ಅನಂತಕುಮಾರ್ ಹೆಗಡೆ ವಿರುದ್ಧ ಪುಟಗೋಸಿ ಚಳವಳಿ
Team Udayavani, Jun 6, 2018, 6:05 AM IST
ಮಂಡ್ಯ: ಜಾತ್ಯತೀತ ಜನತಾದಳ ಪಕ್ಷವನ್ನು ಪುಟಗೋಸಿ ಪಕ್ಷವೆಂದು ಲಘುವಾಗಿ ಟೀಕಿಸಿದ್ದ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಯುವ ಜೆಡಿಎಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪುಟಗೋಸಿ ಚಳವಳಿ ನಡೆಸಿದರು.
ನಗರದ ಪ್ರಧಾನ ಅಂಚೆ ಕಚೇರಿ ಎದುರು ಜಮಾಯಿಸಿದ ಯುವ ಜೆಡಿಎಸ್ ಕಾರ್ಯಕರ್ತರು, ಪುಟಗೋಸಿಗಳನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶಿಸಿದರಲ್ಲದೆ, ಅವುಗಳನ್ನು ಅಂಚೆ ಮೂಲಕ ಅನಂತ ಕುಮಾರ್ ಹೆಗಡೆಅವರಿಗೆ ರವಾನಿಸಿದರು.
ವ್ಯಾಪಕ ಟೀಕೆ: ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವ ಮುಖಂಡ ಗೋಪಾಲಪುರ ಶ್ರೀನಿವಾಸ್ ಮಾತನಾಡಿ, ಅನಂತ ಕುಮಾರ್ ಹೆಗಡೆ ಅವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಪದೇಪದೆ ನಾಲಿಗೆಯನ್ನು ಹರಿಯಬಿಡುತ್ತಲೇ ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈಗಾಗಲೇ ಸಂವಿಧಾನವನ್ನೇ
ಬದಲಾವಣೆ ಮಾಡುತ್ತೇನೆಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಅವರ ಈ ಮಾತಿಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು ಎಂದು ಹೇಳಿದರು.
ಬುದ್ಧಿ ಹೇಳುವವರಿಲ್ಲ: ಸಂವಿಧಾನ ವಿರೋಧಿ ಹೇಳಿಕೆಯಿಂದಲೇ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಇಷ್ಟಾದರೂ ಬಿಜೆಪಿ ವರಿಷ್ಠರಿಗೆ ಹಾಗೂ ಅನಂತ ಕುಮಾರ್ ಹೆಗಡೆ ಅವರಿಗೆ ಬುದ್ಧಿ ಬಂದಿಲ್ಲ. ನಾಲಿಗೆ ಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದನ್ನು ಕಲಿತಿಲ್ಲ.
ಈ ವಿಚಾರವಾಗಿ ಬುದ್ಧಿ ಹೇಳುವವರೂ ಇಲ್ಲ ಎಂದು ಟೀಕಿಸಿದರು.ಪ್ರಾದೇಶಿಕ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ಅನಂತ ಕುಮಾರ್ ಹೆಗಡೆ ತಕ್ಷಣ ಕ್ಷಮೆಯಾಚಿಸುವಂತೆ ಆಗ್ರಹಿಸಿದ ಅವರು, ಒಮ್ಮೆ ಅವರು ಕ್ಷಮೆಯಾಚಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಚಳವಳಿ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ