ರೈತರಿಂದ ತರಕಾರಿ ಖರೀದಿಸಿ ಮಾರಾಟ
ರಿಯಾಯಿತಿ ದರದಲ್ಲಿ ಮಾರುತ್ತಿರುವ ರೈತ ಉತ್ಪಾದಕ ಕಂಪನಿ
Team Udayavani, Apr 18, 2020, 2:16 PM IST
ಸಾಂದರ್ಭಿಕ ಚಿತ್ರ
ಮದ್ದೂರು: ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಮೂಲಕ ಸ್ಥಳೀಯರಿಗೆ ಅನುಕೂಲ ಕಲ್ಪಿಸಿರುವುದಾಗಿ ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಮೋಹನ್ಕುಮಾರ್ ಗೌಡ ತಿಳಿಸಿದರು.
ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ರೈತರಿಂದ ನೇರ ಖರೀದಿ ಮಾಡಿ ಗ್ರಾಹಕರಿಗೆ ತರಕಾರಿ ಮಾರಾಟ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೊರೊನಾ ಲಾಕ್ಡೌನ್ನಿಂದಾಗಿ ಬಹತೇಕ ಎಪಿಎಂಸಿ ಮಾರುಕಟ್ಟೆಗಳು ಬಂದ್ ಆಗಿವೆ. ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಕಂಪೆನಿ ಮುಂದಾಗಿದೆ. ಸುತ್ತಮುತ್ತಲ ರೈತರು ಈ ವ್ಯವಸ್ಥೆಯನ್ನು ಸದ್ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ಭೀಮನಕೆರೆ, ಕೊಕ್ಕರೆ ಬೆಳ್ಳೂರು, ಕೂಳಗೆರೆ, ಹಳ್ಳಿಕೆರೆ, ಡಿ.ಹೊಸೂರು ಇನ್ನಿತರೆ ಗ್ರಾಮಗಳಲ್ಲಿ ಬೆಳೆದಿರುವ ಟೊಮೆಟೊ, ಎಲೆಕೋಸು, ಬೀನ್ಸ್, ಹೀರೇಕಾಯಿ, ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರೆ ತರಕಾರಿ ಖರೀದಿಸಿ ರೈತರ ಸಂಕಷ್ಟಕ್ಕೆ ನೆರವಾಗಿದ್ದಾರೆ. ರೈತರು ಬೆಳೆದಿರುವ ಬೆಳೆಯನ್ನು
ನಾಶವಾಗದಂತೆ ಕಂಪೆನಿಗಳು ಮುಂದೆ ಬಂದು ವ್ಯವಸ್ಥೆ ಮಾಡಬೇಕೆಂದು ಹೇಳಿದರು. ಈ ವೇಳೆ ಕಂಪನಿ ನಿರ್ದೇಶಕರಾದ ಬ್ಯಾಡರಹಳ್ಳಿ ಶಿವಕುಮಾರ್,
ಜಯರಾಮು, ದೊರೆ, ಮಂಜುನಾಥ್, ದೇವರಾಜು, ಬಸವರಾಜು, ಸಿಇಒ ಚಾಂದಿನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು
Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ
HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್ ಶಾಸಕ ಉದಯ್
Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
MUST WATCH
ಹೊಸ ಸೇರ್ಪಡೆ
Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ