Biometric: ನೋಂದಣಿ, ಖರೀದಿಗೆ ಬಯೋಮೆಟ್ರಿಕ್‌


Team Udayavani, Dec 16, 2023, 3:18 PM IST

Biometric: ನೋಂದಣಿ, ಖರೀದಿಗೆ ಬಯೋಮೆಟ್ರಿಕ್‌

ಮಂಡ್ಯ: ಜಿಲ್ಲೆಯಲ್ಲಿ ಭತ್ತ ಕಟಾವು ನಡೆಯುತ್ತಿದ್ದು, ಖರೀದಿ ಕೇಂದ್ರ ತೆರೆಯಲು ವಿಳಂಬವಾಗುತ್ತಿದೆ. ಇದರಿಂದ ಭತ್ತ ದಲ್ಲಾಳಿಗಳ ಪಾಲಾಗುತ್ತಿದೆ. ಆದ್ದರಿಂದ ಕೂಡಲೇ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನೋಂದಣಿ ಹಾಗೂ ಖರೀದಿ ಕೇಂದ್ರ ಗುರುತಿಸಿ ಆದೇಶ ಹೊರಡಿಸಿದೆ. ಆದರೆ, ಬಯೋಮೆಟ್ರಿಕ್‌ ಪರಿಕರಗಳು ಬಾರದ ಹಿನ್ನೆಲೆಯಲ್ಲಿ ನೋಂದಣಿ ವಿಳಂಬವಾಗುತ್ತಿದೆ.

ಇತ್ತೀಚೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅ ಧಿಕಾರಿಗಳ ಸಭೆ ನಡೆಸಿ ಖರೀದಿ ಕೇಂದ್ರ ತೆರೆಯುವ ಸಂಬಂಧ ಟಾಸ್ಕ್ಫೋರ್ಸ್‌ ಸಮಿತಿ ರಚನೆ ಮಾಡಿದ್ದರು. ಅದರಂತೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಯನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಆಯಾ ತಾಲೂಕುಗಳ ತಹಶೀಲ್ದಾರ್‌ಗಳಿಗೆ ಜವಾಬ್ದಾರಿ ನೀಡಲಾಗಿದೆ. ಆದರೆ, ಈ ಬಾರಿ ಬಯೋಮೆಟ್ರಿಕ್‌ ಮೂಲಕ ಭತ್ತ, ರಾಗಿ ಖರೀದಿಗೆ ರೈತರಿಂದ ನೋಂದಣಿ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಆದರೆ, ಇನ್ನೂ ನೋಂದಣಿಗೆ ಬಯೋಮೆಟ್ರಿಕ್‌ ಯಂತ್ರಗಳು ಬಾರದಿರುವುದರಿಂದ ನೋಂದಣಿ ಹಾಗೂ ಖರೀದಿ ಆರಂಭವೇ ಆಗಿಲ್ಲ.

33 ನೋಂದಣಿ ಕೇಂದ್ರಗಳು: ಜಿಲ್ಲಾದ್ಯಂತ ಭತ್ತ ಖರೀದಿಗೆ 33 ನೋಂದಣಿ ಕೇಂದ್ರಗಳು, 13 ಖರೀದಿ ಕೇಂದ್ರಗಳನ್ನು ತೆರೆಯಲು ಗುರುತಿಸಲಾಗಿದೆ. ಮಂಡ್ಯ, ಮದ್ದೂರು, ಕೆ.ಆರ್‌.ಪೇಟೆ ತಲಾ 6, ಮಳವಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ ತಲಾ 4 ಹಾಗೂ ನಾಗಮಂಗಲದಲ್ಲಿ 3 ನೋಂದಣಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ನಡೆದಿದೆ.

13 ಭತ್ತ, 7 ರಾಗಿ ಖರೀದಿ ಕೇಂದ್ರ: ಕೆ.ಆರ್‌.ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ ತಲಾ 2, ನಾಗಮಂಗಲ, ಪಾಂಡವಪುರ ತಲಾ 1 ಹಾಗೂ ಶ್ರೀರಂಗಪಟ್ಟಣದ 3 ಕಡೆ ಸೇರಿದಂತೆ 13 ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಅದರಂತೆ ಜಿಲ್ಲೆಯ ಏಳು ಕಡೆ ರಾಗಿ ಖರೀದಿ ಕೇಂದ್ರ ತೆರೆಯಲಾಗುತ್ತಿದೆ. ಏಳು ತಾಲೂಕುಗಳ ಆಯಾ ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿಸಲು ಸಿದ್ಧತೆ ನಡೆದಿದೆ.

ಬಯೋಮೆಟ್ರಿಕ್‌ ಮೂಲಕ ನೋಂದಣಿ: ಈ ಬಾರಿ ಬಯೋಮೆಟ್ರಿಕ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಮುಂದಾಗಿದೆ. ಆದ್ದರಿಂದ ಇನ್ನೂ ಏಜೆನ್ಸಿಯಿಂದ ನೋಂದಣಿ ಕೇಂದ್ರಗಳಿಗೆ ಬಯೋಮೆಟ್ರಿಕ್‌ ಪರಿಕರಗಳು ಬರಲು ತಡವಾಗಿದ್ದರಿಂದ ನೋಂದಣಿ ಹಾಗೂ ಖರೀದಿ ಎರಡೂ ವಿಳಂಬವಾಗುತ್ತಿದೆ. ಬಯೋಮೆಟ್ರಿಕ್‌ ಪರಿಕರಗಳು ಬಂದರೆ ಇನ್ನೆರಡು ದಿನಗಳಲ್ಲಿ ನೋಂದಣಿ ಆರಂಭವಾಗಲಿದೆ.

ದರ ನಿಗದಿ: ಭತ್ತ ಹಾಗೂ ರಾಗಿಗೆ ಈಗಾಗಲೇ ದರ ನಿಗದಿಪಡಿಸಲಾಗಿದೆ. ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 2,183 ರೂ., ಗ್ರೇಡ್‌ ಎ ಭತ್ತಕ್ಕೆ 2203 ರೂ. ನಿಗದಿಪಡಿಸಲಾಗಿದೆ. ರಾಗಿಗೆ ಕ್ವಿಂಟಾಲ್‌ಗೆ 3,846 ರೂ. ದರ ನಿಗದಿಪಡಿಸಲಾಗಿದೆ.

ದಲ್ಲಾಳಿಗಳಿಂದ ಭತ್ತ ಖರೀದಿ: ಕೃತಕ ಅಭಾವ ಸೃಷ್ಟಿ ಸಾಧ್ಯತೆ: ಈಗಾಗಲೇ ಭತ್ತ ಕಟಾವು ವೇಗವಾಗಿ ನಡೆಯುತ್ತಿದೆ. ಆದರೆ, ದಲ್ಲಾಳಿಗಳು ನೇರವಾಗಿ ರೈತರಿಂದ ಖರೀದಿಸುತ್ತಿದ್ದಾರೆ. ಸರ್ಕಾರದ ಬೆಂಬಲ ಬೆಲೆಗಿಂತ ಹೆಚ್ಚು ದರ ನೀಡಿ ಗದ್ದೆಗಳಲ್ಲಿಯೇ ಒಕ್ಕಣೆಯಾಗುತ್ತಿದ್ದಂತೆ ಖರೀದಿ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಅಕ್ಕಿಗೆ ಕೃತಕ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿದೆ. ಸರ್ಕಾರವು ನಿಗದಿತ ಅವಧಿಯಲ್ಲಿ ಖರೀದಿ ಕೇಂದ್ರ ತೆರೆಯದೇ ನಿರ್ಲಕ್ಷ್ಯ ವಹಿಸಿರುವುದರಿಂದ ದಲ್ಲಾಳಿಗಳು ಭತ್ತ ಖರೀದಿಗೆ ಮುಗಿಬಿದ್ದಿದ್ದಾರೆ. ಅಲ್ಲದೇ, ಸರ್ಕಾರದ ಬೆಂಬಲ ಬೆಲೆಗಿಂತ ಹೆಚ್ಚು ದರ ನೀಡಿ ಭತ್ತ ಖರೀದಿಸುತ್ತಿದ್ದಾರೆ. ಸರ್ಕಾರ ಸಾಮಾನ್ಯ ಭತ್ತಕ್ಕೆ 2,183 ರೂ. ನಿಗದಿ ಮಾಡಿದ್ದರೆ, ದಲ್ಲಾಳಿಗಳು 2,200 ರಿಂದ 2300 ರೂ. ನೀಡುತ್ತಿದ್ದಾರೆ. ಗ್ರೇಡ್‌ ಎ ಭತ್ತಕ್ಕೆ ಸರ್ಕಾರ 2,203 ರೂ. ನೀಡುತ್ತಿದ್ದರೆ ದಲ್ಲಾಳಿಗಳು 2,800ರಿಂದ 3 ಸಾವಿರ ರೂ.ವರೆಗೂ ನೀಡುತ್ತಿದ್ದಾರೆ. ಇದರಿಂದ ಈ ಬಾರಿ ನಿರೀಕ್ಷೆಗಿಂತ ಕಡಿಮೆ ರೈತರಿಂದ ನೋಂದಣಿ ಆಗುವ ಸಾಧ್ಯತೆ ಇದೆ.

ಮೂಲ ಸೌಕರ್ಯ ತಹಶೀಲ್ದಾರ್‌ಗಳ ಹೊಣೆ : ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಲು ತಹಶೀಲ್ದಾರ್‌ಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಯಾ ವ್ಯಾಪ್ತಿಯ ತಹಶೀಲ್ದಾರ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ಶಾಖಾ ವ್ಯವಸ್ಥಾಪಕರು ಸಮನ್ವಯತೆಯಿಂದ ರೈತರಿಗೆ ಪ್ರಚಾರ, ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೋಂದಣಿ ಹಾಗೂ ಖರೀದಿ ಕೇಂದ್ರಗಳ ಗುರುತಿಸಿ ಸಿದ್ಧತೆ ನಡೆಸಲಾಗಿದೆ. ಬಯೋಮೆಟ್ರಿಕ್‌ ಮೂಲಕ ರೈತರ ನೋಂದಣಿ ನಡೆಯಲಿದೆ. ಇನ್ನೂ ಬಯೋಮೆಟ್ರಿಕ್‌ ಪರಿಕರಗಳು ಬಂದಿಲ್ಲ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯಿಂದ ಬಂದ ನಂತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ● ಕೃಷ್ಣಕುಮಾರ್‌, ಜಂಟಿ ನಿರ್ದೇಶಕರು,, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಮಂಡ್ಯ

– ಎಚ್‌.ಶಿವರಾಜು

 

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.