ರಕ್ತ ಸಂಗ್ರಹ: ಮಂಡ್ಯ ರಾಜ್ಯಕ್ಕೇ ನಂ.1
ಸ್ಥಳೀಯವಾಗಿ ಬಳಸಿಕೊಂಡು ಹೊರ ಜಿಲ್ಲೆಗಳಿಗೂ ರಕ್ತ ರವಾನೆ
Team Udayavani, Jul 3, 2019, 11:29 AM IST
ಮಂಡ್ಯದ ಗಾಂಧಿ ಭವನದಲ್ಲಿ ಕನ್ನಡ ಸೇನೆ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಹಲವಾರು ಮಂದಿ ರಕ್ತದಾನ ಮಾಡಿದರು.
ಮಂಡ್ಯ: ಪ್ರಸ್ತುತ ದಿನಗಳಲ್ಲಿ ಬೇಡಿಕೆ ಪ್ರಮಾಣದಷ್ಟು ರಕ್ತ ಸಿಗುತ್ತಿಲ್ಲ. ಆದರೂ ರಕ್ತ ಸಂಗ್ರಹದಲ್ಲಿ ಮಂಡ್ಯ ಜಿಲ್ಲೆ ಇಡೀ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಅಧೀಕ್ಷಕ ಡಾ.ಹರೀಶ್ ಹೇಳಿದರು.
ಕನ್ನಡ ಸೇನೆ ಕರ್ನಾಟಕ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ನೇತ್ರದಾನ ನೋಂದಣಿ ಹಾಗೂ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವಷ್ಟು ರಕ್ತದಾನ ಶಿಬಿರಗಳು ರಾಜ್ಯದ ಯಾವ ಜಿಲ್ಲೆಗಳಲ್ಲೂ ನಡೆಯುವುದಿಲ್ಲ. ಇದರಿಂದ ರಾಜ್ಯದಲ್ಲೇ ಅತಿ ಹೆಚ್ಚು ರಕ್ತ ಮಂಡ್ಯ ಜಿಲ್ಲೆಯಲ್ಲಿ ಸಂಗ್ರಹವಾಗುತ್ತಿದೆ. ಇಲ್ಲಿ ಸಂಗ್ರಹವಾಗುವ ರಕ್ತವನ್ನು ನಮ್ಮಲ್ಲಿ ಉಪಯೋಗಿಸಿಕೊಂಡು ಬೇರೆ ಜಿಲ್ಲೆಗೂ ನೀಡುತ್ತಿದ್ದೇವೆ ಎಂದು ವಿವರಿಸಿದರು.
ನಮ್ಮಲ್ಲಿ ಎರಡು ಸಾವಿರದಿಂದ ಮೂರು ಸಾವಿರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಷ್ಟು ಮಂದಿಗೆ ಹೆಚ್ಚಿನ ಪ್ರಮಾಣದ ರಕ್ತದ ಅಗತ್ಯತೆ ಇದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ರಕ್ತವನ್ನು ಪೂರೈಕೆ ಮಾಡುವುದು ಕಷ್ಟದ ಕೆಲಸವೇ ಸರಿ. ಆದರೂ ಮಿಮ್ಸ್ ರಕ್ತಕ್ಕೆ ಕೊರತೆಯಾಗದಂತೆ ಸಮರ್ಥವಾಗಿ ನಿಭಾಯಿಸುತ್ತಿರುವುದಕ್ಕೆ ಇಲ್ಲಿನ ಸಂಘ-ಸಂಸ್ಥೆಗಳ ಸಹಕಾರವೇ ಕಾರಣ ಎಂದು ಹೇಳಿದರು.
ಶಿಬಿರಗಳಿಂದಾಗಿ ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲ ವಾಗುತ್ತದೆ. ಇದ ರೊಂದಿಗೆ ಕನ್ನಡ ಸೇನೆ ನೇತ್ರದಾನ ನೋಂದಣಿ ಅಭಿಯಾನ ಅರಂಭಿಸಿರುವು ದರಿಂದ ಹಲವು ಮಂದಿ ಅಂಧರಿಗೂ ಕಣ್ಣುಗಳನ್ನು ನೀಡುವಂತಹ ಕ್ರಮ ಶ್ಲಾಘನೀಯ ಎಂದು ಹೇಳಿದರು.
ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್ ಮಾತನಾಡಿ, ರಕ್ತಕ್ಕಾಗಿ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಇದನ್ನು ಕಂಡು ನಮ್ಮ ಸಂಘಟನೆ ವತಿಯಿಂದ ರಕ್ತದಾನ ಶಿಬಿರ ನಡೆಸಿ ರಕ್ತ ಸಂಗ್ರಹಿಸಲು ಶ್ರಮಿಸುತ್ತಿದ್ದೇವೆ ಎಂದು ವಿವರಿಸಿದರು.
ಸಮಾರಂಭದಲ್ಲಿ ಮಾಜಿ ಸಂಸದ ಜಿ. ಮಾದೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಸಲಹಾ ಸಮಿತಿ ಸದಸ್ಯ ಚಂದನ್ಗೌಡ, ನಗರಸಭಾ ಸದಸ್ಯರಾದ ಸೌಭಾಗ್ಯ ಶಿವಲಿಂಗು, ಪವಿತ್ರಾ ಮೊದಲಾದವರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ