ಕೆಆರ್ಎಸ್ನಲ್ಲಿ ಬೋನಿಗೆ ಬಿದ್ದ ಚಿರತೆ
Team Udayavani, Feb 12, 2021, 5:19 PM IST
ಶ್ರೀರಂಗಪಟ್ಟಣ: ತಾಲೂಕಿನ ಕೆಆರ್ಎಸ್ ಸಮೀಪ ಬೃಂದಾವನದ ಆಸುಪಾಸಿನಲ್ಲಿ ಸಂಚಾರ ಮಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಚಿರತೆ ಸೆರೆಗೆ ಬಲೆ ಬೀಸಿ ನಾಲೆ ಏರಿ ಮೇಲೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕೆಆರ್ಎಸ್ನ ದಕ್ಷಿಣ ಗೇಟ್ ಬಳಿ ಮೊತ್ತೂಂದು ಚಿರತೆ ಇರುವ ಶಂಕೆ ವ್ಯಕ್ತವಾಗಿದ್ದು, ಅಲ್ಲಿಯೂ ಚಿರತೆ ಸೆರೆಗೆ ಬೋನು ಇಡಲಾಗಿದೆ. ಈಗ ಹಿಡಿದಿರುವ ಚಿರತೆ ಯನ್ನು ವೈಲ್ಡ ಲೈಫ್ ಅರಣ್ಯಕ್ಕೆ ಬಿಡಲಾಗುವುದು ಎಂದು ಆರ್ಎಫ್ಒ ಪ್ರಮೀಳಾ ತಿಳಿಸಿದ್ದಾರೆ.
ಕಳೆದ ವಾರದ ಹಿಂದೆ ಕೆಆರ್ಎಸ್ ಬೃಂದಾವನದ ದಕ್ಷಿಣ ಗೇಟ್ ಬಳಿಯಲ್ಲಿ ರಾತ್ರಿ ಹೊತ್ತಿನಲ್ಲಿ ಬೃಂದಾವನದಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿ ಟಿವಿಯಲ್ಲಿ ಕಾಣಿಸಿಕೊಂಡು ಕೆಆರ್ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರು ಹಾಗೂ ಕೆಆರ್ಎಸ್ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ಹಾಗೂ ಗ್ರಾಪಂ ಸದಸ್ಯರು ಮುನ್ನೆಚ್ಚರಿಕೆ ತೆಗೆದುಕೊಂಡು ಸಾರ್ವಜನಿಕರಲ್ಲಿ ಮಾಹಿತಿ ನೀಡಿ ಎಚ್ಚರಿಸಿದರು.
ಈ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಕೆಆರ್ಎಸ್ ಬೃಂದಾವನ ಅಂಗಳದಲ್ಲಿ ಚಿರತೆ ಪ್ರತ್ಯಕ್ಷ ಎಂದು ವರದಿ ಪ್ರಕಟವಾಗಿತ್ತು. ಈ ಬಗ್ಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೃಂದಾವನದ ದಕ್ಷಿಣ ಗೇಟ್ ಬಳಿಯಲ್ಲಿ ಬೋನು ಇಟ್ಟು ನಾಯಿಕಟ್ಟಿ ಚಿರತೆ ಸೆರೆಗಾಗಿ ಕಾಯುತ್ತಿದ್ದರು. ಇದೀಗ ಒಂದು ಚಿರತೆ ಸೆರೆಯಾಗಿದೆ. ಮತ್ತೂಂದು ಚಿರತೆ ಇರುವ ಶಂಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದು, ಚಿರತೆ ಹಿಡಿಯಲು ಬೋನ್ ಇಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪ್ರಮೀಳಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್