಸದಸ್ಯರಾದ ರಮೇಶ್, ಶ್ವೇತಾ, ಆಶಾ, ವನಿತಾ, ಚಂದ್ರಬಾಯಿ, ಬಿ.ವಿ.ವಿಜಯ, ಪುಟ್ಟರಾಜು, ಪ್ರಸನ್ನಕುಮಾರ್ಎಸ್.ರವಿಕುಮಾರ್ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಂಚೆ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ತಾಲೂಕು ರೈತಸಂಘದ ಅಧ್ಯಕ್ಷ ಎ.ಎಲ್.ಕೆಂಪೂಗೌಡ ಮುಷ್ಕರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್