6, 7ರಂದು ವಿ.ಸಿ.ಫಾರಂನಲ್ಲಿ ಕೃಷಿ ಮೇಳ
Team Udayavani, Dec 4, 2019, 1:38 PM IST
ಮಂಡ್ಯ: ವಿ.ಸಿ.ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಡಿ.6,7ರಂದು ಕೃಷಿಮೇಳ-2019 ಆಯೋಜಿಸಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್(ಕೃಷಿ) ಡಾ.ವೆಂಕಟೇಶ್ ತಿಳಿಸಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ “ಸುಸ್ಥಿರ ಕೃಷಿಗೆ ನೀರಿನ ಸದ್ಭಳಕೆ‘ ಶೀರ್ಷಿಕೆಯಡಿ ಕೃಷಿಮೇಳ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉದ್ಘಾಟನೆ: 6ರಂದು ಬೆಳಗ್ಗೆ 10ಗಂಟೆಗೆ ಕೃಷಿಮೇಳ ಮತ್ತು ಪ್ರಾತ್ಯಕ್ಷಿಕೆಯನ್ನು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಉದ್ಘಾಟಿಸಲಿದ್ದು, ಕೃಷಿ ವಸ್ತುಪ್ರದರ್ಶನವನ್ನು ಜಿಪಂ ಸಿಇಒ ಯಾಲಕ್ಕಿಗೌಡ ಉದ್ಘಾಟಿಸಲಿದ್ದಾರೆ. ಬೆಂಗಳೂರು ಕೃಷಿ ವಿವಿಯ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.
7ರಂದು ಬೆಳಗ್ಗೆ 10.30ಕ್ಕೆ ನೂತನ ತಾಂತ್ರಿಕತೆಗಳ ಲೋಕಾರ್ಪಣೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾಡಲಿದ್ದಾರೆ. ಕೃಷಿ ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯ ವೇಣುಗೋಪಾಲ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಡಾ.ಎಸ್.ರಾಜೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು. ಕರ್ನಾಟಕ ಸರ್ಕಾರದ ಹಣ ಕಾಸು ಇಲಾಖೆ ಅಪರ ಮುಖ್ಯ ಕಾರ್ಯ ದರ್ಶಿ ಐ.ಎಸ್.ಎನ್. ಪ್ರಸಾದ್, ಕೃಷಿ ಮತ್ತು ತೋಟ ಗಾ ರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕೃಷಿ ವಿವಿ
ವ್ಯವ ಸ್ಥಾಪನಾ ಮಂಡಳಿ ಸದ ಸ್ಯ ರಾದ ಶ್ರೀನಿವಾಸಯ್ಯ,ಸುಬ್ರಹ್ಮಣಿ, ಶಿವಕುಮಾರ್, ಡಾ.ಅಶ್ವತ್ಥ ನಾರಾಯಣ, ಪ್ರೊ.ಶಕುಂತಲಾ ಭಾಗವಹಿಸಲಿದ್ದಾರೆ ಎಂದರು.
ರೈತರೊಂದಿಗೆ ಸಂವಾದ: ನಿರ್ದೇಶಕ ಡಾ.ವಾಸುದೇವನ್ ಮಾತನಾಡಿ, ಕೃಷಿಯಲ್ಲಿ ನೀರಿನ ಸದ್ಭಳಕೆ ಜತೆಗೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಇಳುವರಿ ಪಡೆಯುವ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುವುದು. ಅಂತೆಯೇ, 25ರಿಂದ 30
ತರಕಾರಿ ಬೆಳೆಯನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಗುವುದು. ಭತ್ತ, ರಾಗಿ, ಸಿರಿಧಾನ್ಯ, ಮುಸುಕಿನ ಜೋಳ, ವಾಣಿಜ್ಯ ಬೆಳೆ, ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳುಬೆಳೆ, ಮೇವಿನ ಬೆಳೆ ಹೊಸ ಮಾದರಿ ಪರಿಚಯ, ರೈತರೊಂದಿಗೆ ಸಂವಾದ ನಡೆಯಲಿದೆ ಎಂದರು.
ತರಕಾರಿ ಬೆಳೆ ಪ್ರಾತ್ಯಕಿಕೆ: ಕೃಷಿ ಮೇಳದಲ್ಲಿ ಗಂಗಾವತಿ ಸೋನಾ ಎಂಬ ಭತ್ತದ ಹೊಸ ತಳಿಯನ್ನು ಪರಿಚಯಿಸ ಲಾಗುತ್ತಿದೆ. 20 ಬಗೆಯ ಹೊಸ ತರಕಾರಿಬೆಳೆಯ ಪ್ರಾತ್ಯಕ್ಷಿಕೆ, ಸಿಒಬಿ ಸಿಎಂ 16061, 16062 ಎಂಬ ಕಬ್ಬಿನ ಹೊಸ ತಳಿಯನ್ನು ಪರಿಚಯಿಸಲಾಗುತ್ತಿದೆ. ಕೆ.ಎಂ. ಆರ್. 430 ಎಂಬ ರಾಗಿ ತಳಿ ಹಾಗೂ ಎಂ.ಎ. ಎಚ್. 14-5 ಮುಸುಕಿನ ಜೋಳ ತಳಿ ಪರಿಚಯಿಸ ಲಾಗುತ್ತದೆ ಎಂದು ವಿವರಿಸಿದರು.
ಮೇಳದಲ್ಲಿ 150 ರಿಂದ 160 ಮಳಿಗೆ ತೆರೆಯಲಾಗುತ್ತಿದೆ. ವಿವಿಧ ಇಲಾಖೆಯಿಂದ ರೈತರಿಗೆ ಸಿಗಬಹುದಾದ ಸೌಲಭ್ಯದ ಮಾಹಿತಿಯೂ ನೀಡಲಾಗುತ್ತದೆ. ನಗರದಿಂದ ವಿ.ಸಿ.ಫಾರಂವರೆಗೆ ವಾಹನದ ಸೌಲಭ್ಯವಿರಲಿದೆ. ಬೆಳಗ್ಗೆ 9ರಿಂದ ಸಂಜೆ 6ಗಂಟೆವರೆಗೆ ಬಸ್ ಸಂಚರಿಸಲಿದೆ ಎಂದರು. ವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ.ಡಿ.ರಘುಪತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ