![court](https://www.udayavani.com/wp-content/uploads/2024/07/court-7-415x231.jpg)
ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುನಿಸಿಲ್ಲ:ಅಂಬರೀಷ್ ಸುದ್ದಿಗೋಷ್ಠಿ
Team Udayavani, Apr 14, 2017, 5:03 PM IST
![5477885.jpg](https://www.udayavani.com/wp-content/uploads/2017/04/14/5477885-620x394.jpg)
ಮಂಡ್ಯ: ನಂಜನಗೂಡು,ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಸಚಿವ,ಶಾಸಕ ಅಂಬರೀಷ್ ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ಮುನಿಸಿಲ್ಲ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರ್ಷ ವ್ಯಕ್ತ ಪಡಿಸಿದ ಅಂಬರೀಷ್ ಇನ್ನೂ ಒಂದು ವರ್ಷಗಳ ಕಾಲ ನಮ್ಮ ಸರ್ಕಾರದ ಆಡಳಿತವಿದೆ, ಜನ ವಿಶ್ವಾಸ ಇರಿಸಿ ಮತ ನೀಡಿದ್ದು ಜನರಿಗೆ ಒಳ್ಳೆಯದಾಗಲಿ ಎಂದರು.
ನನಗೆ ಎಲ್ಲವನ್ನೂ ಕೊಟ್ಟಿರುವ ಕಾಂಗ್ರೆಸ್ ಪಕ್ಷವನ್ನು ತ್ಯಜಿಸುವುದಿಲ್ಲ. ಮುಖ್ಯಮಂತ್ರಿಗಿಂತ ಹೆಚ್ಚು ಪ್ರೀತಿಯಿಂದ ನನ್ನನ್ನು ಜನ ನೋಡಿಕೊಂಡಿದ್ದಾರೆ. ಮೂರು ವರೆ ವರ್ಷಗಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೆ ,ಬೇರೆಯವರಿಗೂ ಅವಕಾಶ ಸಿಗಬೇಕಲ್ಲ ಎಂದರು.
ಮುಂದಿನ ಚುನಾವಣೆ ಸ್ಪರ್ಧೆಯ ಬಗ್ಗೆ ಈಗಲೇ ಯಾವುದೆ ನಿರ್ಧಾರಕ್ಕೆ ಬಂದಿಲ್ಲ. ಇನ್ನೂ ಒಂದು ವರ್ಷ ಬಾಕಿ ಇದೆ , ಭವಿಷ್ಯವನ್ನು ಬಲ್ಲವರು ಯಾರು ಎಂದರು.
ಸಚಿವ ಸ್ಥಾನದಿಂದ ಕೈ ಬಿಟ್ಟ ಬಳಿಕ ತೀವ್ರ ಅಸಮಧಾನಗೊಂಡಿದ್ದ ಅಂಬರೀಷ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿ ರಾಜೀನಾಮೆ ಪತ್ರ ಕಳುಹಿಸಿಕೊಟ್ಟು ಆ ಬಳಿಕ ನಿರ್ಧಾರದಿಂದ ಹಿಂದೆ ಸರಿದಿದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.