ನಿಗಮ,ನಾಮ ನಿರ್ದೇಶನಕ್ಕೆ ಆಕಾಂಕ್ಷಿಗಳ ದಂಡು
200ಕ್ಕೂಹೆಚ್ಚುಮಂದಿ ಮುಖಂಡರ ಪಟ್ಟಿ ರವಾನೆ
Team Udayavani, Nov 29, 2020, 4:23 PM IST
ಮಂಡ್ಯ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಸರ್ಕಾರದ ನಾಮನಿರ್ದೇಶನಗಳಿಗೆ ಲಾಬಿ ನಡೆಯುತ್ತಿದ್ದು, ಅದರಂತೆ ಮಂಡ್ಯ ಜಿಲ್ಲೆಯಲ್ಲೂ ಆಕಾಂಕ್ಷಿತರ ದಂಡು ಹೆಚ್ಚಾಗಿದೆ.
ಈಗಾಗಲೇ ಕಾಡಾ, ಮೂಡಾಗಳಿಗೆ ಅಧ್ಯಕ್ಷರ ನೇಮಕ ನಡೆದಿದೆ. ಮನ್ ಮುಲ್, ಡಿಸಿಸಿ ಬ್ಯಾಂಕ್ ಸೇರಿದಂತೆ ವಿವಿಧ ಸಹಕಾರ ಸಂಘಗಳಿಗೆ ಸರ್ಕಾರದಿಂದ ನಾಮ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಇದೀಗ ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನೇಮಕ ಮಾಡುವಂತೆ ಜಿಲ್ಲೆಯಿಂದ ಪಟ್ಟಿ ರವಾನೆಯಾಗಿದೆ. ಸ್ಥಳೀಯ ಸಂಸ್ಥೆಗಳಿಂದ ನಗರಸಭೆ, ಪುರಸಭೆ, ಎಪಿಎಂಸಿಗಳಿಗೆ ನಾಮನಿರ್ದೇಶನ ಬಾಕಿ ಉಳಿದಿದ್ದು, ಅದರಲ್ಲಾದರೂ ನಮ್ಮನ್ನು ಪರಿಗಣಿಸಬೇಕು. ಅಲ್ಲದೆ, ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಿಂದ ಸುಮಾರು 200ಕ್ಕೂ ಹೆಚ್ಚು ಮಂದಿ ಬಿಜೆಪಿ ಮುಖಂಡರ ಪಟ್ಟಿ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಭುಗಿಲೇಳುವ ಅಸಮಾಧಾನ: ಮೂಡಾ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರನ್ನುನೇಮಕ ಮಾಡಿದಾಗಲೂ ವಿರೋಧ ವ್ಯಕ್ತವಾಗಿತ್ತು. ಮನ್ಮುಲ್ಗೆ ನಾಮನಿರ್ದೇಶಕರಾಗಿ ಕೆ.ಜಿ. ತಮ್ಮಣ್ಣ ಅವರನ್ನು ಆಯ್ಕೆ ಮಾಡಿದಾಗ ಅಸಮಾಧಾನ ಉಂಟಾಗಿತ್ತು. ಡಿಸಿಸಿ ಬ್ಯಾಂಕ್ ನಾಮನಿರ್ದೇಶಕರಾದ ಸಿ.ಪಿ.ಉಮೇಶ್,ಕಾಡಾ ಅಧ್ಯಕ್ಷ ಶಿವಲಿಂಗಯ್ಯಹಾಗೂ ಮೈಷುಗರ್ ಅಧ್ಯಕ್ಷರಾಗಿರುವ ಜೆ.ಶಿವಲಿಂಗೇಗೌಡ ಅವರ ನೇಮಕಕ್ಕೂ ವಿರೋಧ ವ್ಯಕ್ತವಾಗಿದ್ದು, ಬಹಿರಂಗವಾಗದಿದ್ದರೂಆಕಾಂಕ್ಷಿಗಳು, ಮುಖಂಡರು, ಕಾರ್ಯಕರ್ತರಲ್ಲಿ ಭಿನ್ನಮತ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲೇ ಇದೆ. ಅಲ್ಲದೆ, ಬಿಜೆಪಿ ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಕೇಳಿ ಬರುತ್ತಿದೆ.
ಪಕ್ಷ ಸಂಘಟನೆಗೆ ಹೊಡೆತ: ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತರಾಗಿ ದುಡಿದಿರುವ ಕಾರ್ಯಕರ್ತರು ಅನೇಕರಿದ್ದಾರೆ.ಅವರನ್ನೆಲ್ಲಬಿಟ್ಟುಬೇರೆ ಕಡೆಯಿಂದಬರುವವರೆಗೆ ಹೆಚ್ಚು ಮಹತ್ವ ನೀಡುತ್ತಿರುವುದರಿಂದ ಮೂಲ ಕಾರ್ಯಕರ್ತರು ಪಕ್ಷ ಸಂಘಟನೆಯತ್ತ ಮುಖ ಮಾಡುತ್ತಿಲ್ಲ. ಅಲ್ಲದೆ, ಕಾರ್ಯಕರ್ತರಲ್ಲಿಯೇ ವೈಯಕ್ತಿಕ ಭಿನ್ನಮತ, ಅಸಮಾಧಾನಗಳು ಹೆಚ್ಚಾಗಿದೆ. ಇದರಿಂದ ಪಕ್ಷ ಸಂಘಟನೆಗೆ ಹೊಡೆತ ಬೀಳುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದರು.
ಪ್ರಮುಖ ಆಕಾಂಕ್ಷಿಗಳು: ರಾಜ್ಯದ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶನಗಳಿಗೆ ಪರಿಗಣಿಸುವಂತೆ ಪ್ರಮುಖ ಮುಖಂಡರು ಮನವಿ ಮಾಡಿದ್ದಾರೆ. ಅದ ರಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯಡಾ.ಸಿದ್ದರಾಮಯ್ಯ, ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಮಾಜಿ ಅಧ್ಯಕ್ಷರಾದ ಎಚ್ .ಪಿ.ಮಹೇಶ್, ಕೆ.ನಾಗಣ್ಣಗೌಡ, ನಗರ ಘಟಕ ಮಾಜಿ ಅಧ್ಯಕ್ಷಎಚ್.ಆರ್.ಅರವಿಂದ್,ಎಚ್.ಆರ್.ಅಶೋಕ್ ಕುಮಾರ್, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಟಿ. ಶ್ರೀಧರ್ ಸೇರಿದಂತೆಮತ್ತಿತರರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿಯ ಪಟ್ಟಿ ರವಾನಿಸಲಾಗಿದೆ.
ಜಿಲ್ಲೆಯಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಸುಮಾರು 200ಕ್ಕೂ ಹೆಚ್ಚು ಮುಖಂಡರ ಪಟ್ಟಿ ಸಿದ್ಧಪಡಿಸಿ, ವರಿಷ್ಠರಿಗೆ ಕಳುಹಿಸಲಾಗಿದೆ.ಯಾರಿಗೆ ನೀಡಿದರೂ ನಮ್ಮ ವಿರೋಧವಿಲ್ಲ.ಯಾರೇ ಅಧ್ಯಕ್ಷರು, ಉಪಾಧ್ಯಕ್ಷರು, ನಾಮನಿರ್ದೇಶನಗೊಂಡರೂ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. – ಕೆ.ಜೆ.ವಿಜಯ ಕುಮಾರ್, ಜಿಲ್ಲಾಧ್ಯಕ್ಷ, ಬಿಜೆಪಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ