ನಿಗಮ,ನಾಮ ನಿರ್ದೇಶನಕ್ಕೆ ಆಕಾಂಕ್ಷಿಗಳ ದಂಡು

200ಕ್ಕೂಹೆಚ್ಚುಮಂದಿ ಮುಖಂಡರ ಪಟ್ಟಿ ರವಾನೆ

Team Udayavani, Nov 29, 2020, 4:23 PM IST

ನಿಗಮ,ನಾಮ ನಿರ್ದೇಶನಕ್ಕೆ ಆಕಾಂಕ್ಷಿಗಳ ದಂಡು

ಮಂಡ್ಯ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಸರ್ಕಾರದ ನಾಮನಿರ್ದೇಶನಗಳಿಗೆ ಲಾಬಿ ನಡೆಯುತ್ತಿದ್ದು, ಅದರಂತೆ ಮಂಡ್ಯ ಜಿಲ್ಲೆಯಲ್ಲೂ ಆಕಾಂಕ್ಷಿತರ ದಂಡು ಹೆಚ್ಚಾಗಿದೆ.

ಈಗಾಗಲೇ ಕಾಡಾ, ಮೂಡಾಗಳಿಗೆ ಅಧ್ಯಕ್ಷರ ನೇಮಕ ನಡೆದಿದೆ. ಮನ್‌ ಮುಲ್‌, ಡಿಸಿಸಿ ಬ್ಯಾಂಕ್‌ ಸೇರಿದಂತೆ ವಿವಿಧ ಸಹಕಾರ ಸಂಘಗಳಿಗೆ ಸರ್ಕಾರದಿಂದ ನಾಮ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಇದೀಗ ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನೇಮಕ ಮಾಡುವಂತೆ ಜಿಲ್ಲೆಯಿಂದ ಪಟ್ಟಿ ರವಾನೆಯಾಗಿದೆ. ಸ್ಥಳೀಯ ಸಂಸ್ಥೆಗಳಿಂದ ನಗರಸಭೆ, ಪುರಸಭೆ, ಎಪಿಎಂಸಿಗಳಿಗೆ ನಾಮನಿರ್ದೇಶನ ಬಾಕಿ ಉಳಿದಿದ್ದು, ಅದರಲ್ಲಾದರೂ ನಮ್ಮನ್ನು ಪರಿಗಣಿಸಬೇಕು. ಅಲ್ಲದೆ, ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಿಂದ ಸುಮಾರು 200ಕ್ಕೂ ಹೆಚ್ಚು ಮಂದಿ ಬಿಜೆಪಿ ಮುಖಂಡರ ಪಟ್ಟಿ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಭುಗಿಲೇಳುವ ಅಸಮಾಧಾನ: ಮೂಡಾ ಅಧ್ಯಕ್ಷರಾದ ಕೆ.ಶ್ರೀನಿವಾಸ್‌ ಅವರನ್ನುನೇಮಕ ಮಾಡಿದಾಗಲೂ ವಿರೋಧ ವ್ಯಕ್ತವಾಗಿತ್ತು. ಮನ್‌ಮುಲ್‌ಗೆ ನಾಮನಿರ್ದೇಶಕರಾಗಿ ಕೆ.ಜಿ. ತಮ್ಮಣ್ಣ ಅವರನ್ನು ಆಯ್ಕೆ ಮಾಡಿದಾಗ ಅಸಮಾಧಾನ ಉಂಟಾಗಿತ್ತು. ಡಿಸಿಸಿ ಬ್ಯಾಂಕ್‌ ನಾಮನಿರ್ದೇಶಕರಾದ ಸಿ.ಪಿ.ಉಮೇಶ್‌,ಕಾಡಾ ಅಧ್ಯಕ್ಷ ಶಿವಲಿಂಗಯ್ಯಹಾಗೂ ಮೈಷುಗರ್‌ ಅಧ್ಯಕ್ಷರಾಗಿರುವ ಜೆ.ಶಿವಲಿಂಗೇಗೌಡ ಅವರ ನೇಮಕಕ್ಕೂ ವಿರೋಧ ವ್ಯಕ್ತವಾಗಿದ್ದು, ಬಹಿರಂಗವಾಗದಿದ್ದರೂಆಕಾಂಕ್ಷಿಗಳು, ಮುಖಂಡರು, ಕಾರ್ಯಕರ್ತರಲ್ಲಿ ಭಿನ್ನಮತ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲೇ ಇದೆ. ಅಲ್ಲದೆ, ಬಿಜೆಪಿ ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಕೇಳಿ ಬರುತ್ತಿದೆ.

ಪಕ್ಷ ಸಂಘಟನೆಗೆ ಹೊಡೆತ: ಬಿಜೆಪಿ ಪಕ್ಷದಲ್ಲಿ ‌ನಿಷ್ಠಾವಂತರಾಗಿ ದುಡಿದಿರುವ ಕಾರ್ಯಕರ್ತರು ಅನೇಕರಿದ್ದಾರೆ.ಅವರನ್ನೆಲ್ಲಬಿಟ್ಟುಬೇರೆ ಕಡೆಯಿಂದಬರುವವರೆಗೆ ಹೆಚ್ಚು ಮಹತ್ವ ನೀಡುತ್ತಿರುವುದರಿಂದ ಮೂಲ ಕಾರ್ಯಕರ್ತರು ಪಕ್ಷ ಸಂಘಟನೆಯತ್ತ ಮುಖ ಮಾಡುತ್ತಿಲ್ಲ. ಅಲ್ಲದೆ, ಕಾರ್ಯಕರ್ತರಲ್ಲಿಯೇ ವೈಯಕ್ತಿಕ ಭಿನ್ನಮತ, ಅಸಮಾಧಾನಗಳು ಹೆಚ್ಚಾಗಿದೆ. ಇದರಿಂದ ಪಕ್ಷ ಸಂಘಟನೆಗೆ ಹೊಡೆತ ಬೀಳುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದರು.

ಪ್ರಮುಖ ಆಕಾಂಕ್ಷಿಗಳು: ರಾಜ್ಯದ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶನಗಳಿಗೆ ಪರಿಗಣಿಸುವಂತೆ ಪ್ರಮುಖ ಮುಖಂಡರು ಮನವಿ ಮಾಡಿದ್ದಾರೆ. ಅದ ರಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯಡಾ.ಸಿದ್ದರಾಮಯ್ಯ, ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಕೆ.ಎಸ್‌.ನಂಜುಂಡೇಗೌಡ, ಮಾಜಿ ಅಧ್ಯಕ್ಷರಾದ ಎಚ್‌ .ಪಿ.ಮಹೇಶ್‌, ಕೆ.ನಾಗಣ್ಣಗೌಡ, ನಗರ ಘಟಕ ಮಾಜಿ ಅಧ್ಯಕ್ಷಎಚ್‌.ಆರ್‌.ಅರವಿಂದ್‌,ಎಚ್‌.ಆರ್‌.ಅಶೋಕ್‌ ಕುಮಾರ್‌, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಟಿ. ಶ್ರೀಧರ್‌ ಸೇರಿದಂತೆಮತ್ತಿತರರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿಯ ಪಟ್ಟಿ ರವಾನಿಸಲಾಗಿದೆ.

ಜಿಲ್ಲೆಯಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಸುಮಾರು 200ಕ್ಕೂ ಹೆಚ್ಚು ಮುಖಂಡರ ಪಟ್ಟಿ ಸಿದ್ಧಪಡಿಸಿ, ವರಿಷ್ಠರಿಗೆ ಕಳುಹಿಸಲಾಗಿದೆ.ಯಾರಿಗೆ ನೀಡಿದರೂ ನಮ್ಮ ವಿರೋಧವಿಲ್ಲ.ಯಾರೇ ಅಧ್ಯಕ್ಷರು, ಉಪಾಧ್ಯಕ್ಷರು, ನಾಮನಿರ್ದೇಶನಗೊಂಡರೂ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಕೆ.ಜೆ.ವಿಜಯ ಕುಮಾರ್‌, ಜಿಲ್ಲಾಧ್ಯಕ್ಷ, ಬಿಜೆಪಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.