ಮಂಡ್ಯ-ಮೈಸೂರು ಮಕ್ಕಳಿಗೆ ಅನ್ನದಾಸೋಹ


Team Udayavani, Nov 11, 2019, 4:25 PM IST

mandya-tdy-1

ಮಂಡ್ಯ: ಮೈಸೂರು ಹಾಗೂ ಮಂಡ್ಯ ಜಿಲ್ಲೆ ಯ 154 ಶಾಲೆ ಗಳಲ್ಲಿರುವ 16,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಮಹತ್ಕಾರ್ಯಕ್ಕೆ ಅಕ್ಷಯ ಫೌಂಡೇಷನ್‌ ಇದೀಗ ಕಾರ್ಯೋನ್ಮುಖವಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಅಡುಗೆ ಮನೆಗೆ ಭಾನುವಾರ ಸಂಸದೆ ಸುಮಲತಾ, ಶಾಸಕ ರವೀಂದ್ರ ಶ್ರೀಕಂಠಯ್ಯ, ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತದಾಸ್‌ ವಿದ್ಯುಕ್ತ ಚಾಲನೆ ನೀಡಿದರು.

ಏಕಕಾಲಕ್ಕೆ ಬಿಸಿಯೂಟ ತಯಾರಿ : ಮಂಡ್ಯ ಹಾಗೂ ಮೈಸೂರು ಜಿಲ್ಲೆಯ 20 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಏಕಕಾಲಕ್ಕೆ ಬಿಸಿಯೂಟ ತಯಾರಿಸುವ ಸಾಮರ್ಥ್ಯವನ್ನು ಈ ಅಡುಗೆ ಮನೆ ಒಳಗೊಂಡಿದೆ. ತಾಜಾ, ಪೌಷ್ಟಿಕ, ಶುಚಿ ಮತ್ತು ರುಚಿಕರವವಾದ ಮಧ್ಯಾಹ್ನದ ಊಟವನ್ನು ಮಕ್ಕಳಿಗೆ ಒದಗಿಸುವುದು ಇದರ ಮೂಲ ಉದ್ದೇಶವಾಗಿದೆ. ವಿಶೇಷತೆಗಳು ಏನು? ಅಕ್ಷಯ ಪಾತ್ರ ಫೌಂಡೇಷನ್‌ ನಿರ್ಮಿಸಿರುವ ಅಡುಗೆ ಮನೆಯಲ್ಲಿ ಒಂದು ಗಂಟೆಗೆ 2500 ಚಪಾತಿ ತಯಾರಿಸ ಬಹುದು. ಸರ್ಕಾರದಿಂದ ಪೂರೈ ಕೆ ಯಾಗುವ ಅಕ್ಕಿಯನ್ನು ಹದವಾಗಿ ಸಮ್ಮಿಶ್ರಣಗೊಳಿಸಿ, ಅಕ್ಕಿಯಲ್ಲಿರುವ ಪೌಷ್ಟಿಕಾಂಶ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಪ್ರತ್ಯೇಕ ಸಮ್ಮಿಶ್ರಣ ಯಂತ್ರವನ್ನು ಅಳವಡಿಸಲಾಗಿದೆ. ಇದರಿಂದ ಮೈಕ್ರೋ-ಮ್ಯಾಕ್ರೋ ನ್ಯೂಟ್ರೀಷಿಯನ್‌ ಪ್ರಮಾಣವನ್ನು ಸುರಕ್ಷಿತವಾಗಿ ಕಾಪಾಡಿ ಕೊಳ್ಳಬಹುದು.

ಕಬ್ಬಿನ ರಚ್ಚಿನ ಮೂಲಕ ಇಂಧನ : ಈ ಅಡುಗೆ ಮನೆಯಲ್ಲಿ 1000 ಮಕ್ಕಳಿಗೆ 1 ಗಂಟೆಯಲ್ಲಿ ಅನ್ನ ತಯಾರು ಮಾಡಬಹುದು ಹಾಗೂ 5000 ಮಕ್ಕಳಿಗೆ 65 ನಿಮಿಷದಲ್ಲೇ ಸಾಂಬಾರ್‌ ತಯಾರಿಸುವ ಸಾಮರ್ಥ್ಯವುಳ್ಳ ಆಧುನಿಕ ತಂತ್ರಜ್ಞಾನದ ಸ್ಟೀಮ್‌ ಬೇಸ್ಡ್ ಅಡುಗೆ ಮನೆಯಾಗಿದೆ. ಇಲ್ಲಿ ಅಡುಗೆ ತಯಾರಿಕೆಗೆ ವಿದ್ಯುತ್‌, ಗ್ಯಾಸ್‌ ಬಳಸಲಾಗುವುದಿಲ್ಲ. ಪರಿಸರ ಸ್ನೇಹಿಯಾದ ಒಟ್ಟು ಹಾಗೂ ಕಬ್ಬಿನ ರಚ್ಚಿನ ಮೂಲಕ ಇಂಧ ನವನ್ನು ಸೃಷ್ಟಿ ಸಿ ಕೊಂಡು ಅಡುಗೆ ತಯಾರಿಸಲಾಗುತ್ತದೆ.

ಏಕಕಾಲಕ್ಕೆ 3000 ಮಕ್ಕಳಿಗೆ ಊಟ: ಅಡುಗೆ ತಯಾರಾದ ಬಳಿಕ ಅದರ ತಾಜಾತನ, ಪೌಷ್ಟಿಕತೆ, ಶುಚಿ ಮತ್ತು ರುಚಿಯನ್ನು ಕಾಯ್ದುಕೊಳ್ಳಲು ವಿಶೇಷ ವಾಹನ ಗಳನ್ನು ಅಕ್ಷಯ ಪಾತ್ರ ಫೌಂಡೇಷನ್‌ ವತಿ ಯಿಂದಲೇ ವ್ಯವಸ್ಥೆ ಮಾಡಲಾಗಿದೆ. ಏಕಕಾಲಕ್ಕೆ 3000 ಮಕ್ಕಳಿಗೆ ಒಂದು ವಾಹನದಲ್ಲಿ ಸ್ಟೀಲ್‌ ಬಾಕ್ಸ್‌ಗಳಲ್ಲಿ ತುಂಬಿ ಊಟವನ್ನು ಕೊಂಡೊಯ್ಯಬಹುದು.

35 ಲೀಟರ್‌ ತ್ಯಾಜ್ಯ ನೀರು ಸಂಸ್ಕರಣಾ: ಅಡುಗೆ ಮನೆಯಲ್ಲಿ ಸೃಷ್ಟಿಯಾಗುವ ಘನ ಹಾಗೂ ದ್ರವ ತ್ಯಾಜ್ಯಗಳನ್ನು ಸಂಸ್ಕರಣೆ ಮಾಡಲು ಘಟಕ ವನ್ನು ಸ್ಥಾಪಿಸಲಾಗಿದೆ. ಇದು ಏಕಕಾಲಕ್ಕೆ 35 ಲೀಟರ್‌ ತ್ಯಾಜ್ಯ ನೀರನ್ನು ಸಂಸ್ಕರಣಾ ಮಾಡುತ್ತ ದೆ. ಈ ಸಂಸ್ಕರಿಸಿದ ನೀರನ್ನು ಕೃಷಿ ಉದ್ದೇಶಗಳಿಗೆ ಬಳಕೆ ಮಾಡ ಲಾಗು ತ್ತಿದೆ ಎಂದು ಫೌಂಡೇಷನ್‌ನ ನವೀನ ನೀರದದಾಸ ತಿಳಿಸಿದರು.

ಊಟ ಒದಗಿಸುವುದಕ್ಕೆ ವ್ಯವಸ್ಥೆ: ಈಗಾಗಲೇ ಮಹದೇವಪುರದ 2000 ಮಕ್ಕಳಿಗೆ ಬಿಸಿಯೂಟವನ್ನು ಅಕ್ಷಯ ಪಾತ್ರ ಫೌಂಡೇಷನ್‌ ವತಿಯಿಂದಲೇ ನೀಡುತ್ತಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಪ್ರಮುಖವಾಗಿ ಪರಿಗಣಿಸಿ ಬಿಸಿಯೂಟ ನೀಡಲಾಗುತ್ತಿದೆ. ಖಾಸಗಿಶಾಲೆಗಳಿಂದ ಮನವಿ ಬಂದರೆ ಅವರಿಗೂ ಊಟ ಒದಗಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಅಡುಗೆ ಮನೆಯಲ್ಲಿ ಉದ್ಯೋಗವಕಾಶ: ಅಡುಗೆ ಮನೆಯಲ್ಲಿ ತರಕಾರಿ ಕತ್ತರಿಸುವ ಯಂತ್ರಗಳನ್ನು ಅಳವಡಿಸಲಾಗಿದ್ದು, ಕೋಲ್ಡ್‌ ಸ್ಟೋರೇಜ್‌ ನಲ್ಲಿ ತರಕಾರಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಸಂಗ್ರಹಿಸಿಡಲಾಗುವುದು. ಸ್ಥಳೀಯ ಮಹಿಳೆಯರು ಹಾಗೂ ಯುವಕರಿಗೆ ಅಡುಗೆಮನೆಯಲ್ಲಿ ಉದ್ಯೋಗವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಹೊಸ ಅಡುಗೆ ಮನೆಯ ವಿವಿಧ ಭಾಗಗಳಲ್ಲಿ ರೈತ ಸಮುದಾಯಕ್ಕೆ ಸೇರಿದವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.

 

-ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.