ಅಕ್ರಮ ಗಣಿಗಾರಿಕೆ ಕಣ್ಗಾವಲಿಗೆ ಅಧಿಕಾರಿಗಳ ನೇಮಕ


Team Udayavani, Sep 25, 2020, 2:05 PM IST

ಅಕ್ರಮ ಗಣಿಗಾರಿಕೆ ಕಣ್ಗಾವಲಿಗೆ ಅಧಿಕಾರಿಗಳ ನೇಮಕ

ಮಂಡ್ಯ: ಪಾಂಡವಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಿಸುವ ಉದ್ದೇಶದಿಂದ ಕೆಆರ್‌ಎಸ್‌ ಬಳಿ ಖನಿಜ ತನಿಖಾ ಠಾಣೆ ಸ್ಥಾಪಿಸಲಾಗಿದ್ದು, ನೋಡೆಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿದಿನ ಮೂವರು ನೋಡಲ್‌ ಅಧಿಕಾರಿಗಳು ಪಾಳೀಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಪಾಂಡವಪುರ ವ್ಯಾಪ್ತಿಯ ಬೇಬಿಬೆಟ್ಟ ಸೇರಿದಂತೆ ವಿವಿಧೆಡೆ ಅಕ್ರಮಗಳ ಗಣಿಗಾರಿಕೆಯು ನಿಷೇಧದ ನಡುವೆಯೂ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವುದರಿಂದ ಜಿಲ್ಲಾಡಳಿತದಿಂದಕಟ್ಟೆಚ್ಚರ ವಹಿಸಲಾಗಿದೆ.

ಅಧಿಕಾರಿಗಳ ತಂಡ ರಚನೆ: ಬೇಬಿಬೆಟ್ಟ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ, ಗಣಿ ಸಾಮಗ್ರಿಗಳ ಸಾಗಾಣಿಕೆಗೆ ಸಂಬಂಧಿಸಿದಂತೆ ಹಲವಾರು ದೂರುಗಳು ದಾಖಲಾಗುತ್ತಿವೆ. ಇದು ರಾಜ್ಯಮಟ್ಟದಲ್ಲಿ ಚರ್ಚಿತ ವಿಷಯವಾಗಿದೆ. ಆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ತೆರೆದು ತಾಲೂಕು ಪಂಚಾಯಿತಿ, ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನೊಳಗೊಂಡ 30 ಅಧಿಕಾರಿಗಳ ತಂಡವನ್ನು ರಚಿಸಿ ಗಸ್ತಿಗೆ ನಿಯೋಜಿಸಲಾಗಿದೆ. ಇವರ ಜೊತೆಗೆ ಪೊಲೀಸರ ತಂಡ ಕಾರ್ಯನಿರ್ವಹಿಸಲಿದೆ.

ನಿತ್ಯ ಅಧಿಕಾರಿಗಳಿಂದ ಗಸ್ತು: ಪ್ರತಿದಿನ ನಿಗದಿತ ಮೂವರು ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ, ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆ ಹಾಗೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಚೆಕ್‌ಪೋಸ್ಟ್‌ಗಳಲ್ಲಿ ಗಸ್ತು ತಿರುಗ ಬೇಕು. ಅನಧಿಕೃತವಾಗಿ ಗಣಿಗಾರಿಕೆ, ಕಲ್ಲು ಸೇರಿದಂತೆ ಗಣಿ ಸಾಮಗ್ರಿಗಳು ಸಾಗಿಸುವ ವಾಹನಗಳನ್ನು ತಡೆ ಹಿಡಿದು ವಾಹನಗಳನ್ನು ವಶಕ್ಕೆ ಪಡೆಯಬೇಕು. ಚೆಕ್‌ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ ವರದಿಯನ್ನು ಜಿಲ್ಲಾ ಟಾಸ್ಕ್ಫೋರ್ಸ್‌ (ಗಣಿ) ಸಮಿತಿಯ ಸದಸ್ಯ ಕಾರ್ಯ ದರ್ಶಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗೆ ವರದಿ ನೀಡಬೇಕು. ತಪ್ಪಿದಲ್ಲಿ ಸಂಬಂಧಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಉದಯವಾಣಿಗೆ ತಿಳಿಸಿದರು.

ಅಕ್ರಮ ತಡೆಗೆ ಕ್ರಮ: ಈಗಾಗಲೇ ಅಕ್ರಮ ಗಣಿಗಾರಿಕೆ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಗಣಿ ಪ್ರದೇಶಗಳಿಗೆ ತೆರಳದಂತೆ ಸಂಪರ್ಕಿಸುವ ಮಾರ್ಗದ ರಸ್ತೆಗಳಿಗೆ ಅಡ್ಡಲಾಗಿ ಗುಂಡಿ ತೆಗೆಸಿ, ಕ್ರಮ ಕೈಗೊಳ್ಳಲಾ ಗಿದೆ. ಆದರೂ, ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಆಧಾರದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪುಷ್ಪಾ ನೇತೃತ್ವದ ತಂಡದಲ್ಲಿ ರಾತ್ರಿಯೇ ದಾಳಿ ಅಕ್ರಮ ಗಣಿಗಾರಿಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡು ಆಯಾ ಗಣಿ ಮಾಲೀಕರ ವಿರುದ್ಧ ದೂರು ದಾಖಲಿಸಲಾಗಿತ್ತು. ಭಾರೀ ಸ್ಫೋಟದ ಸದ್ದು: ಇದಕ್ಕೂ ಮೊದಲು ಕಳೆದ 2018 ಹಾಗೂ 2019ರಲ್ಲೂ ಕೆಆರ್‌ಎಸ್‌ ಸುತ್ತಮುತ್ತ ಭಾರೀ ಸ್ಫೋಟದ ಸದ್ದು ಕೇಳಿ ಬಂದಿತ್ತು. ಕಂಪನದ ತೀವ್ರತೆ ಕೆಆರ್‌ಎಸ್‌ ಜಲಾ ಶಯದ ಬಳಿ ಇರುವ ಮಾಪಕದಲ್ಲಿ ದಾಖಲಾಗಿತ್ತು. ಇದರ ಆಧಾರದ ಮೇಲೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಕೆಆರ್‌ ಎಸ್‌ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಗಣಿಗಾರಿಕೆ ನಡೆಸದಂತೆ ವರದಿ ನೀಡಿತ್ತು. ಇದರ ಆಧಾರದ ಮೇಲೆ ಗಣಿಗಾರಿಕೆ ನಿಷೇಧ ಹೇರಲಾಗಿತ್ತು. ನಂತರ ಗಣಿ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಆಗ ನ್ಯಾಯಾಲಯವು ಪರಿಶೀಲಿಸಿ ಕ್ರಷರ್‌ಗಳಿಗೆ ಮಾತ್ರ ಅನುಮತಿ ನೀಡಿತ್ತು.

ಪಾಂಡವಪುರ ತಾಲೂಕಿನ ಬೇಬಿಬೆಟ್ಟದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಗಣಿ ವಸ್ತುಗಳನ್ನು ಸಾಗಣೆ ಮಾಡದಂತೆ ಕಟ್ಟೆಚ್ಚರ ವಹಿಸಲು ಪಾಳೀಯ ಆಧಾರದ ಮೇಲೆ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿದಿನ ಮೂವರು ನೋಡಲ್‌ ಅಧಿಕಾರಿಗಳು ಗಸ್ತು ನಡೆಸಲಿದ್ದಾರೆ. ಇವರ ಜೊತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ ಡಾ.ಎಂ.ವಿ.ವೆಂಕಟೇಶ್‌, ಜಿಲ್ಲಾಧಿಕಾರಿ, ಮಂಡ್ಯ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.