ಆಟೋ-ಟ್ಯಾಕ್ಸಿ ಸೇವೆ ಬಂದ್‌: ಚಾಲಕರ ಪ್ರತಿಭಟನೆ

ಎಫ್ಸಿ ನವೀಕರಣ, ಪರವಾನಗಿ ವಿಸ್ತರಣೆ, 50 ಸಾವಿರ ರೂ. ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Team Udayavani, Jun 18, 2019, 12:24 PM IST

mandya-tdy-2..

ಹದಿನೈದು ವರ್ಷ ಮೇಲ್ಪಟ್ಟ ಆಟೋ-ಟ್ಯಾಕ್ಸಿಗಳ ಎಫ್ಸಿ ನವೀಕರಿಸಿ, ಪರವಾನಗಿ ವಿಸ್ತರಣೆ ಮಾಡುವಂತೆ ಒತ್ತಾಯಿಸಿ ಆಟೋ-ಟ್ಯಾಕ್ಸಿ ಚಾಲಕರು ಡೀಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಡ್ಯ: ಹದಿನೈದು ವರ್ಷಗಳ ಹಿಂದಿನ ಆಟೋ ಟ್ಯಾಕ್ಸಿಗಳಿಗೆ ಗುಣಮಟ್ಟ ಪ್ರಮಾಣಪತ್ರ ನೀಡದಿರುವುದರ ವಿರುದ್ದ ಸೋಮವಾರ ಜಿಲ್ಲಾದ್ಯಂತ ಆಟೋ-ಟ್ಯಾಕ್ಸಿ ಸೇವೆ ಬಂದ್‌ ಮಾಡಿ ಚಾಲಕರು ಪ್ರತಿಭಟನೆ ನಡೆಸಿದರು.

ನಗರದ ಸಿಲ್ವರ್‌ ಜ್ಯೂಬಿಲಿ ಉದ್ಯಾನದ ಬಳಿ ಜಮಾವಣೆಗೊಂಡ ಚಾಲಕರು ಅಲ್ಲಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್‌ ವೃತ್ತ, ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಆಗಮಿಸಿ ಧರಣಿ ನಡೆಸಿದರು.

ಆಖೀಲ ಕರ್ನಾಟಕ ರಾಜೀವ್‌ಗಾಂಧಿ ಆಟೋ ಟ್ಯಾಕ್ಸಿ ಚಾಲಕರ ವೇದಿಕೆ ಅಧ್ಯಕ್ಷ ಟಿ.ಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಆಟೋ ಮತ್ತು ಟ್ಯಾಕ್ಸಿಗಳಿವೆ. ಇವುಗಳನ್ನೇ ಅವಲಂಬಿಸಿಕೊಂಡು ಚಾಲಕರು 50 ವರ್ಷಗಳಿಂದ ಜೀವನ ನಡೆಸುತ್ತಿದ್ದಾರೆ. ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ಬದುಕು ಕಂಡುಕೊಂಡಿದ್ದಾರೆ ಎಂದು ಹೇಳಿದರು.

ಈ ಹಿಂದೆ 65 ಸಾವಿರದಿಂದ 75 ಸಾವಿರ ರೂ.ಗಳಿಗೆ ಆಟೋಗಳು ಸಿಗುತ್ತಿದ್ದವು. ಈಗ ಅವುಗಳ ಬೆಲೆ 2 ಲಕ್ಷ ರೂ.ಗಳಿಗೂ ಹೆಚ್ಚಾಗಿದೆ. ಆಟೋ ಚಾಲಕರು ಸಾಲಗಾರರಾಗುವ ಪರಿಸ್ಥಿತಿ ಎದುರಾಗಿದೆ. ಆದರೆ, ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮಾವಳಿಗಳ 155ರ ಅಡಿ ವಾಯು ಮಾಲಿನ್ಯ ತಡೆಗಟ್ಟಲು ವಯೋಮಿತಿ ಆಧಾರದ ಮೇಲೆ 15 ವರ್ಷ ಮೀರಿದ ವಾಹನಗಳ ಪರವಾನಗಿ ಸರ್ಕಾರ ವಶಪಡಿಸಿಕೊಂಡು ಹೊಸ ಆಟೋ ಖರೀದಿಗಾಗಿ 50 ಸಾವಿರ ರೂ. ಸಹಾಯ ಧನ ನೀಡಲಾಗುವುದು ಎಂದು ಭರವಸೆ ನೀಡಿತ್ತು. ಸರ್ಕಾರದ ಭರವಸೆ ಇದುವರೆಗೂ ಈಡೇರಿಲ್ಲ. ಹೊಸ ಆಟೋ ಖರೀದಿಗೆ ಚಾಲಕರ ಬಳಿ ಹಣವಿಲ್ಲ. ಹಾಗಾಗಿ 15 ವರ್ಷ ಮೇಲ್ಪಟ್ಟ ವಾಹನಗಳಿಗೆ ಗುಣಮಟ್ಟ ಪ್ರಮಾಣಪತ್ರ ನವೀಕರಿಸುವುದರ ಜೊತೆಗೆ ಪರವಾನಗಿ ವಿಸ್ತರಣೆ ಮಾಡುವಂತೆ ಒತ್ತಾಯಿಸಿದರು.

ಆಟೋ ಚಾಲಕರಾದ ವಿ.ಸಿದ್ದೇಗೌಡ, ಆರ್‌.ರವಿ, ಎಂ.ರಾಜು, ಎಂ.ಎನ್‌.ಸತ್ಯನಾರಾಯಣ್‌, ನಾರಾಯಣ, ಎಚ್.ಸಿ.ಮಹೇಶ್‌, ಕುಮಾರ್‌ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬೇಡಿಕೆಗಳೇನು? ಎಫ್ಸಿಯನ್ನು ಸಾರಿಗೆ ಅಧಿಕಾರಿಗಳಿಂದ ಕೂಡಲೇ ಕೊಡಿಸುವುದು. ಮಂಡ್ಯ ನಗರದ ಕಸಬಾ ಹೋಬಳಿ ವ್ಯಾಪ್ತಿಯ ಪರ್ಮಿಟ್ನ್ನು ರಸ್ತೆ ಸಾರಿಗೆ ಇಲಾಖೆ ಯಾವುದೇ ಸಭೆ ಕರೆಯದೇ 12 ಕಿ.ಮೀ ವ್ಯಾಪ್ತಿಯನ್ನು 8 ಕಿ.ಮೀಗೆ ಕಡಿತಗೊಳಿಸಿದೆ. ಇದನ್ನು 17 ಕಿ.ಮೀಗೆ ಹೆಚ್ಚಳ ಮಾಡಬೇಕು. ಸಾರಿಗೆ ಇಲಾಖೆ ಆಟೋಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಭೆ ನಡೆಸಬೇಕು.

ಬೆಂಗಳೂರಿನ ಬೆಲೆಯಲ್ಲೇ ಮಂಡ್ಯದಲ್ಲೂ ಆಟೋ ದೊರಕಿಸಿಕೊಡಬೇಕು. ಸ್ವಂತ ಮನೆ ಇಲ್ಲದ ಆಟೋ ಚಾಲಕರಿಗೆ ನಿವೇಶನ ನೀಡುವುದು. ನಗರಾದ್ಯಂತ ಆಟೋ ಟ್ಯಾಕ್ಸಿ ನಿಲ್ದಾಣಗಳಿಗೆ ಕೂಡಲೇ ನೋಂದಣಿ ಮಾಡಿಕೊಡಬೇಕು. ಎಲ್ಲ ನಿಲ್ದಾಣಗಳಿಗೆ ಸರ್ಕಾರದಿಂದ ಮೇಲ್ಛಾವಣಿ ಹಾಕಿಸುವುದು. ಕೇಂದ್ರ ಸರ್ಕಾರದಿಂದ ಆಟೋಗಳಿಗೆ ವಿಮೆ ಹೆಚ್ಚಿಸುತ್ತಿರುವುದರಿಂದ 5 ಸಾವಿರಕ್ಕಿಂತ ಕಡಿಮೆ ಮಾಡಿ ಕೊಡಬೇಕು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.