ಚಿಕ್ಕಮುತ್ತತ್ತಿ ದೇಗುಲದಲ್ಲಿ ಕಳ್ಳತನ: ಐವರು ಬಂಧನ
Team Udayavani, Jun 3, 2022, 11:16 AM IST
ಬೆಳಕವಾಡಿ: ತಾಲೂಕಿನ ಚಿಕ್ಕಮು ತ್ತತ್ತಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಬೆಳಕವಾಡಿ ಪೊಲೀಸರು ಯಶ್ವಸಿಯಾಗಿದ್ದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಕ್ಕಿಪಿಕ್ಕಿ ಅಲೆಮಾರಿ ಜನಾಂಗದ ರಾಜೇಶ್, ಉಮೇಶ್, ಕಬ್ಟಾಳು, ಆನಂದ್, ಶಬ್ಬೀರ್ ಬಂಧಿತ ಆರೋಪಿಗಳು. 2021ರ ಸೆ.16ರಂದು ದೇವಸ್ಥಾನದ ಬಾಗಿಲು ಮುರಿದ ದುಷ್ಕರ್ಮಿ ಗಳು ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ ದೇವರ ಕವಚ ಸೇರಿ ಸುಮಾರು 60 ಸಾವಿರ ರೂ. ಮೌಲ್ಯದ ಪೂಜಾ ಸಾಮಗ್ರಿ ಕದ್ದು ಪರಾರಿಯಾಗಿದ್ದರು.
ಈ ಸಂಬಂಧ ಅರ್ಚಕ ಶ್ರೀನಿವಾಸ್ ಬೆಳಕವಾಡಿ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣ ಪ್ರಸಾದ್ ಮಾರ್ಗದರ್ಶನದಲ್ಲಿ ಸಿಪಿಐ ಸಂತೋಷ್ ನೇತೃತ್ವದ ಪಿಎಸ್ಐ ಹನುಮಂತು, ಮಹದೇವಪ್ಪ, ಎಎಸ್ಐ ರಾಜು, ಸಿಬ್ಬಂದಿ ಗಳಾದ ಮಾದೇಶ, ನಾಗೇಂದ್ರಖಾನ್ರ ತಂಡ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ವಿಹೆಚ್ಪಿ ಹಾಗೂ ಭಜರಂಗದಳ ಮಂದಿರ ಚಲೋ ಕರೆ: ಶ್ರೀರಂಗಪಟ್ಟಣ ಮಸೀದಿ ಸುತ್ತ ನಿಷೇಧಾಜ್ಞೆ
ಆರೋಪಿಗಳ ಬಂಧನದಿಂದ ಕೆಸ್ತೂರು ಠಾಣೆ ವ್ಯಾಪ್ತಿಯ ಶಾಲೆ, ಮನೆ ಕಳ್ಳತನ, ಸಾತನೂರು ಠಾಣೆಯ ಬೈಕ್ ಕಳ್ಳತನ, ಎಡಮಾರನಹಳ್ಳಿ, ದೊಡ್ಡಆಲಹಳ್ಳಿ ಸೇರಿ 7 ಪ್ರಕರಣ ಬೆಳಕಿಗೆ ಬಂದಿವೆ. ಬೆಳಕವಾಡಿ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ