ಡಾ.ಶಂಕರೇಗೌಡರಿಗೆ ಬಿಜೆಪಿ ಗಾಳ
Team Udayavani, Feb 3, 2018, 10:25 AM IST
ಮಂಡ್ಯ: ಮುಂದಿನ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ನ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಡಾ.ಎಚ್.ಸಿ. ಶಂಕರೇಗೌಡರಿಗೆ ಬಿಜೆಪಿ ಗಾಳ ಹಾಕಿದೆ. ಶುಕ್ರವಾರ ಬೆಳಗ್ಗೆಯೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರು
“ಐದು ರೂ. ಡಾಕ್ಟರ್’ ಎಂದೇ ಖ್ಯಾತರಾದ ಶಂಕರೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರಲ್ಲದೆ, ಪಕ್ಷ ಸೇರುವಂತೆ ಮುಕ್ತ ಆಹ್ವಾನ ನೀಡಿದರು.
ಆದರೆ, ಬಿಜೆಪಿ ಸೇರುವ ಬಗ್ಗೆ ಡಾ.ಶಂಕರೇಗೌಡರು ಯಾವುದೇ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಬಿಜೆಪಿ ಸೇರುವ ಮನಸ್ಸು ಮಾಡಿದರೆ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಮಂಡ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ದೊರಕಿಸಿಕೊಡುವ ಭರವಸೆಯನ್ನೂ ಯೋಗೇಶ್ವರ್ ನೀಡಿದ್ದಾರೆ ಎಂದೂ ತಿಳಿದು ಬಂದಿದೆ. ಯೋಗೇಶ್ವರ್ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಡಾ.ಶಂಕರೇಗೌಡ, ಈ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಡವಿದೆ. ಅಭಿಮಾನಿಗಳು, ಬೆಂಬಲಿಗರು ನನಗೆ ಬೆಂಬಲವಾಗಿ ನಿಂತಿದ್ದಾರೆ. ನನ್ನ ಮಾತೃಪಕ್ಷ ಜೆಡಿಎಸ್. ಅಲ್ಲೇ ರಾಜಕೀಯ ಬೆಳವಣಿಗೆ ಕಂಡುಕೊಂಡಿದ್ದೇನೆ. ಪಕ್ಷ ತೊರೆಯುವ ಬಗ್ಗೆ ಇನ್ನೂ ಚಿಂತನೆ ಮಾಡಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ