ಕಾಲುಬಾಯಿ ಲಸಿಕೆ ಹಾಕಲು ಹಿಂದೇಟು!

ಅ.2ರಿಂದ ನ.15ರವರೆಗೆಕಾಲುಬಾಯಿ ಲಸಿಕೆ

Team Udayavani, Sep 30, 2020, 2:03 PM IST

Mandya-tdy-1

ಸಾಂದರ್ಭಿಕ ಚಿತ್ರ

ಮಂಡ್ಯ: ಪಶುಪಾಲನಾ ಇಲಾಖೆ ಹಾಗೂ ಮನ್‌ ಮುಲ್‌ ವತಿಯಿಂದ ಅ.2ರಿಂದ ನ.15ರವರೆಗೆ ಜಿಲ್ಲಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ಜ್ವರ ನಿಯಂತ್ರಣ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳ ಲಾಗಿದೆ. ಆದರೆ, ಕೋವಿಡ್ ಭೀತಿಯಿಂದ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಶು ವೈದ್ಯರು, ಪರಿವೀಕ್ಷಕರು, ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ, ಗ್ರಾಮೀಣ ಭಾಗದಲ್ಲೂ ಸೋಂಕು ಹೆಚ್ಚುತ್ತಿರುವುದರಿಂದ ಜಾನುವಾರುಗಳಿಗೆ ಲಸಿಕೆ ಹಾಕಿಸಲು ರೈತರು ಬರುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಮುಂದೂಡುವಂತೆ ಪಶು ವೈದ್ಯರು, ಪಶು ಪರಿವೀಕ್ಷಕರು, ಸಿಬ್ಬಂದಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಲಸಿಕೆ ಹಾಕಿಸಲು ರೈತರು ಸಿದ್ಧ: ಕೋವಿಡ್ ಸಂದರ್ಭದಲ್ಲಿ ಹೈನುಗಾರಿಕೆ ನಮ್ಮಕೈಹಿಡಿದಿದೆ. ಹಾಲು ಮಾರಾಟದಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಹೈನುಗಾರಿಕೆ ಕಸುಬಾಗಿರುವುದರಿಂದ ಜಾನುವಾರು ಆರೋಗ್ಯವೂ ಮುಖ್ಯವಾಗಿದೆ. ಎಲ್ಲಾ ಜಾನುವಾರಿಗೆ ರೈತರು ಲಸಿಕೆ ಹಾಕಿಸಲಿದ್ದಾರೆಂದು ರೈತರೊಬ್ಬರು ಹೇಳಿದರು.

4,88,437 ಜಾನುವಾರು: ಜಿಲ್ಲೆಯಲ್ಲಿ ಒಟ್ಟು 4,88,837 ಜಾನುವಾರುಗಳಿವೆ. ಇದರಲ್ಲಿ ಹಸು 3,69,986, ಎಮ್ಮೆ 1,09,443, 9408 ಹಂದಿಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಕಾಲುಬಾಯಿ ಜ್ವರ ನಿಯಂತ್ರಣ ಲಸಿಕೆ ಹಾಕುವ ಆಂದೋಲನ ಮಾಡಿಕೊಂಡು ಬಂದಿದ್ದರಿಂದ 2017ರಿಂದ ಜಿಲ್ಲಾದ್ಯಂತ ಯಾವುದೇಕಾಲುಬಾಯಿ ಜ್ವರ ಕಾಣಿಸಿಕೊಂಡಿಲ್ಲ. ಮೊದಲ ಹಂತದಲ್ಲಿ 1702 ಗ್ರಾಮಗಳಲ್ಲಿ ಲಸಿಕೆ ಹಾಕಲಾಗುತ್ತದೆ.

ಕೇಂದ್ರದಿಂದಲೇ ಆಯೋಜನೆ:ಕಾಲುಬಾಯಿ ಜ್ವರ ನಿಯಂತ್ರಣ ಲಸಿಕೆ ಅಭಿಯಾನಕ್ಕೆ ಕೇಂದ್ರ ಸರ್ಕಾರವೇ ಮುಂದಾಗಿದ್ದು, ಅದಕ್ಕಾಗಿ ಜಿಲ್ಲೆಗೆ ಅಗತ್ಯವಿರುವ ಲಸಿಕೆ, ಸಿರೆಂಜ್‌ ಸರಬರಾಜು ಮಾಡಲಿದೆ. ಪ್ರತಿ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಹಾಕಬೇಕಾಗಿತ್ತು. ಆದರೆ, ಕೋವಿಡ್ ಇರುವುದರಿಂದ ಸಾಧ್ಯವಾಗಿರಲಿಲ್ಲ. ಈಗ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದು ಬಾರಿ ಲಸಿಕೆ ಹಾಕಿದರೆ ಆ ಜಾನುವಾರುಗಳಲ್ಲಿ 9 ತಿಂಗಳವರೆಗೆ ರೋಗ ನಿರೋಧಕ ಶಕ್ತಿ ಇರುತ್ತದೆ.

ಡೇರಿಗಳ ನೇತೃತ್ವ: ಜಿಲ್ಲೆಯಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳು ಇದರಲ್ಲಿ ಭಾಗವಹಿಸಲಿವೆ. ಸಹಕಾರ ಸಂಘಗಳಲ್ಲಿಯೇ ಆ ವ್ಯಾಪ್ತಿಯ ಜನಪ್ರತಿನಿಧಿಗಳ ಮೂಲಕ ಚಾಲನೆ ದೊರೆಯಲಿದೆ. ಇದಕ್ಕೆ ಹಾಲು ಉತ್ಪಾದಕರ ಸಂಘಗಳು ಸಂಪೂರ್ಣ ತೊಡಗಿಸಿಕೊಳ್ಳಲಿವೆ. ಪ್ರತಿ ರಾಸಿಗೂ ಗುರುತಿನ ಓಲೆ: ಲಸಿಕೆ ಮೂಲಕ ಪ್ರತಿ ರಾಸಿಗೂ ವಿಶೇಷ ಗುರುತಿನ ಓಲೆ ಹಾಕಲಾಗುತ್ತದೆ. ಈಗಾಗಲೇ 2.93 ಲಕ್ಷ ಜಾನುವಾರುಗಳಿಗೆ ಓಲೆ ಹಾಕಲಾಗಿದೆ. ಉಳಿದ 1,95,837 ರಾಸುಗಳಿಗೂ ಹಾಕಲಾಗುತ್ತದೆ.

ಆನ್‌ಲೈನ್‌ನಲ್ಲಿ ಮಾಹಿತಿ: ಗುರುತಿನ ಓಲೆ ಹಾಕುವುದರ ಜತೆಗೆ ಆನ್‌ಲೈನ್‌ನಲ್ಲಿ ಆ ರಾಸುಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು. ಯಾವಾಗ ಬೇಕಾದರೂ ಆ ರಾಸುಗಳ ಮಾಹಿತಿ ಸಿಗುತ್ತದೆ. ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ಅಲ್ಲದೆ, ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಎಂ.ಸಿ.ಪದ್ಮನಾಭ ಹೇಳಿದರು.

ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್‌ ವಿತರಣೆ :  ಪಶುಪಾಲನಾ ಇಲಾಖೆ ಹಾಗೂ ಮನ್‌ಮುಲ್‌ ಸಹಯೋಗದಲ್ಲಿ ಲಸಿಕೆ ನಡೆಯುವುದರಿಂದ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಲಸಿಕೆದಾರರ ಆರೋಗ್ಯ ದೃಷ್ಟಿಯಿಂದ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಲಾಗುವುದು. ಅಲ್ಲದೆ, ಸಿಬ್ಬಂದಿಗೆ ಆರೋಗ್ಯದಲ್ಲಿ ಏರುಪೇರಾದರೆ ಇಲಾಖೆಯಿಂದ ವಿಮೆ ಸೌಲಭ್ಯವಿದೆ. ಪಶುಪಾಲನಾ ಇಲಾಖೆ ಹಾಗೂ ಮನ್‌ಮುಲ್‌ನಿಂದ ಒಟ್ಟು 307 ಸಿಬ್ಬಂದಿಯಿದ್ದು, 6ರಿಂದ 7 ಜನರ 37 ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೂ ಪಶು ವೈದ್ಯರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರಕಾಣಿಸಿಕೊಂಡಿದೆ. ಆದರೆ, ಜಿಲ್ಲೆಯಲ್ಲಿಕಳೆದ 3 ವರ್ಷಗಳಿಂದ ಕಾಣಿಸಿಕೊಂಡಿಲ್ಲ.ಕಾಲ ಕಾಲಕ್ಕೆ ಲಸಿಕೆ ಹಾಕಿನಿಯಂತ್ರಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ರೈತರಿಗೆ ಹೈನುಗಾರಿಕೆಕೈಹಿಡಿದಿದ್ದು ರೈತರು ಜಾನುವಾರುಗಳಿಗೆಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಎಂ.ಸಿ.ಪದ್ಮನಾಭ, ಉಪನಿರ್ದೇಶಕ, ಪಶುಪಾಲನಾ ಇಲಾಖೆ, ಮಂಡ್ಯ

ಮನ್‌ಮುಲ್‌ ವತಿಯಿಂದಕಾಲುಬಾಯಿ ಜ್ವರ ಲಸಿಕೆ ಹಾಕಿಸಲು ಈಗಾಗಲೇ ಪ್ರಚಾರ ಕೈಗೊಳ್ಳಲಾಗಿದೆ. 47 ವಾಹನ ನೀಡಲಾಗುತ್ತಿದ್ದು, 87 ಮಂದಿ ಸಮೂಹಕಾರ್ಯಕರ್ತರು ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆಯಾ ತಾಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಲಸಿಕೆ ರವಾನಿಸಲು ವಾಹನದ ಸೌಲಭ್ಯ ಒದಗಿಸಲಾಗಿದೆ. ಡಾ.ರಾಮಕೃಷ್ಣ, ಪ್ರಭಾರ ವ್ಯವಸ್ಥಾಪಕ, ಮನ್‌ಮುಲ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.