ಶಾಲಾ ಆವರಣದಲ್ಲಿ 5 ಸಾವಿರ ಸಸಿ ಬೆಳೆಸುವ ಗುರಿ


Team Udayavani, Jul 15, 2019, 12:14 PM IST

mandya-tdy-1..

ಕೆ.ಆರ್‌.ಪೇಟೆ ತಾಲೂಕಿನ ಶೆಟ್ಟಿನಾಯಕನಕೊಪ್ಪಲು ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಹೊರನೋಟ.

ಕೆ.ಆರ್‌.ಪೇಟೆ: ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿರುವ ಹೆಣ್ಣುಮಕ್ಕಳಿಗೆ ಪಾಠದ ಜೊತೆಯಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸಿ ಎರಡೇ ವರ್ಷದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಸಸಿ ನೆಟ್ಟು ಬೆಳೆಸುವ ಮೂಲಕ ಇತರೆ ಶಾಲೆಗಳಿಗೂ ಮಾದರಿಯಾಗಿದ್ದಾರೆ.

ತಾಲೂಕಿನ ಶೆಟ್ಟಿನಾಯಕನಕೊಪ್ಪಲು ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 250 ಹೆಣ್ಣು ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪರಿಸರ, ವೃಕ್ಷ ಸಂರಕ್ಷಣೆ ಕುರಿತು ಪ್ರಾಯೋಗಿ ಕವಾಗಿ ಬೋಧಿಸಲಾಗುತ್ತಿದೆ. ಒಂದು ಮಗುವಿಗೆ ಕನಿಷ್ಟ 4 ಸಸಿ ನೆಟ್ಟು ಪೋಷಣೆ ಮಾಡುವ ಜವಾಬ್ದಾರಿ ನೀಡಲಾಗಿದೆ. ಮಕ್ಕಳು ಅವರವರ ಸಸಿಗಳನ್ನು ಒಬ್ಬರಿಗಿಂತ ಒಬ್ಬರು ಕಾಳಜಿಯಿಂದ ಬೆಳೆಸುವ ಜವಾಬ್ದಾರಿ ಹೊತ್ತಿದ್ದಾರೆ.

ಸಾವಯವ ಗೊಬ್ಬರ: ಇಲ್ಲಿ ಮತ್ತೂಂದು ವಿಶೇಷವೆಂದರೆ ಮಕ್ಕಳು ಸಸಿಗಳಿಗೆ ಸಾವಯವ ಗೊಬ್ಬರವನ್ನೇ ಹಾಕುತ್ತಿರುವುದು ಗಮನಾರ್ಹ. ಜೊತೆಗೆ ಪ್ರತಿದಿನ ನೀರನ್ನು ಹಾಕಿ ಅತೀವ ಕಾಳಜಿ ವಹಿಸಿದ್ದು ಶಾಲಾ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ. ಎಲ್ಲಾ ಮಕ್ಕಳು ಶಾಲೆಯಲ್ಲಿಯೇ ವಾಸ್ತವ್ಯ ಇದ್ದು ಬೆಳಗ್ಗೆ ಎದ್ದ ತಕ್ಷಣ ಸಸಿಗಳ ಪೋಷಣೆಗೆಂದೇ 30 ನಿಮಿಷ ಮೀಸಲಿಡುತ್ತಾರೆ.

ಹಣ್ಣು, ತರಕಾರಿ, ಹೂವು: 10 ಎಕರೆ ವಿಶಾಲವಾದ ಮೈದಾನದಲ್ಲಿ ಹೊಂಗೆ, ಬಾದಾಮಿ, ಅರಳಿ, ಮಾವು ಸೇರಿ ನೇರಳೆ ಹಣ್ಣಿನ 1500 ಸಸಿಗಳ ಜೊತೆಯಲ್ಲಿ ಪ್ರತಿದಿನ ಶಾಲೆಯಲ್ಲಿ ಅಡುಗೆಗೆ ಅಗತ್ಯವಾದ ತೊಗರಿ, ಟೊಮೆಟೋ, ಹಸಿಮೆಣಸಿನಕಾಯಿ, ಸೊಪ್ಪು ಮತ್ತಿತರ ಪೌಷ್ಟಿಕಾಂಶವುಳ್ಳ ಹಸಿರು ತರಕಾರಿ ಬೆಳೆದು ಮಕ್ಕಳ ಊಟಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜತೆಗೆ 200 ಬಾಳೆ ಗಿಡ ಬೆಳೆಯಲಾಗಿದೆ. ಅವುಗಳನ್ನು ಮಕ್ಕಳೇ ಬಳಸಿಕೊಳ್ಳುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಹೂವಿನ ಗಿಡಗಳು ಶಾಲೆ ಸೌಂದರ್ಯ ಹೆಚ್ಚಿಸಿವೆ. ಒಟ್ಟಾರೆ ಶಾಲಾ ಆವರಣದಲ್ಲಿ 2 ಸಾವಿರ ಮರಗಿಡಗಳು ಬೆಳೆಯುತ್ತಿವೆ. ಮಕ್ಕಳಿಗೆ ಪರಿಶುದ್ಧ ಗಾಳಿ ಮತ್ತು ನೆರಳು ಸಿಗುತ್ತಿದೆ.

ಸ್ವಾಗತಿಸುವ ಹುಲ್ಲುಹಾಸು: ಸಾಮಾನ್ಯವಾಗಿ ನಾವು ಸರ್ಕಾರಿ ಶಾಲೆಗಳಿಗೆ ಹೋದರೆ ಶಾಲೆ ನಾಮಫ‌ಲಕ ಮತ್ತು ಅದರ ಮುಂದೆ ನಿಲ್ಲಿಸಿರುವ ವಾಹನ ಅಥವಾ ಒಂದೆರಡು ಮರಗಳು ನಮ್ಮನ್ನು ಸ್ವಾಗತಿಸುವುದೇ ಹೆಚ್ಚು. ಆದರೆ, ಈ ಶಾಲೆಯ ಆವರಣ ಪ್ರವೇಶಿಸಿದರೆ ನಮಗೆ ಶಾಲೆಗೆ ಬಂದ ಅನುಭವದ ಬದಲು ನಾವೊಂದು ಸುಂದರವಾದ ಉದ್ಯಾನವನದಲ್ಲಿದ್ದೇವೆ ಎಂಬ ಅನುಭವವಾಗುತ್ತದೆ. ಶಾಲೆ ಮುಂದೆ ಹಸಿರಿನಿಂದ ಕಂಗೊಳಿಸುವ ಹುಲ್ಲಿನ ಹಾಸು, ಅದಕ್ಕೆ ಹೊಂದುವಂತೆ ಸುಂದರ ಹೂವು ಮತ್ತು ಎಲೆ ಹೊಂದಿರುವ ಅಲಂಕಾರಿಕ ಸಸಿಗಳು ನಮ್ಮನ್ನು ಸ್ವಾಗತಿಸುತ್ತವೆ. ಜೊತೆಗೆ ಶಾಲೆಯ ಸುತ್ತ ಇರುವ ಮರಗಳ ಕೆಳಗೆ ವಿಶ್ರಾಂತಿ ಪಡೆಯಲು ಕಲ್ಲಿನ ಆಸನ ನಿರ್ಮಿಸಲಾಗಿದೆ.

 

● ಎಚ್.ಬಿ.ಮಂಜುನಾಥ್‌

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.