ದಶಪಥ ಹೆದ್ದಾರಿ: ಅಪಘಾತ ತಡೆಗಿಲ್ಲ ಕ್ರಮ 


Team Udayavani, Mar 14, 2023, 3:37 PM IST

tdy-17

ಮಂಡ್ಯ: ಭಾನುವಾರ ಉದ್ಘಾಟನೆಗೊಂಡ ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದಶಪಥ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ. ಆದರೆ, ಅಪಘಾತ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.

ಬೆಂಗಳೂರಿನ ಪಂಚಮುಖೀ ಗಣಪತಿ ದೇವಾಲಯದಿಂದ ಆರಂಭವಾಗುವ ಹೆದ್ದಾರಿಯ ಪ್ರಯಾಣದ ಸಮಯ ಕಡಿತಗೊಂಡಿದೆ. ಎರಡು ಗಂಟೆಗಳ ಪ್ರಯಾಣ 90 ನಿಮಿಷಕ್ಕೆ ಇಳಿಕೆ ಯಾಗಿದೆ. ಇದರಿಂದ ಬೇಗ ತಲುಪುವ ಧಾವಂತದಲ್ಲಿ ವಾಹನ ಚಾಲಕರು 120 ಕಿ.ಮೀಗಿಂತ ಹೆಚ್ಚು ವೇಗವಾಗಿ ಚಲಿಸುವುದರಿಂದ ಅಪಘಾತಗಳು ಸಂಭವಿಸುತ್ತಿವೆ.

ಸೂಕ್ತ ಸೂಚನಾ ಫಲಕಗಳಿಲ್ಲ: ಅಪಘಾತಗಳನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೆದ್ದಾರಿ ನಿರ್ಮಿಸಿರುವುದು ಬಿಟ್ಟರೆ ತಿರುವು, ಪ್ಲೆ„ಓವರ್‌, ಅಪಾಯದ ಸ್ಥಳಗಳಲ್ಲಿ ಎಷ್ಟು ವೇಗದಲ್ಲಿ ಸಾಗಬೇಕು ಎಂಬ ಯಾವುದೇ ವೇಗದ ಮಿತಿ ಸೂಚಿಸುವ ವ್ಯವಸ್ಥೆ ಇಲ್ಲ. ಮೂರು ಪ್ಲೆ„ಓವರ್‌ಗಳು ಸಿಗಲಿವೆ. ಅಲ್ಲದೆ, ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಪ್ರಾಧಿಕಾರದ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸದೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ.

ಬೈಪಾಸ್‌ ರಸ್ತೆಗಿಲ್ಲ ಸುರಕ್ಷತೆ: ಹೆದ್ದಾರಿಯಲ್ಲಿ ಐದು ಬೈಪಾಸ್‌ಗಳು ಸಿಗಲಿದ್ದು, ರಸ್ತೆಗೆ ಸುರಕ್ಷತೆ ಕೊರತೆ ಇದೆ. ಬಿಡದಿ ಬಳಿ 6.994 ಕಿ.ಮೀ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ 22.35 ಕಿ.ಮೀ, ಮದ್ದೂರು 4.459 ಕಿ.ಮೀ, ಮಂಡ್ಯ 10.040 ಕಿ.ಮೀ, ಶ್ರೀರಂಗ ಪಟ್ಟಣ 8.194 ಕಿ.ಮೀ ಉದ್ದದ ಬೈಪಾಸ್‌ಗಳು ಬರಲಿವೆ. ಇಲ್ಲಿ ಹಗಲು ಹಾಗೂ ರಾತ್ರಿ ವೇಳೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ. ಬೈಪಾಸ್‌ ದಾಟುವ ಹಿನ್ನೆಲೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.

ಸೇತುವೆಗಳ ಬಳಿ ಸೂಚನಾಫಲಕವಿಲ್ಲ: ಅತಿ ಹೆಚ್ಚು ಪ್ರಮುಖ ಸೇತುವೆಗಳು ಬೈಪಾಸ್‌ ರಸ್ತೆಗಳಲ್ಲಿ ಬರುತ್ತವೆ. ಇಲ್ಲಿ ಯಾವುದೇ ವೇಗದ ಮಿತಿಯ ಸೂಚನಾ ಫಲಕವಿಲ್ಲ. 10 ಪ್ರಮುಖ ಸೇತುವೆಗಳು ಬೈಪಾಸ್‌ನಲ್ಲಿ ಸಿಗುತ್ತವೆ. ಬಿಡದಿ ಬೈಪಾಸ್‌ನಲ್ಲಿ 1, ರಾಮನಗರ ಮತ್ತು ಚನ್ನಪಟ್ಟಣದ ಬೈಪಾಸ್‌ಗಳಲ್ಲಿ 3, ಮದ್ದೂರು 2, ಮಂಡ್ಯ ಬೈಪಾಸ್‌ನಲ್ಲಿ 1 ಹಾಗೂ ಶ್ರೀರಂಗಪಟ್ಟಣ ಬೈಪಾಸ್‌ನಲ್ಲಿ ಮೂರು ಸೇತುಗಳು ಬರಲಿದ್ದು, 44 ಚಿಕ್ಕಸೇತುವೆಗಳು ಸಿಗಲಿವೆ. ಇಲ್ಲಿ ಅಗತ್ಯವಾಗಿ ವೇಗದ ಮಿತಿಯ ಸೂಚನಾ ಫಲಕಗಳನ್ನು ಅಳಡಿಸುವ ಅಗತ್ಯವಿದೆ.

80ಕ್ಕೂ ಹೆಚ್ಚು ಸಾವು: ಕಳೆದ ಆರು ತಿಂಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಹೆದ್ದಾರಿ ಉದ್ಘಾಟಿಸಿದ ಕೆಲವೇ ಘಂಟೆಗಳಲ್ಲಿ ಮದ್ದೂರಿನ ಶಿಂಷಾನದಿಯ ಪ್ಲೆ„ಓವರ್‌ ಮೇಲೆ ಕಾರೊಂದು ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಏರ್‌ ಬ್ಯಾಗ್‌ ತೆರೆದಿದ್ದರಿಂದ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂತಹ ಘಟನೆಗಳು ಆಗಾಗ್ಗೆ ಸಂಭವಿಸುತ್ತಲೇ ಇವೆ.

ತುರ್ತು ವೈದ್ಯಕೀಯ ಸೌಲಭ್ಯವಿಲ್ಲ: ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದರೆ ತುರ್ತು ವೈದ್ಯಕೀಯ ಸೌಲಭ್ಯಗಳು ಸಿಗುವುದಿಲ್ಲ. ಇದರಿಂದ ಅಪಘಾತ ಸಂಭವಿಸಿದಾಗ ಗಾಯಾಳುಗಳು ಸಾವನ್ನಪ್ಪುವ ಸಾಧ್ಯತೆಗಳೇ ಹೆಚ್ಚಿದೆ. ಹೆದ್ದಾರಿಯ ಮಧ್ಯೆದಲ್ಲಿ ರಸ್ತೆ ವಿಭಜಕವಿದ್ದು, ಕಬ್ಬಿಣದ ತಡೆಗೋಡೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ರೋಗಿಯನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲು ಸಾಧ್ಯವಾಗದ ಸ್ಥಿತಿ ಇದೆ. ತುರ್ತಾಗಿ ಆ್ಯಂಬುಲೆನ್ಸ್‌ಗಳು ಹೋಗಲು ಯುಟರ್ನ್ ಇಲ್ಲದಿರುವುದು ಗಾಯಾಳುಗಳನ್ನು ಸಾಗಿಸಲು ತೊಂದರೆಯಾಗುತ್ತಿದೆ.

ಇಂದು ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಜಾರಿ : ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ ಬಳಕೆಗಾಗಿ ಟೋಲ್‌ ಶುಲ್ಕಗಳು ಇಂದು ಬೆಳಗ್ಗೆ 8ಗಂಟೆಯೊಂದಲೇ ಅನ್ವಯವಾಗಲಿದೆ. ಕಾರು, ಜೀಪು, ವ್ಯಾನ್‌ಗಳಿಗೆ ಏಕಮುಖ ಸಂಚಾರಕ್ಕೆ ರೂ.135 ಅದೇ ದಿನ ಮರು ಸಂಚಾರಕ್ಕೆ ರೂ. 205, 1 ತಿಂಗಳಲ್ಲಿ 50 ಏಕಮುಖ ಸಂಚಾರಕ್ಕೆ ತಿಂಗಳ ಪಾಸ್‌ ಶುಲ್ಕ ರೂ. 4525, ಬಸ್‌ ಅಥವಾ ಟ್ರಕ್‌ ಏಕ ಮುಖ ಸಂಚಾರಕ್ಕೆ ರೂ. 460 ಅದೇ ದಿನ ಮರು ಸಂಚಾರಕ್ಕೆ ರೂ. 690, 1 ತಿಂಗಳಲ್ಲಿ 50 ಏಕಮುಖ ಸಂಚಾರಕ್ಕೆ ತಿಂಗಳ ಪಾಸ್‌ ಶುಲ್ಕ ರೂ. 15325, ಲಘು ವಾಣಿಜ್ಯ ವಾಹನಗಳು, ಮೂರು ಅಕ್ಸೆಲ್‌ ವಾಣಿಜ್ಯ ವಾಹನಗಳು ಮತ್ತು ಭಾರಿ ಪ್ರಮಾಣ ಯಂತ್ರಗಳು ಗಳಿಗೆ ವಿವಿಧ ದರಗಳನ್ನು ನಿಗದಿಪಡಿಸಿರುವುದಾಗಿ ಪ್ರಕಟಣೆ ತಿಳಿಸಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿದಿನ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಬೆಂಗಳೂರು-ಮೈಸೂರು ಮಧ್ಯಭಾಗದಲ್ಲಿ ಟ್ರಾಮಾಕೇರ್‌ ಸೆಂಟರ್‌ ತೆರೆಯುವಂತೆ ಈಗಾಗಲೇ ಕೇಂದ್ರ, ರಾಜ್ಯ ಹಾಗೂ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿದ್ದೇವೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ವಹಿಸಬೇಕು. – ದಿನೇಶ್‌ಗೂಳಿಗೌಡ, ಎಂಎಲ್‌ಸಿ, ಮಂಡ್ಯ

-ಎಚ್‌.ಶಿವರಾಜು

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.