ಎತ್ತಿನಗಾಡಿಗೆ ಬಸ್ ಡಿಕ್ಕಿ: ಪರಿಹಾರಕ್ಕಾಗಿ ಪ್ರತಿಭಟನೆ
Team Udayavani, Oct 14, 2019, 3:41 PM IST
ಭಾರತೀನಗರ: ಸಾರಿಗೆ ಬಸ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿ ಜಖಂಗೊಂಡು ಎತ್ತು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಯಡಗನಹಳ್ಳಿ ಗ್ರಾಮದ ರೈತ ಆನಂದ್ ಎಂಬುವವರ ಎತ್ತಿನಗಾಡಿ ಜಖಂಗೊಂಡಿರುವುದು.
ಇಲ್ಲಿನ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ರೈತ ಆನಂದ್ ಎತ್ತಿನ ಗಾಡಿಯಲ್ಲಿ ಕಬ್ಬು ತುಂಬಿಕೊಂಡು ಬರುತ್ತಿದ್ದಾಗ ಸಾರಿಗೆ ಬಸ್ ಕೆಎ 57 ಎಫ್ 2849 ಡಿಕ್ಕಿಹೊಡೆದಿದ್ದರಿಂದ ಗಾಡಿ ಜಖಂಗೊಂಡು ಎತ್ತು ತೀವ್ರವಾಗಿ ಪೆಟ್ಟುಬಿದ್ದಿದೆ. ಇದರಿಂದ ಕುಪಿತಗೊಂಡ ರೈತ ಆನಂದ್ ಸ್ಥಳದಲ್ಲೇ ಕಬ್ಬು ತುಂಬಿದ ಗಾಡಿಯನ್ನು ನಿಲ್ಲಿಸಿ, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇದಕ್ಕೆ ಕಾರ್ಖಾನೆಗೆ ಸರಬರಾಜು ಮಾಡುತ್ತಿದ್ದ ಎತ್ತಿನ ಗಾಡಿಯ ಎಲ್ಲಾ ರೈತರು ಮದ್ದೂರು-ಮಳವಳ್ಳಿ ಮುಖ್ಯರಸ್ತೆಯನ್ನು ಕಬ್ಬು ತುಂಬಿದ ಎತ್ತಿನ ಗಾಡಿಯನ್ನು ರಸ್ತೆ ಮಧ್ಯೆದಲ್ಲಿ ನಿಲ್ಲಿಸುವ ಮೂಲಕ ಸಂಚಾರಕ್ಕೆ ಬಂದ್ಗೊಳಿಸಿ ಪ್ರತಿಭಟನೆ ನಡೆಸಿದರು. ಗಾಯಗೊಂಡ ಎತ್ತನ್ನು ಡಿಕ್ಕಿಹೊಡೆದ ಸಾರಿಗೆ ಬಸ್ಗೆ ಕಟ್ಟಿನಿಲ್ಲಿಸಿ ಪರಿಹಾರ ಕೊಡುವವರೆವಿಗೂ ಇಲ್ಲಿಂದ ಜರುಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಸಾಲು-ಸಾಲು ವಾಹನಗಳ ಸಂಚಾರ ಸ್ಥಗಿತಗೊಂಡಿತು. ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳಕ್ಕೆ ಸಿಪಿಐ ಮಂಜುನಾಥ್ ಧಾವಿಸಿ, ಗಾಡಿ ಮಾಲಿಕರೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಒಂದು ಗಂಟೆಗೂ ಹೆಚ್ಚು ತಾಸು ಸಂಚಾರ ಸ್ಥಗಿತಗೊಂಡಿದ್ದರಿಂದ ವಾಹನಗಳ ದಟ್ಟಣೆ ಹೆಚ್ಚಾಯಿತು. ನಂತರ ವಾಹನಗಳನ್ನು ಪರ್ಯಾಯ ಮಾರ್ಗವಾಗಿ ಕಳುಹಿಸಲು ಪೊಲೀಸರು ಮುಂದಾದರು. ಕೆ.ಎಂ.ದೊಡ್ಡಿ ಪೊಲೀಸರು ಸಾರಿಗೆ ಬಸ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್