ಕೋವಿಡ್ 19 ತಡೆಗೆ ಎಚ್ಚರವಹಿಸಿ: ಸಂಸದೆ
Team Udayavani, Jul 2, 2020, 5:11 AM IST
ಭಾರತೀನಗರ: ಕೋವಿಡ್ 19 ತಡೆಗಾಗಿ ಸಾರ್ವಜನಿಕರು ಎಚ್ಚರವಹಿಸಬೇಕು. ಇಲ್ಲದಿದ್ದರೆ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸಂಸದೆ ಸುಮಲತಾ ತಿಳಿಸಿದರು. ಬಿದರಹಳ್ಳಿ ಗ್ರಾಪಂನಿಂದ ನಿರ್ಮಿಸಿರುವ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ಕೋವಿಡ್ 19 ಬಡವರು, ಶ್ರೀಮಂತರು ಎಂದು ನೋಡುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು. ಗುಂಪಾಗಿ ನಿಲ್ಲುವುದನ್ನು ಕಡಿಮೆ ಮಾಡಬೇಕು.
ಶುದ್ಧ ನೀರಿನ ಘಟಕವನ್ನು ಬಳಸಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಿ ಎಂದರು. ಬಿದರಹೊಸಹಳ್ಳಿ ಗ್ರಾಮದ ಸಮುದಾಯ ಭವನಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಿದರಹೊಸಹಳ್ಳಿ ಸರ್ಕಾರ ಪ್ರೌಢಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಸಂಸದರಿಗೆ ಮನವಿ ಸಲ್ಲಿಸಲಾಯಿತು. ತಹಶೀಲ್ದಾರ್ ಎಚ್.ವಿಜಿಕುಮಾರ್, ಇಒ ಮುನಿರಾಜು, ಡಿವೈಎಸ್ಪಿ ಪೃಥ್ವಿ, ಜಿಪಂ ಸದಸ್ಯ ಎ.ಎಸ್.ರಾಜೀವ್, ಗ್ರಾಪಂ ಅಧ್ಯಕ್ಷ ಚಿಕ್ಕಹನುಮೇಗೌಡ, ಪಿಡಿಒ ಮಹದೇವು, ತಾಪಂ ಸದಸ್ಯ ದೇವೇಗೌಡ, ಉಪಾಧ್ಯಕ್ಷ ನಾಗೇಶ್, ಬೇಲೂರು ಸೋಮಶೇಖರ್ ಇದ್ದರು.
ಕೂಲಿಕಾರರ ಮನವಿ: ಉದ್ಯೋಗ ಖಾತರಿ ಯೋಜನೆಯಡಿ 200 ದಿನ ಕೆಲಸ ನೀಡಬೇಕು. ದಿನದ ಕೂಲಿ 600 ರೂ ಹೆಚ್ಚಿಸಬೇಕು. ಮೈಷುಗರ್ ಕಾರ್ಖಾನೆ ಸರ್ಕಾರದ ಸ್ವಾಮ್ಯದಲ್ಲೇ ಉಳಿಸುವಂತೆ ಸದನದಲ್ಲಿ ಚರ್ಚಿಸಬೇಕು ಎಂದು ಕೃಷಿಕೂಲಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಸಂಸದೆ ಸುಮಲತಾ ಅವರಿಗೆ ಮನವಿ ಸಲ್ಲಿಸಿದರು. ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್ ಮತ್ತು ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು