ಬೇಬಿ ಬೆಟ್ಟದಲ್ಲಿ ಅಕ್ರಮ ಕ್ರಷರ್‌ಗಳಿಗೆ ಬೀಗ

ಭಾರೀ ಶಬ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ • ಕೆಆರ್‌ಎಸ್‌ ಅಣೆಕಟ್ಟೆಗೆ ತೊಂದರೆ ಹಿನ್ನೆಲೆ

Team Udayavani, Aug 18, 2019, 4:12 PM IST

mandya-tdy-1

ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗಳ ಮೇಲೆ ತಹಶೀ ಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಮುದ್ರೆ ಜಡಿದಿದೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮುತ್ತಪ್ಪ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಉಪ ನಿರ್ದೇಶಕಿ ಸವಿತಾ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ದಿಢೀರ್‌ ದಾಳಿ ನಡೆಸಿ ಕ್ರಷರ್‌ಗಳಿಗೆ ಬೀಗ ಜಡಿದು ಸ್ಥಗಿತಗೊಳಿಸಿದರು.

35ಕ್ಕೂ ಹೆಚ್ಚು ಕ್ರಷರ್‌ಗೆ ಬೀಗ: ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಕುಟುಂಬಕ್ಕೆ ಸೇರಿದ ಎಸ್‌ಟಿಜಿ ಸ್ಟೋನ್‌ ಕ್ರಷರ್‌, ಬಾಲಾಜಿ ಸ್ಟೋನ್‌ ಕ್ರಷರ್‌, ರಾಮಾಂಜನೇಯ ಜಲ್ಲಿ ಕ್ರಷರ್‌, ಕೃಷ್ಣ ಸ್ಟೋನ್‌ ಕ್ರಷರ್‌, ಎಸ್‌ವಿಟಿ, ಜ್ಯೋತಿ ಸ್ಟೋನ್‌ ಕ್ರಷರ್‌ ಸೇರಿದಂತೆ 35ಕ್ಕೂ ಹೆಚ್ಚು ಸ್ಟೋನ್‌ ಕ್ರಷರ್‌ಗಳಿಗೆ ಬೀಗ ಮುದ್ರೆ ಜಡಿದಿದ್ದಾರೆ.

ಜಿಲ್ಲಾಧಿಕಾರಿ ಆದೇಶ:ಬೇಬಿಬೆಟ್ಟದ ಕಾವಲ್ನಲ್ಲಿ ನಡೆಸಲಾಗುತ್ತಿದ್ದ ಸ್ಟೋನ್‌ ಕ್ರಷರ್‌ಗಳನ್ನು ಟಾಸ್ಕ್ ಪೋರ್ಸ್‌ ಸಮಿತಿ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ವೆಂಕೆಟೇಶ್‌ ಆದೇಶಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಸ್ಟೋನ್‌ ಕ್ರಷರ್‌ಗಳಿಗೆ ಬೀಗ ಮುದ್ರೆ ಜಡಿದು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಹಶೀಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ತಿಳಿಸಿದರು.

ಬೇಬಿಬೆಟ್ಟದಲ್ಲಿ 10ಕ್ಕೂ ಹೆಚ್ಚು ಕಲ್ಲುಕ್ವಾರಿಗಳು ನಡೆಯುತ್ತಿವೆ. ಸಿ ಮಾನ್ಯತೆ ಪಡೆದಿರುವ 18 ಸ್ಟೋನ್‌ ಕ್ರಷರ್‌ ಹಾಗೂ ಬಿ-1 ಮಾನ್ಯತೆ ಪಡೆದಿರುವ 17 ಸ್ಟೋನ್‌ ಕ್ರಷರ್‌ಗಳು ನಡೆಯುತ್ತಿವೆ. ಇವೆಲ್ಲವನ್ನೂ ಸ್ಥಗಿತಗೊಳಿಸಲಾಗುತ್ತಿದೆ. ಇದಲ್ಲದೆ ಅಕ್ರಮ ಗಣಿಗಾರಿಕೆ, ಸ್ಟೋನ್‌ ಕ್ರಷರ್‌ಗಳ ಮೇಲೂ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಅಧಿಕಾರಿ ಮುತ್ತಪ್ಪ ತಿಳಿಸಿದರು.

ಈ ವೇಳೆ ಉಪ ತಹಶೀಲ್ದಾರ್‌ ಸುಧಾಕರ್‌, ಕಂದಾಯ ಪರಿವೀಕ್ಷಕ ಗಣೇಶ್‌, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ವಿಜ್ಞಾನಿ ಡಾ.ನಟಶೇಖರ್‌, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಪಲ್ಲವಿ, ಎಎಸ್‌ಐ ಬಿ.ಜೆ. ರವಿ ಇದ್ದರು.

ಭಾರೀ ಶಬ್ದದ ಬಗ್ಗೆ ಅಧಿಕಾರಿಗಳೇ ಉತ್ತರಿಸಲಿ

ಕೆಆರ್‌ಎಸ್‌ ಮೈಸೂರು-ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ಇಂತಹ ಸ್ಥಳದಲ್ಲಿ ಕಾನೂನು ಬಾಹಿರ ಗಣಿಗಾರಿಕೆ ನ್ಪೋಟದಿಂದ ಈ ಶಬ್ಧ ಕೇಳಿಬಂದಿದೆಯೋ ಅಥವಾ ಅದರ ಹಿಂದೆ ಬೇರೆ ಏನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಸಿ ಸತ್ಯ ಹೊರತರಬೇಕಾದ ಜವಾಬ್ದಾರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೇರಿದೆ ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು. ಮದ್ದೂರಿನಲ್ಲಿ ಮಾತನಾಡಿ, ಬೇಬಿ ಬೆಟ್ಟ ಮತ್ತು ಆಸುಪಾಸಿನ ಸ್ಥಳಗಳಲ್ಲಿ ಮೈಸೂರು ಮಹಾಸಂಸ್ಥಾನಕ್ಕೆ ಸೇರಿದ ಭೂಮಿಗಳ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ದಾಖಲೆ ನೀಡಿಲ್ಲ. ಈ ದಾಖಲೆ ಪಡೆಯುವ ಹಕ್ಕಿರುವುದು ತಮ್ಮ ತಾಯಿ ಪ್ರಮೋದಾ ದೇವಿಗೆ ಮಾತ್ರ. ಆನಂತರ ಅದು ನಮಗೆ ಸೇರುತ್ತದೆ. ಈ ಬಗ್ಗೆ ತಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಸರ್ಕಾರಕ್ಕೆ ಬಿಟ್ಟದ್ದು ದಸರಾ ಹಬ್ಬದ ಆಚರಣೆಯನ್ನು ಅದ್ದೂರಿ ಅಥವಾ ಸರಳವಾಗಿ ಆಚರಿಸಬೇಕು ಎನ್ನುವುದು ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ ಎಂದಷ್ಟೇ ಸೂಕ್ಷ್ಮವಾಗಿ ತಿಳಿಸಿದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.