500 ಕ್ಕೂ ಹೆಚ್ಚು ಆಲೆಮನೆ: ಕೇವಲ 10 ಕ್ಕೆ ಪರವಾನಗಿ

ಆತ್ಮನಿರ್ಭರ್‌ ಭಾರತ್ ‌ಗೆ ಆಯ್ಕೆಯಾದ ಬೆಲ್ಲದ ಬ್ರ್ಯಾಂಡ್‌ಗೆ ಹಿನ್ನೆಡೆ

Team Udayavani, Mar 17, 2021, 2:09 PM IST

500 ಕ್ಕೂ ಹೆಚ್ಚು ಆಲೆಮನೆ: ಕೇವಲ 10 ಕ್ಕೆ ಪರವಾನಗಿ

ಮಂಡ್ಯ: ಜಿಲ್ಲೆಯಲ್ಲಿ ಸುಮಾರು 1500ಕ್ಕೂ ಹೆಚ್ಚು ಆಲೆಮನೆಗಳಿದ್ದು, ಪ್ರಸ್ತುತ 500ಕ್ಕೂ ಹೆಚ್ಚು ಆಲೆಮನೆ ನಡೆಯುತ್ತಿವೆ. ಆದರೆ, ಇದರಲ್ಲಿ ಕೇವಲ 10 ಆಲೆಮನೆಗಳಿಗೆ ಮಾತ್ರ ಪರವಾನಗಿ ನೀಡಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪರವಾನಗಿ ನೀಡಲಾಗುತ್ತಿದ್ದು, ಸ್ಥಳೀಯ ಗ್ರಾಪಂಗಳಿಗೆಅಧಿಕಾರ ನೀಡಲಾಗಿದೆ. ಆದರೆ, ಪರವಾನಗಿಪಡೆಯದೇ ನಡೆಸುತ್ತಿರುವ ಆಲೆಮನೆಗಳು ಹೆಚ್ಚಾಗಿದೆ. ಕೆಲವು ರೈತರು ತಾವೇ ಆಲೆಮನೆಗಳನ್ನು ನಡೆಸುತ್ತಿದ್ದರೆ, ಬಹುತೇಕ ಮಂದಿ ಹೊರ ರಾಜ್ಯದವರಿಗೆ ಬಾಡಿಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ಆಲೆಮನೆ ನೀಡಿದ್ದಾರೆ.ಆದರೆ ಅದಕ್ಕೆ ಯಾವುದೇ ಪರವಾನಗಿ ಪಡೆದಿಲ್ಲ.

ಸಾವಯವ ಬೆಲ್ಲ ತಯಾರಿಕೆ ಆಲೆಮನೆಗಳಿಗೆ  ಆತಂಕ: ಜಿಲ್ಲೆಯ ವಿವಿಧೆಡೆ ಕಳಪೆ ಗುಣಮಟ್ಟದ ಬೆಲ್ಲ ಉತ್ಪಾದನೆ ಆಗುತ್ತಿರುವುದರಿಂದ ಮಂಡ್ಯ ಬೆಲ್ಲದಬ್ರ್ಯಾಂಡ್‌ಗೆ ಹಿನ್ನೆಡೆಯಾಗುತ್ತಿದೆ. ಇದರಿಂದ ಬೇರೆ ರಾಜ್ಯಗಳಿಂದ ಇದ್ದ ಬೇಡಿಕೆ ಕಡಿಮೆಯಾಗಿದೆ. ಇದು ಸಾವಯವ ಬೆಲ್ಲ ತಯಾರಿಸುವ, ಆಲೆಮನೆಗಳ ಮಾಲೀಕರಿಗೆ ಆತಂಕ ಎದುರಾಗಿದೆ.

ಮಂಡ್ಯ ಬೆಲ್ಲ ಬ್ರ್ಯಾಂಡ್‌ ಹಿನ್ನೆಡೆ: ಪ್ರಸ್ತುತ ಮಂಡ್ಯ ಬೆಲ್ಲ ಆತ್ಮನಿರ್ಭರ್‌ ಭಾರತ್‌ ಯೋಜನೆಯಡಿ ಒಂದು ಜಿಲ್ಲೆ, ಒಂದು ಉತ್ಪನ್ನಕ್ಕೆ ಆಯ್ಕೆಯಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಆಲೆಮನೆಗಳ ಪುನಶ್ಚೇತನಗೊಳಿಸಿ ರಸಾಯನಿಕ ಗುಣಮಟ್ಟದ ಬೆಲ್ಲ ತಯಾರಿಕೆಗೆ ಒತ್ತು ನೀಡಲು ಸರ್ಕಾರ ಮುಂದಾಗಿದೆ. ಆದರೆ, ಪರಿಸ್ಥಿತಿ ನೋಡಿದರೆ ಯೋಜನೆ ಜಾರಿ ಕಷ್ಟ ಎಂಬಂತಾಗಿದೆ.

ಮರು ಬೆಲ್ಲ ತಯಾರಿಕೆ: ಬೆಲ್ಲ ತಯಾರಿಕೆಗೆ ಕಬ್ಬಿನ ಕೊರತೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಉತ್ತರ ಪ್ರದೇಶ, ಬಿಹಾರಗಳಿಂದ ಆಗಮಿಸಿರುವಕೆಲವರು ಇಲ್ಲಿನ ರೈತರಿಂದ ಆಲೆಮನೆಗಳನ್ನು ಬಾಡಿಗೆಪಡೆದು ರಸಾಯನಿಕ ಬೆಲ್ಲ ತಯಾರಿಸುತ್ತಿದ್ದಾರೆ. ಕಬ್ಬಿನ ಕೊರತೆ ಉಂಟಾದಾಗ ಗುಜರಾತ್‌ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅವ ಧಿ ಮುಗಿದಿರುವ ಬೆಲ್ಲ ತರಿಸಿಕೊಂಡುಅದಕ್ಕೆ ಸಕ್ಕರೆ, ರಸಾಯನಿಕ ಬಳಕೆ ಮಾಡಿ ಬೆಲ್ಲ ತಯಾರಿಸುತ್ತಿರುವುದು ಆತಂಕ ಸೃಷ್ಟಿಸಿದೆ.ಬೆಲ್ಲ ತಿರಸ್ಕರಿಸಿದ ರಾಜ್ಯಗಳು: ಮಂಡ್ಯದ ಬೆಲ್ಲ ಗುಜರಾತ್‌, ಪಶ್ಚಿಮಬಂಗಾಳ, ಕೇರಳ, ಆಂಧ್ರಸೇರಿದಂತೆ ಈಶಾನ್ಯ ರಾಜ್ಯಗಳಿಂದ ಬೇಡಿಕೆ ಬರುತ್ತಿತ್ತು.ಆದರೆ, ಇತ್ತೀಚಿನಲ್ಲಿ ಗುಣಮಟ್ಟವಿಲ್ಲದ ಕಾರಣಮಂಡ್ಯ ಬೆಲ್ಲವನ್ನು ತಿರಸ್ಕರಿಸುತ್ತಿದ್ದು, ಬೇಡಿಕೆ ಕಳೆದುಕೊಳ್ಳುವಂತಾಗಿದೆ ಎಂದು ಆಲೆಮನೆ ಮಾಲೀಕರೊಬ್ಬರು ತಿಳಿಸಿದರು.

ಸಾವಯವ ಬೆಲ್ಲದ ಅರಿವು ಅಗತ್ಯ :

ಗ್ರಾಹಕರು ಕಲರ್‌ ಇರುವ ಬೆಲ್ಲವನ್ನು ಹೆಚ್ಚು ಖರೀದಿಸುತ್ತಾರೆ. ಆದರೆ ಅದನ್ನು ರಸಾಯನಿಕದಿಂದ ತಯಾರಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಸಾವಯವ ಬೆಲ್ಲ ಕಪ್ಪಗಿದ್ದರೂ ಆರೋಗ್ಯಕ್ಕೆ ಒಳ್ಳೆಯದು. ಆತ್ಮನಿರ್ಭರ್‌ಭಾರತ್‌ ಯೋಜನೆಯಡಿ ಮಂಡ್ಯ ಬೆಲ್ಲ ಆಯ್ಕೆಯಾಗಿದೆ. ಆದರೆ ಅದನ್ನು ಹಾಳುಮಾಡಲು ಹೊರಗಿನ ಕೆಲವರು ಮುಂದಾಗಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಲೆಮನೆ ಮಾಲಿಕರ ಸಂಘದ ತಾಲೂಕು ಅಧ್ಯಕ್ಷ ಸೋಮಶಂಕರೇಗೌಡ ತಿಳಿಸಿದರು.

 ಸಾವಯವ ಬೆಲ್ಲ ಖರೀದಿಗೆ ಹಿಂದೇಟು :

ಪ್ರಸ್ತುತ ಕಬ್ಬಿನ ಕೊರತೆ ಉಂಟಾಗಿರುವುದರಿಂದ ಬೇರೆ ರಾಜ್ಯಗಳಿಂದ ಬೆಲ್ಲದ ಟ್ರೇಡರ್ಗಳು ಹೆಚ್ಚಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಬೆಲ್ಲ ಕಲರ್‌ನಿಂದ ಕೂಡಿದ್ದು, ಬೇಡಿಕೆ ಹೆಚ್ಚಿದೆ. ಮಂಡ್ಯ ಸಾವಯವ ಬೆಲ್ಲದ ದರ ಹೆಚ್ಚಾಗಿರುವುದರಿಂದ, ಬೇರೆ ರಾಜ್ಯದಿಂದ ಬೆಲ್ಲವನ್ನು ಆಮದುಮಾಡಿಕೊಳ್ಳಲಾಗುತ್ತಿದೆ. ಸಾವಯವ ಬೆಲ್ಲಕಪ್ಪಾಗಿರುವುದರಿಂದ ಖರೀದಿಗೆ ಹಿಂದೇಟುಹಾಕುತ್ತಾರೆ. ಹೀಗಾಗಿ ಬೇರೆರಾಜ್ಯಗಳಿಂದ ಬೆಲ್ಲ ಸರಬರಾಜುಮಾಡಿಕೊಳ್ಳಲಾಗುತ್ತದೆ ಎಂದು ಬೆಲ್ಲವರ್ತಕರೊಬ್ಬರು ತಿಳಿಸಿದರು.

ವಿವಿಧೆಡೆ ಅಧಿಕಾರಿಗಳ ದಾಳಿ :  ಕಳೆದ ಶನಿವಾರ ಬೇರೆ ರಾಜ್ಯಗಳಿಂದ ಕಳಪೆ ಗುಣಮಟ್ಟದ ಬೆಲ್ಲಪೂರೈಕೆಯಾಗುತ್ತಿರುವ ಬಗ್ಗೆ ರೈತರದೂರಿನ ಮೇರೆಗೆ ಆಹಾರ ಸುರಕ್ಷತೆ,ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಾಳಿ ನಡೆಸಿದರು. ಮಂಡ್ಯ ತಾಲೂಕು ಸೇರಿದಂತೆಜಿಲ್ಲೆಯ ವಿವಿಧೆಡೆ 40 ಆಲೆಮನೆಗಳಮೇಲೆ ದಾಳಿ ನಡೆಸಿ ಸುಮಾರು 29ಆಲೆಮನೆಗಳ ಬೆಲ್ಲದ ಮಾದರಿ ಸಂಗ್ರಹಿಸಿ ಲ್ಯಾಬ್‌ಗ ಕಳುಹಿಸಲಾಗಿದೆ.

ಹೊರ ರಾಜ್ಯಗಳಿಂದ ಕಳಪೆ ಗುಣಮಟ್ಟದ ಬೆಲ್ಲಸರಬರಾಜು ಮಾಡಿಕೊಂಡು ಅದಕ್ಕೆ ಸಕ್ಕರೆ ಹಾಗೂ ರಸಾಯನಿಕ ಹಾಕಿ ಬೆಲ್ಲ ತಯಾರಿಸಲಾಗುತ್ತಿದೆ. ಇದರಿಂದ ಮಂಡ್ಯ ಬೆಲ್ಲಕ್ಕೆ ತೊಂದರೆಯಾಗುತ್ತಿದೆ. ಈಗಾಗಲೇ 20ಕ್ಕೂ ಹೆಚ್ಚು ಆಲೆಮನೆಗಳಮೇಲೆ ದಾಳಿ ನಡೆಸಲಾಗಿದ್ದು, ದಾಳಿ ಮುಂದುವರಿಸ ಲಾಗಿದೆ. ಪರವಾನಗಿ ಪಡೆಯದಿದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗುತ್ತಿದೆ. – ಡಾ.ಜಿ.ಸಿ.ಬೆಟ್ಟಸ್ವಾಮಿ, ಅಂಕಿತ ಅಧಿಕಾರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಮಂಡ್ಯ

 

-ಎಚ್‌.ಶಿವರಾಜು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.