ಬೆಲೆ ಏರಿಕೆಗೆ ಬಿಜೆಪಿ ಕಾರಣವಲ್ಲ: ಡಾ.ಅಶ್ವತ್ಥನಾರಾಯಣ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯೇಕಾರಣ ; ಸದ್ಯದಲ್ಲೇ ಬೆಲೆಕಡಿಮೆ ಆಗಲಿದೆ: ಉನ್ನತ ಶಿಕ್ಷಣ ಸಚಿವ
Team Udayavani, Sep 7, 2021, 4:53 PM IST
ಮಂಡ್ಯ: ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಬೆಲೆ ಹೆಚ್ಚಳಕ್ಕೆ ಬಿಜೆಪಿ ಕಾರಣವಲ್ಲ. ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯೇ ಕಾರಣವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿಬಿಟಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು.
ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಲು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕ
ರಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲೇ ಬೆಲೆಗಳು ಏರಿಕೆಯಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್ ಬೆಲೆ ಏರಿಕೆಯಾಗಿದೆ. ಸದ್ಯದಲ್ಲೇ ಅದರ ಬೆಲೆ ಕಡಿಮೆ ಆಗಲಿದೆ. ಜನಸಾಮಾನ್ಯರ ಹಿತಕಾಯಲು ಬೆಲೆ ಕಡಿಮೆ ಮಾಡುವ ಪ್ರಯತ್ನ ಆಗಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಆಡಳಿತ ಉತ್ತಮವಾಗಿರುವುದರಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರದ ಸಾಧನೆಗೆ ಸಾಕ್ಷಿಯಾಗಿದೆ. ಬಿಜೆಪಿ ಮೇಲೆ ಜನರ ಆಶೀರ್ವಾದ ಸದಾ ಇರಲಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲಿ ನಮ್ಮ ಪಕ್ಷ ಉತ್ತಮವಾದ ಆಡಳಿತ ನೀಡಿದೆ. ಬೆಳಗಾವಿ ನಗರ ಬಹಳಷ್ಟು ಅಭಿ ವೃದ್ಧಿಯಾಗಿದ್ದು, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಎಂದು ತಿಳಿಸಿದರು.
ಇದನ್ನೂ ಓದಿ:ಐಮೊಬೈಲ್ ಪೇ ಆ್ಯಪ್ ಮೂಲಕ ಯಾವುದೇ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಬಾಕಿ ತಕ್ಷಣ ಪಾವತಿಸಿ
ಸಿಎಂ ನೇತೃತ್ವದಲ್ಲೇ ಚುನಾವಣೆ: ಮುಂದಿನ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ
ಎದುರಿಸಲಾ ಗುವುದು. ಮುಂದಿನ ದಿನಗಳಲ್ಲಿ ಮಂಡ್ಯ ಭಾಗದಲ್ಲಿ ಮುಖ್ಯಮಂತ್ರಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.
ಎನ್ಇಪಿಯಿಂದ ಶಿಕ್ಷಣ ಅಭಿವೃದ್ಧಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಯೊಬ್ಬರ ಬದುಕು ಹಸನಾಗಲಿದೆ. ಆದ್ದರಿಂದ ಕರ್ನಾಟಕದಲ್ಲೇ ಮೊದಲ
ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ. ಇದರಲ್ಲಿ ಏನು ತಪ್ಪು ಇದೆ ಅಂತ ವಿರೋಧ ಪಕ್ಷದವರು ಹೇಳುತ್ತಿಲ್ಲ ಎಂದು ಹೇಳಿದರು.
ಹಂತ ಹಂತವಾಗಿ ಜಾರಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡಲಿದ್ದೇವೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ಜಾರಿ ಮಾಡಿ ದ್ದು ಕರ್ನಾಟಕವಾಗಿದೆ. ಅಭಿವೃದ್ದಿಗೆ ಹೊಸ ಐತಿಹ್ಯ ಬರೆಯಲಿದೆ ಎಂದು ಎಂದರು.
ಗಣೇಶ ಉತ್ಸವ ನಿಯಮ ಸಡಿಲ:ಗಣೇಶೋತ್ಸವಕ್ಕೆ ಕೋವಿಡ್-19ರ ಮಾರ್ಗಸೂಚಿಯ ನಡುವೆಯೂ ನಿಯಮಗಳನ್ನು ಸಡಿಲಗೊಳಿಸಿದ್ದೇವೆ. ಈಗ 5 ದಿನ ಹಬ್ಬ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ. ಜನರಪರ ವಾಗಿ ಮಾಡಿದ್ದೇವೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ, ಬಿಜೆಪಿ ನಗರಾಧ್ಯಕ್ಷ ವಿವೇಕ್, ಮಾಜಿ ಅಧ್ಯಕ್ಷ ಎಚ್.ಆರ್. ಅರವಿಂದ್, ಡಾ.ಸಿದ್ದರಾಮಯ್ಯ, ಯುವ ಮುಖಂಡಕೇಶವ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ