![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ
Team Udayavani, Oct 11, 2020, 4:11 PM IST
![Mandya-tdy](https://www.udayavani.com/wp-content/uploads/2020/10/Mandya-tdy-4-620x372.jpg)
ಶ್ರೀರಂಗಪಟ್ಟಣ: ಕೋವಿಡ್ ಹಿನ್ನೆಲೆ ಸಾಂಪ್ರದಾಯಿಕವಾಗಿ ಪಾರಂಪರಿಕ ದಸರಾವನ್ನು ಒಂದು ದಿನಕ್ಕೆ ಸೀಮಿತ ಗೊಳಿಸಿ, ಸಕಲ ಸಿದ್ಧತಾ ಮಾಡಲಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
ತಾಪಂ ಕಚೇರಿ ಆವರಣದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತ ನಾಡಿ,ಕೊರೊನಾಹರಡುತ್ತಿದ್ದು,ಜನರನ್ನುದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲಾಗುವುದಿಲ್ಲ .ಸಾಂಪ್ರ ದಾಯಿಕವಾಗಿ ದಸರಾ ನಡೆಯಲಿದ್ದು, ವಿವಿಧ ಸ್ಥಳಗಳುಹಾಗೂಬೇರೆಕಡೆಗಳಿಂದ ಬರುವ ಜನರನ್ನು ನಿಯಂತ್ರಿಸಲಾಗುತ್ತದೆ ಎಂದರು.
ವಿದ್ಯುತ್ ದೀಪ ಅಳವಡಿಕೆ: ಈಗಾಗಲೇ ಎರಡು ಬಾರಿ ದಸರಾ ಕುರಿತು ಅಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದಸರಾ ಸಿದ್ಧತೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿ ವರ್ಷದಂತೆ ವಿದ್ಯುತ್ದೀಪ ಅಳವಡಿಸಿ, ಅಲಂಕಾರ ಮಾಡಲಾಗುತ್ತದೆ. ಸರ್ಕಾರಿ ಕಚೇರಿ, ದೇವಾಲಯಗಳಲ್ಲಿ ವಿಶೇಷ ದೀಪಾಲಂಕಾರ ಮಾಡಿ, ಸಾಂಪ್ರದಾಯಿಕ ದಸರಾಕ್ಕೆ ಯಾವುದೆ ತೊಂದರೆ ಇಲ್ಲದೆ, ಕಡಿಮೆ ಜನರನ್ನು ಹೊಂದಿಸಿಕೊಂಡು ದಸರಾ ಆಚರಣೆ ಮಾಡಲಾಗುತ್ತದೆ ಎಂದರು.
ಅನುದಾನಕ್ಕಾಗಿ ಚರ್ಚೆ: ಶ್ರೀರಂಗಪಟ್ಟಣ ದಸರಾಕ್ಕೆ ಸರ್ಕಾರ ಅನುದಾನ ಕುರಿತು, ಹಣಕಾಸಿನ ವ್ಯವಹಾರದಲ್ಲಿ ಮುಖ್ಯ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳಲ್ಲಿ ಚರ್ಚೆಮಾಡಲಾಗುತ್ತದೆ. ದಸರಾಕ್ಕೆ ಎಷ್ಟು ಹಣ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಇದಕ್ಕೂ ಮುಂಚಿತವಾಗಿ ದಸರಾ ಮಂಟಪದ ಬಳಿ ಸ್ವಚ್ಛತೆ, ಮಂಟಪಕ್ಕೆ ಬಣ್ಣ, ಕೊಳದ ಬಳಿ ದುರಸ್ತಿ ಎಲ್ಲವೂ ಸಿದ್ಧ ಮಾಡಲಾಗಿದೆ. 23ರಂದು ನಡೆಯುವ ದಸರಾ ಆನೆ ಅಂಬಾರಿ ಇಲ್ಲದೆ ರಥದ ಮೇಲೆ ಚಾಮುಂಡೇಶ್ವರಿ ದೇವಿ ಪೂಜಾ ಅಲಂಕಾರ ಮಾಡಿ, ಮೆರವಣಿಗೆ ನಡೆಸಲಾಗುತ್ತದೆ ಎಂದು ಹೇಳಿದರು.
ದಸರಾಪೂರ್ವಭಾವಿಸಭೆಯಲ್ಲಿ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದ,ತಹಶೀಲ್ದಾರ್ ಎಂ.ವಿ.ರೂಪಾ, ತಾಪಂಇಒ ಭೈರಪ್ಪ ಸೇರಿದಂತೆ ಪುರಸಭಾ ಅಧಿಕಾರಿಗಳು ಹಾಜರಿದ್ದರು.
ಕೋವಿಡ್ ಬಗ್ಗೆ ತಾತ್ಸಾರಬೇಡ : ಕಳೆದ 15 -20 ದಿನಗಳಿಂದ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಅವರ ಪತ್ನಿ, ತಾಯಿಗೆ ಕೋವಿಡ್ ದೃಢವಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ನಂತರ ಆರೋಗ್ಯವಾಗಿದ್ದು, ಶಾಸಕ ರವೀಂದ್ರ ಶ್ರೀಕಂಠಯ್ಯ ದಸರಾ ಮಹೋತ್ಸವದ ಅಧಿಕಾರಿಗಳ ಸಭೆಗೆ ಬೆಂಗಳೂರಿನಿಂದ ನೇರವಾಗಿ ಶ್ರೀರಂಗಪಟ್ಟಣ ತಾಪಂಗೆ ಆಗಮಿಸಿದರು. ನಂತರಕಾರ್ಯಕರ್ತರು ಹಾರ ಹಾಕಿ ಸ್ವಾಗತಿಸಲು ಬಂದ ವೇಳೆ ಕೋವಿಡ್ ಬಗ್ಗೆ ತಾತ್ಸಾರ ಬೇಡ. ಸಾಮಾಜಿಕ ಅಂತರಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಮಾತನಾಡಿ, ಗುಂಪು ಗುಂಪು ಸೇರಬೇಡಿ. ನಿಮ್ಮ ಆರೋಗ್ಯಕಾಪಾಡಿಕೊಳ್ಳಿ ಎಂದು ಕಾರ್ಯಕರ್ತರಿಗೆ ಎಚ್ಚರಿಸಿದರು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.