ವದೇಸಮುದ್ರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರ
Team Udayavani, Nov 26, 2018, 6:00 AM IST
ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದ ಬಳಿ ವಿಶ್ವೇಶ್ವರಯ್ಯ ನಾಲೆಗೆ ಖಾಸಗಿ ಬಸ್ ಉರುಳಿ ಮೃತಪಟ್ಟಿದ್ದ ವದೇಸಮುದ್ರ ಗ್ರಾಮದ ಎಂಟು ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಾನುವಾರ ನೆರವೇರಿತು.
ದುರಂತದಲ್ಲಿ ಸಾವನ್ನಪ್ಪಿದ ರವಿಕುಮಾರ್, ಕಮಲಮ್ಮ, ರತ್ನಮ್ಮ, ಶಶಿಕಲಾ, ಚಿಕ್ಕಯ್ಯ, ಪ್ರಶಾಂತ್, ಕರಿಯಪ್ಪ ಹಾಗೂ ಪವಿತ್ರಾ ಅವರ ಅಂತ್ಯಕ್ರಿಯೆಯನ್ನು ಊರಿನ ಸಾರ್ವಜನಿಕ ರುದ್ರಭೂಮಿಯಲ್ಲಿ ಮಾಡಲಾಯಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕುಟುಂಬದವರು, ಸಂಬಂಧಿಕರ ದು:ಖದ ಕಟ್ಟೆಯೊಡೆದಿತ್ತು. ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು ಎಲ್ಲರನ್ನೂ ಶೋಕ ಸಾಗರದಲ್ಲಿ ಮುಳುಗಿಸಿದೆ.
ಎರಡು ಬಾರಿ ಪಾರು: ಅಪಘಾತಕ್ಕೀಡಾದ ರಾಜ್ಕುಮಾರ್ ಖಾಸಗಿ ಬಸ್ಸು ಈ ಹಿಂದೆ ಎರಡು ಬಾರಿ ಅಪಘಾತಕ್ಕೀಡಾಗಬೇಕಿತ್ತು. ಒಮ್ಮೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವುದರಲ್ಲಿತ್ತು, ಇನ್ನೊಮ್ಮೆ ಮರಕ್ಕೆ ಡಿಕ್ಕಿ ಹೊಡೆಯುವುದರಿಂದ ಸ್ವಲ್ಪದರಲ್ಲಿ ತಪ್ಪಿಸಿಕೊಂಡಿತ್ತು. ಖಾಸಗಿ ಬಸ್ ಚಾಲಕನ ಅಜಾಗರೂಕತೆಯನ್ನು ಕಂಡು ಗ್ರಾಮಸ್ಥರು ಎರಡು ಬಾರಿಯೂ ಥಳಿಸಿದ್ದರು. ನಂತರದಲ್ಲಿ ಸಾರಿಗೆ ಬಸ್ಗಳನ್ನು ಸಂಚಾರಕ್ಕೆ ಬಿಡುವಂತೆ ಆಗ್ರಹಿಸಿ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ