ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು
Team Udayavani, Jan 18, 2021, 2:28 PM IST
ಮಳವಳ್ಳಿ: ಪಟ್ಟಣದ ಉಗ್ರಾಣಪುರದೊಡ್ಡಿ ಬಳಿ ಹಾವು ಕಚ್ಚಿ ಬಾಲಕ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಕಂದೇಗಾಲ ಗ್ರಾಮದ ನಿವಾಸಿ ಹಾಗೂ ಕಿರುಗಾವಲು ಪಿಎಸಿಎಸ್ ನ ಸಿಇಒ ಶಿವಲಿಂಗು ಪುತ್ರ ಭುವನ್ (9) ಮೃತ ಬಾಲಕ.
ಭಾನುವಾರ ರಾತ್ರಿ ಉಗ್ರಾಣಪುರದೊಡ್ಡಿ ಮನೆಯ ಮುಂದೆ ಮೂತ್ರ ವಿಸರ್ಜನೆಗೆ ಬಂದ ವೇಳೆ ವಿಷಕಾರಿ ಹಾವು ಕಚ್ಚಿದೆ. ತಕ್ಷಣವೇ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ನಮ್ಮ ಬಳಿ ಔಷಧಿ ಇಲ್ಲ ಎಂದಿದ್ದಾರೆ. ನಂತರ ನಾಟಿ ಔಷಧಿ ಕೊಡಿಸಲಾಗಿತ್ತು.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿರುವ ಸಾಂಗ್ಲಿ, ಸೊಲ್ಲಾಪುರವನ್ನು ರಾಜ್ಯಕ್ಕೆ ಸೇರಿಸುತ್ತೇವೆ: ಬೊಮ್ಮಾಯಿ
ನಂತರ ಬಾಲಕನ್ನು ಮನೆಗೆ ವಾಪಸ್ ಕರೆದುಕೊಂಡು ಬಂದಿದ್ದಾರೆ. ಸೋಮವಾರ ಬೆಳಗ್ಗೆ ಬಾಲಕನ ಬಾಯಿಯಲ್ಲಿ ನೊರೆ ಬಂದಿದ್ದು, ಕೂಡಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ