ಮಾರಣಾಂತಿಕ ಕಾಯಿಲೆಗಳ ಅರಿವು ಅಗತ್ಯ
Team Udayavani, Dec 1, 2019, 11:48 AM IST
ಮದ್ದೂರು: ಮಾರಣಾಂತಿಕ ಕಾಯಿಲೆಗಳ ಬಗ್ಗೆ ಪ್ರಥಮ ಹಂತದಲ್ಲೇ ಅರಿವು ಮೂಡಿಸಿದಲ್ಲಿ ಅದರ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಜಿಲ್ಲಾ ಶಿಕ್ಷಣಾಧಿಕಾರಿ ಪಿ. ಶಿವಾನಂದ ತಿಳಿಸಿದರು.
ಮದ್ದೂರು ಪಟ್ಟಣದ ವರ್ಧಮಾನ ಪ್ಯಾರಮೆಡಿಕಲ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಏಡ್ಸ್ ಮಹಾಮಾರಿ ಕಾಯಿಲೆಯಾಗಿದ್ದು,ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೆಚ್ಚಾಗಿಕಂಡು ಬರುತ್ತಿರುವುದು ಆತಂಕದ ವಿಷಯ.ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ರೋಗಗಳು ಹರಡ ದಂತೆ ಎಚ್ಚರಿಕೆವಹಿಸಬೇಕು ಎಂದರು.
ಜಿಲ್ಲೆಯಲ್ಲಿ 10.5 ಸಾವಿರ ಮಂದಿ ಎಚ್ಐವಿ ಶಂಕಿತರಿದ್ದು ತಾಲೂಕಿನಲ್ಲಿ 1500 ಮಂದಿ ಏಡ್ಸ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಗರ್ಭಿಣಿಯರನ್ನು ತಪಾಸಣೆ ನಡೆಸಿ ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದಾಗಿ ಹೇಳಿದರು.
ಎಚ್ಐವಿ ಪೀಡಿತ ರೋಗಿಗಳಿಗೆ ಸರಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮುಂದಾ ಗಿದ್ದು ಮಾಸಾಶನ, ಪುನರ್ವಸತಿ, ಶಿಕ್ಷಣ, ವಿದ್ಯಾರ್ಥಿ ವೇತನ ಇನ್ನಿತರೆ ಸೌಲಭ್ಯಗಳನ್ನುನೀಡಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವುದಾಗಿ ಹೇಳಿದರು.
ಸೂಕ್ತ ಮಾಹಿತಿಗಳನ್ನು ಸಕಾಲದಲ್ಲಿಇಲಾಖೆ ಅಧಿಕಾರಿಗಳು ಜಾಗೃತಿ ನಡೆಸಿದಲ್ಲಿ ಇಂತಹ ಕಾಯಿಲೆಗಳನ್ನು ಸಮರ್ಥವಾಗಿತಡೆಗಟ್ಟಬಹುದು ಎಂದು ತಿಳಿಸಿದರಲ್ಲದೇ ಲೈಂಗಿಕ ಅಸುರಕ್ಷತೆ, ಸೊಂಕಿತ ವ್ಯಕ್ತಿಯುರಕ್ತದಾನ ಮಾಡುವ ಮೂಲಕ ಮತ್ತು ರಕ್ತ ಪಡೆಯುವುದರಿಂದ ಸೊಂಕಿತ ವ್ಯಕ್ತಿಗೆ ಬಳಸಿದ ಸೂಜಿ ಬಳಕೆಯಿಂದಾಗಿ ಸೊಂಕು ಹರಡುವುದಾಗಿ ತಿಳಿಸಿದರು. ಭಾಷಣ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ಪ್ರಾಂಶುಪಾಲೆ ನವ್ಯ, ಉಪನ್ಯಾಸಕರಾದ ಪುಣ್ಯ, ಕೌಶಲ್ಯ, ಪುಷ್ಪಾವತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ